SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ

RRR Movie | Tollywood: ರಾಜಮೌಳಿ ಅವರ ಈ ಹೇಳಿಕೆಗೆ ಕೆಲವರು ತಕರಾರು ತೆಗೆದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

SS Rajamouli: ‘RRR ಬಾಲಿವುಡ್​ ಚಿತ್ರವಲ್ಲ’: ರಾಜಮೌಳಿ ಹೇಳಿಕೆಗೆ ಹಿಂದಿ ಮಂದಿ ಅಸಮಾಧಾನ
ಎಸ್ಎಸ್ ರಾಜಮೌಳಿ, ಆರ್​ಆರ್​ಆರ್​ ಸಿನಿಮಾ ಪೋಸ್ಟರ್​
Follow us
| Updated By: ಮದನ್​ ಕುಮಾರ್​

Updated on: Jan 15, 2023 | 5:17 PM

ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ‘ಬಾಹುಬಲಿ’, ‘ಆರ್​ಆರ್​ಆರ್​’ (RRR Movie) ಮುಂತಾದ ಸಿನಿಮಾಗಳಿಂದಾಗಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಇತ್ತೀಚೆಗೆ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ‘ಗೋಲ್ಡನ್​ ಗ್ಲೋಬ್​ 2023’ ಅವಾರ್ಡ್​ ಪಡೆದುಕೊಂಡ ನಂತರ ಬೇರೆ ಬೇರೆ ದೇಶಗಳ ಜನರು ತೆಲುಗು ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ಈಗ ‘ಆರ್​ಆರ್​ಆರ್​’ ಸಿನಿಮಾ ಆಸ್ಕರ್​ ಪ್ರಶಸ್ತಿ (Oscar Award) ಪಡೆಯಲು ಪ್ರಯತ್ನಿಸುತ್ತಿದೆ. ಈ ಸಂದರ್ಭದಲ್ಲಿ ರಾಜಮೌಳಿ ನೀಡಿದ ಒಂದು ಹೇಳಿಕೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಶುರುವಾಗಿದೆ. ‘ಆರ್​ಆರ್​ಆರ್​ ಬಾಲಿವುಡ್​ ಸಿನಿಮಾ’ ಅಲ್ಲ ಎಂದು ರಾಜಮೌಳಿ (SS Rajamouli) ಹೇಳಿದ್ದಾರೆ. ಈ ಹೇಳಿಕೆಯಿಂದಾಗಿ ಹಿಂದಿ ಪ್ರೇಕ್ಷಕರ ಪೈಕಿ ಕೆಲವರು ಅಸಮಾಧಾನಗೊಂಡಿದ್ದಾರೆ.

ಆಸ್ಕರ್ ಪ್ರಶಸ್ತಿಯ ಸ್ಪರ್ಧೆಯಲ್ಲಿ ‘ಆರ್​ಆರ್​ಆರ್​’ ಚಿತ್ರವನ್ನು ನಾಮಿನೇಟ್​ ಮಾಡಲು ಸಕಲ ಪ್ರಯತ್ನಗಳು ನಡೆಯುತ್ತಿವೆ. ‘ಫಾರ್​ ಯುವರ್​ ಕನ್ಸಿಡರೇಷನ್​’ ಕ್ಯಾಂಪೇನ್​ ಮೂಲಕ ಈ ಚಿತ್ರವನ್ನು ಆಸ್ಕರ್​ಗೆ ಕಳಿಸುವ ಕಸರತ್ತು ನಡೆಯುತ್ತಿವೆ. ಅದರ ಅಂಗವಾಗಿ ಇತ್ತೀಚೆಗೆ ಅಮೆರಿಕದಲ್ಲಿ ಈ ಸಿನಿಮಾದ ಪ್ರದರ್ಶನ ಮತ್ತು ಸಂವಾದ ನಡೆಯಿತು. ಸಿನಿಮಾ ಬಿತ್ತರ ಆಗುವುದಕ್ಕೂ ಮುನ್ನ ರಾಜಮೌಳಿ ಮಾತನಾಡಿದರು. ‘ಇದು ಬಾಲಿವುಡ್​ ಸಿನಿಮಾ ಅಲ್ಲ. ದಕ್ಷಿಣ ಭಾರತದ ತೆಲುಗು ಭಾಷೆಯ ಸಿನಿಮಾ ಇದು. ಅಲ್ಲಿಂದಲೇ ನಾನು ಬಂದಿರುವುದು. ಸಿನಿಮಾದ ಕಥೆಯನ್ನು ಮುಂದುವರಿಸಲು ನಾನು ಹಾಡುಗಳನ್ನು ಬಳಸುತ್ತೇನೆ’ ಎಂದು ರಾಜಮೌಳಿ ಹೇಳಿದ್ದಾರೆ.

ಇದನ್ನೂ ಓದಿ: Natu Natu Song: ಯುದ್ಧ ಶುರು ಆಗೋದಕ್ಕೂ ಮುನ್ನ ಉಕ್ರೇನ್​ನಲ್ಲಿ ‘ನಾಟು ನಾಟು..’ ಸಾಂಗ್​ ಶೂಟಿಂಗ್​ ಮಾಡಿದ್ದ ರಾಜಮೌಳಿ

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

ರಾಜಮೌಳಿ ಅವರ ಈ ಹೇಳಿಕೆಗೆ ಕೆಲವರು ತಕಾರಾರು ತೆಗೆದಿದ್ದಾರೆ. ‘ಆರ್​ಆರ್​ಆರ್​ ನಾಮಿನೇಟ್​ ಆಗುವುದು ಭಾರತದಿಂದಲೇ ಹೊರತು ಸೌತ್​ ಇಂಡಿಯಾ ಅಥವಾ ತೆಲುಗು ಚಿತ್ರರಂಗದಿಂದ ಅಲ್ಲ. ಪ್ರದೇಶ ಮತ್ತು ಭಾಷೆಗಳ ವಿಚಾರದಲ್ಲಿ ಪಕ್ಷಪಾತ ಬೇಡ. ಬಾಲಿವುಡ್ ಎಂದರೆ ಒಂದು ಚಿತ್ರರಂಗವಲ್ಲ. ಅದು ಭಾರತವನ್ನು ಪ್ರತಿನಿಧಿಸುತ್ತದೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಆದರೆ ಈ ಮಾತಿನಲ್ಲಿ ತರ್ಕವೇ ಇಲ್ಲ ಎಂದು ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Rajamouli: ರಾಜಮೌಳಿಯ ಹಾಲಿವುಡ್​ ಪ್ಲ್ಯಾನ್​ ಏನು? ಕೇಳಿಬಂತು ಎರಡು ಅಚ್ಚರಿಯ ಸುದ್ದಿ 

‘ಭಾರತದಿಂದ ಬಂದ ಎಲ್ಲ ಸಿನಿಮಾಗಳನ್ನೂ ಬಾಲಿವುಡ್​ ಚಿತ್ರಗಳು ಎಂದು ಯಾಕೆ ಹಣೆಪಟ್ಟಿ ಕಟ್ಟಬೇಕು’ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ. ‘ಬಾಲಿವುಡ್​ನಲ್ಲಿ ಉತ್ತಮ ಸಿನಿಮಾಗಳು ಬರುತ್ತವೆ ಎಂಬುದು ನಿಜ. ಅದೇ ರೀತಿ ಸೌತ್​ ಇಂಡಿಯಾದಿಂದ ಒಳ್ಳೆಯ ಸಿನಿಮಾಗಳು ಬಂದಾಗ ಅವರಿಗೂ ಕ್ರೆಡಿಟ್​ ಸಿಗಬೇಕು’ ಎಂದು ಹಲವರು ಹೇಳಿದ್ದಾರೆ. ಆ ಮೂಲಕ ರಾಜಮೌಳಿ ಮಾತಿಗೆ ಬೆಂಬಲ ಸೂಚಿಸಿದ್ದಾರೆ. ಪರ-ವಿರೋಧ ಏನೇ ಇರಲಿ, ಭಾರತದ ಸಿನಿಮಾಗೆ ಆಸ್ಕರ್​ ಸಿಗಲಿ ಎಂದು ಸಿನಿಪ್ರಿಯರು ಬಯಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ