AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ತಂಡ 60 ಲಕ್ಷ ರೂ. ಕೊಟ್ಟು ಆಸ್ಕರ್​ ಸಮಾರಂಭದ ಟಿಕೆಟ್​ ಪಡೆಯಿತಾ? ಬಯಲಾಯ್ತು ಬೇರೆ ಸತ್ಯ

ಎಂಎಂ ಕೀರವಾಣಿ ಮತ್ತು ಚಂದ್ರಬೋಸ್​ ಅವರಿಗೆ ಮಾತ್ರ ಉಚಿತ ಪಾಸ್​ ನೀಡಲಾಯಿತು. ಇನ್ನುಳಿದವರು ಸ್ವಂತ ಹಣ ಖರ್ಚು ಮಾಡಿ ಪಾಸ್​ ಪಡೆದಿದ್ದು ನಿಜ ಎಂದು ಕಾರ್ತಿಕೇಯ ಹೇಳಿದ್ದಾರೆ. ಆದರೆ..

RRR ತಂಡ 60 ಲಕ್ಷ ರೂ. ಕೊಟ್ಟು ಆಸ್ಕರ್​ ಸಮಾರಂಭದ ಟಿಕೆಟ್​ ಪಡೆಯಿತಾ? ಬಯಲಾಯ್ತು ಬೇರೆ ಸತ್ಯ
ಜೂನಿಯರ್​ ಎನ್​ಟಿಆರ್​, ರಾಮ್​ ಚರಣ್​
ಮದನ್​ ಕುಮಾರ್​
|

Updated on:Mar 28, 2023 | 11:05 AM

Share

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ (RRR Movie) ಸಿನಿಮಾದಲ್ಲಿನ ‘ನಾಟು ನಾಟು..’ ಹಾಡು ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದೆ.  ಭಾರತಕ್ಕೆ ಆಸ್ಕರ್​ ತಂದುಕೊಟ್ಟ ಈ ಸಾಂ​ಗ್​ ಎಲ್ಲರಿಗೂ ಅಚ್ಚುಮೆಚ್ಚು. ಆಸ್ಕರ್​ ಸಮಾರಂಭ ಮುಗಿದು ಹಲವು ದಿನ ಕಳೆದಿದೆ. ಆದರೆ ಅದರ ಸುತ್ತ ಹಬ್ಬಿರುವ ಗಾಸಿಪ್​ಗಳು ಇನ್ನೂ ನಿಂತಿಲ್ಲ. ಆಸ್ಕರ್​ (Oscar Awards) ಪಡೆಯಲು ‘ಆರ್​ಆರ್​ಆರ್​’ ತಂಡದವರು 80 ಕೋಟಿ ರೂಪಾಯಿ ಖರ್ಚು ಮಾಡಿದ್ದರು ಎನ್ನಲಾಗಿತ್ತು. ಆದರೆ ಆ ಮಾಹಿತಿಯನ್ನು ಚಿತ್ರತಂಡ ತಳ್ಳಿಹಾಕಿದೆ. ಅಷ್ಟೇ ಅಲ್ಲ, ಆಸ್ಕರ್​ ಕಾರ್ಯಕ್ರಮದ ಟಿಕೆಟ್​ ಪಡೆಯಲು ರಾಮ್​ ಚರಣ್​ ಅವರು ಬರೋಬ್ಬರಿ 60 ಲಕ್ಷ ರೂಪಾಯಿ ವ್ಯಯಿಸಿದ್ದರು ಎಂಬ ಗಾಸಿಪ್ ಕೂಡ ಕೇಳಿಬಂದಿತ್ತು. ಆ ಬಗ್ಗೆ ರಾಜಮೌಳಿ ಅವರ ಪುತ್ರ ಎಸ್​ಎಸ್​ ಕಾರ್ತಿಕೇಯ (SS Karthikeya) ಮೌನ ಮುರಿದಿದ್ದಾರೆ.

ಆಸ್ಕರ್​ನ ಹಲವು ವಿಭಾಗಗಳಲ್ಲಿ ನಾಮಿನೇಟ್​ ಆಗಬೇಕು ಎಂಬುದು ‘ಆರ್​ಆರ್​ಆರ್​’ ತಂಡದ ಉದ್ದೇಶ ಆಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಅಂತಿಮವಾಗಿ ‘ನಾಟು ನಾಟು..’ ಹಾಡು ಮಾತ್ರ ನಾಮಿನೇಟ್​ ಆಯಿತು. ಹಾಗಾಗಿ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಮತ್ತು ಗೀತರಚನಕಾರ ಚಂದ್ರಬೋಸ್​ ಹಾಗೂ ಅವರ ಪತ್ನಿಯರಿಗೆ ಮಾತ್ರ ಉಚಿತ ಪಾಸ್​ ನೀಡಲಾಯಿತು. ಇನ್ನುಳಿದವರು ಸ್ವಂತ ಹಣ ಖರ್ಚು ಮಾಡಿ ಪಾಸ್​ ಪಡೆದಿದ್ದು ನಿಜ ಎಂದು ಕಾರ್ತಿಕೇಯ ಹೇಳಿದ್ದಾರೆ. ಆದರೆ 60 ಲಕ್ಷ ಖರ್ಚು ಮಾಡಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: MM Keeravani: ‘ನನಗೆ ಆಸ್ಕರ್​ ಸಿಕ್ಕಿದ್ದು ಇದೇ ಮೊದಲೇನಲ್ಲ’: 30 ವರ್ಷದ ಹಿಂದಿನ ವಿಷಯ ತೆರೆದಿಟ್ಟ ಎಂಎಂ ಕೀರವಾಣಿ

ಇದನ್ನೂ ಓದಿ
Image
Oscar 2023 Winners List: ಈ ವರ್ಷ ಆಸ್ಕರ್ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Image
Oscar 2023: ಆಸ್ಕರ್ ಗೆದ್ದು ಬೀಗಿದ ‘ನಾಟು ನಾಟು..’ ಹಾಡು; ರಾಜಮೌಳಿ ಚಿತ್ರಕ್ಕೆ ಮತ್ತೊಂದು ಕಿರೀಟ
Image
The Elephant Whisperers: ಭಾರತಕ್ಕೆ ಆಸ್ಕರ್​: ‘ದಿ ಎಲಿಫೆಂಟ್​ ವಿಸ್ಪರರ್ಸ್​’ಗೆ ಅಕಾಡೆಮಿ ಪ್ರಶಸ್ತಿ 
Image
Ram Charan: ‘ಭಾರತೀಯರಿಗೆ ಆಸ್ಕರ್​ ಪ್ರಶಸ್ತಿ ಅಂದ್ರೆ ಒಲಂಪಿಕ್ಸ್​ ಗೋಲ್ಡ್​ ಮೆಡಲ್​ ಇದ್ದಂಗೆ’: ರಾಮ್​ ಚರಣ್​

ರಾಜಮೌಳಿ, ಜೂನಿಯರ್​ ಎನ್​ಟಿಆರ್​, ರಾಮ್​ ಚರಣ್​ ಹಾಗೂ ಅವರ ಕುಟುಂಬದವರಿಗೆ ಉಚಿತ ಪಾಸ್​ ಸಿಗಲಿಲ್ಲ. ಹಾಗಾಗಿ ತಲಾ 1.2 ಲಕ್ಷ ರೂಪಾಯಿ ಹಣ ನೀಡಿ ಪಾಸ್​ ಪಡೆಯಲಾಯಿತು. ಅದಕ್ಕಾಗಿ 60 ಲಕ್ಷ ರೂಪಾಯಿ ಖರ್ಚು ಮಾಡಿದ್ದು ನಿಜವಲ್ಲ ಎಂದು ಕಾರ್ತಿಕೇಯ ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಇದನ್ನೂ ಓದಿ: DVV Danayya: ‘ಆಸ್ಕರ್​ಗಾಗಿ​ ನಾನು ದುಡ್ಡು ಕೊಟ್ಟಿಲ್ಲ, ಅಲ್ಲಿ ಏನಾಯ್ತೋ ಗೊತ್ತಿಲ್ಲ’: ‘ಆರ್​ಆರ್​ಆರ್​’ ನಿರ್ಮಾಪಕ ದಾನಯ್ಯ

80 ಕೋಟಿ ರೂಪಾಯಿ ಸುರಿದು ಪ್ರಚಾರ ಮಾಡುವ ಮೂಲಕ ಆಸ್ಕರ್​ ಪಡೆಯಲು ರಾಜಮೌಳಿ ಪ್ರಯತ್ನಿಸಿದ್ದಾರೆ ಎಂದು ತೆಲುಗಿನ ನಿರ್ಮಾಪಕ ತಮ್ಮಾರೆಡ್ಡಿ ಭಾರದ್ವಜ ಅವರು ಈ ಹಿಂದೆ ಆರೋಪಿಸಿದ್ದರು. ಆದರೆ ಅವರ ಮಾತನ್ನು ಹಿರಿಯ ನಿರ್ದೇಶಕ ಕೆ. ರಾಘವೇಂದ್ರ ರಾವ್​ ಅವರು ತಳ್ಳಿಹಾಕಿದ್ದರು. ‘ನಲ್ಮೆಯ ಸ್ನೇಹಿತ ಭಾರದ್ವಜ ಅವರೇ.. ತೆಲುಗು ಸಿನಿಮಾ, ಸಾಹಿತ್ಯ, ನಟರು ಮತ್ತು ನಿರ್ದೇಶಕರಿಗೆ ಆರ್​ಆರ್​ಆರ್​ ಚಿತ್ರವು ಕೀರ್ತಿ ತಂದುಕೊಟ್ಟಿದ್ದಕ್ಕಾಗಿ ನಾವೆಲ್ಲರೂ ಹೆಮ್ಮೆಪಡಬೇಕು. ಖರ್ಚು ಮಾಡಿದ ಹಣದ ಬಗ್ಗೆ ನಿಮ್ಮ ಬಳಿ ಲೆಕ್ಕ ಇದೆಯಾ? ಲೆಜೆಂಡರಿ ನಿರ್ದೇಶಕರಾದ ಜೇಮ್ಸ್​ ಕ್ಯಾಮೆರಾನ್​ ಮತ್ತು ಸ್ಟೀವಲ್​ ಸ್ಪೀಲ್​ಬರ್ಗ್​ ಅವರು ಹಣ ತೆಗೆದುಕೊಂಡು ಆರ್​ಆರ್​ಆರ್​ ಸಿನಿಮಾವನ್ನು ಹೊಗಳಿದರು ಎಂಬುದು ನಿಮ್ಮ ಅಭಿಪ್ರಾಯವೇ?’ ಎಂದು ಕೆ. ರಾಘವೇಂದ್ರ ರಾವ್​ ಅವರು ಟ್ವೀಟ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:05 am, Tue, 28 March 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!