AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘RRR’ ಆಸ್ಕರ್ ಕ್ಯಾಂಪೇನ್​ಗೆ ರಾಜಮೌಳಿ ಖರ್ಚು ಮಾಡಿದ ಹಣದಲ್ಲಿ ಮತ್ತೊಂದು ‘ಕೆಜಿಎಫ್’ ಸಿನಿಮಾ ನಿರ್ಮಿಸಬಹುದು

ಆಸ್ಕರ್​, ಗೋಲ್ಡನ್ ಗ್ಲೋಬ್ಸ್ ಮೊದಲಾದ ಪ್ರಶಸ್ತಿಗಳು ಹಾಲಿವುಡ್​ ಅವಾರ್ಡ್​ಗಳು. ಇಲ್ಲಿ ಭಾರತದ ಸಿನಿಮಾಗಳು ರೇಸ್​ಗೆ ಇಳಿಯೋದು, ಪ್ರಶಸ್ತಿ ಬಾಚಿಕೊಳ್ಳೋದು ಅಷ್ಟು ಸುಲಭದ ಮಾತಲ್ಲ.

‘RRR’ ಆಸ್ಕರ್ ಕ್ಯಾಂಪೇನ್​ಗೆ ರಾಜಮೌಳಿ ಖರ್ಚು ಮಾಡಿದ ಹಣದಲ್ಲಿ ಮತ್ತೊಂದು ‘ಕೆಜಿಎಫ್’ ಸಿನಿಮಾ ನಿರ್ಮಿಸಬಹುದು
ರಾಜಮೌಳಿ
TV9 Web
| Edited By: |

Updated on: Mar 04, 2023 | 11:04 AM

Share

ರಾಜಮೌಳಿ (SS Rajamouli) ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರ ದಾಖಲೆ ಮೇಲೆ ದಾಖಲೆ ಸೃಷ್ಟಿ ಮಾಡುತ್ತಲೇ ಇದೆ. ವಿದೇಶಿ ನೆಲದಲ್ಲಿ ಈ ಸಿನಿಮಾ ಪ್ರಶಸ್ತಿ ಬಾಚಿಕೊಳ್ಳುತ್ತಿದೆ. ‘ಗೋಲ್ಡನ್ ಗ್ಲೋಬ್’​ ಸೇರಿ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳನ್ನು ಸಿನಿಮಾ ಗೆದ್ದಿದೆ. ಈ ಚಿತ್ರ ಆಸ್ಕರ್​ ರೇಸ್​ನಲ್ಲೂ ಇದೆ. ವಿದೇಶಿ ನೆಲದಲ್ಲಿ ಪ್ರಶಸ್ತಿ ಗೆಲ್ಲಬೇಕು ಎಂದರೆ ದೊಡ್ಡ ಮಟ್ಟದ ಕ್ಯಾಂಪೇನ್ ಮಾಡಬೇಕು. ಇದಕ್ಕಾಗಿ ರಾಜಮೌಳಿ (SS Rajamouli) ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ವರದಿ ಆಗಿದೆ.

ಆಸ್ಕರ್​, ಗೋಲ್ಡನ್ ಗ್ಲೋಬ್ಸ್ ಮೊದಲಾದ ಪ್ರಶಸ್ತಿಗಳು ಹಾಲಿವುಡ್​ ಅವಾರ್ಡ್​ಗಳು. ಇಲ್ಲಿ ಭಾರತದ ಸಿನಿಮಾಗಳು ರೇಸ್​ಗೆ ಇಳಿಯೋದು, ಪ್ರಶಸ್ತಿ ಬಾಚಿಕೊಳ್ಳೋದು ಅಷ್ಟು ಸುಲಭದ ಮಾತಲ್ಲ. ಆದಾಗ್ಯೂ, ‘ಆರ್​ಆರ್​ಆರ್​’ ಸಿನಿಮಾ ಸಾಲು ಸಾಲು ಪ್ರಶಸ್ತಿಗಳನ್ನು ಗೆಲ್ಲುತ್ತಿದೆ. ‘ಹಾಲಿವುಡ್​ ಕ್ರಿಟಿಕ್ಸ್ ಅಸೋಸಿಯೇಷನ್ ಅವಾರ್ಡ್​’, ‘ಗೋಲ್ಡನ್​ ಗ್ಲೋಬ್’ ಅವಾರ್ಡ್​​ಗಳನ್ನು ಚಿತ್ರ ಪಡೆದಿದೆ. ಇದಕ್ಕಾಗಿ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಹಣವನ್ನು ನೀರಿನಂತೆ ಖರ್ಚು ಮಾಡಿದ್ದಾರೆ.

‘ಆಸ್ಕರ್​ 2023’ಕ್ಕೆ ‘ಆರ್​ಆರ್​ಆರ್’ ಅಧಿಕೃತವಾಗಿ ಆಯ್ಕೆ ಆಗಿದ್ದಲ್ಲ. ಅವರು ‘ಫಾರ್ ಯುವರ್ ಕನ್ಸಿಡರೇಷನ್​’ ಕ್ಯಾಂಪೇನ್ ಮಾಡಿ ಇಲ್ಲಿಗೆ ಎಂಟ್ರಿ ಪಡೆದಿದ್ದಾರೆ. ಎಲ್ಲಾ ಪ್ರಶಸ್ತಿಗಳಿಗೆ ಅವರು ಎಂಟ್ರಿ ನೀಡಿದ್ದು ಹೀಗೆಯೇ. ಇದಕ್ಕಾಗಿ ರಾಜಮೌಳಿ ಖರ್ಚು ಮಾಡಿದ ಹಣ ಬರೋಬ್ಬರಿ 83 ಕೋಟಿ ರೂಪಾಯಿ! ಈ ಹಣದಲ್ಲಿ ಮತ್ತೊಂದು ‘ಕೆಜಿಎಫ್​’ ಚಿತ್ರ ನಿರ್ಮಾಣ ಮಾಡಬಹುದು ಎನ್ನುವ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ. ಹಾಗಂತ ರಾಜಮೌಳಿ ಅವರು ಇದಕ್ಕಾಗಿ ನಿರ್ಮಾಪಕರ ಬಳಿ ಹೋಗಿಲ್ಲ. ತಮ್ಮ ವೈಯಕ್ತಿಕ ಖಾತೆಯಿಂದಲೇ ಹಣ ಬಳಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ
Image
ಮಹೇಶ್ ಬಾಬು ಜಿಮ್​ನಲ್ಲಿ ವರ್ಕೌಟ್ ಮಾಡ್ತಿರೋ ಫೋಟೋ ಹಿಂದಿದೆ ದೊಡ್ಡ ಹಿಂಟ್
Image
SS Rajamouli: ‘ಅಜೆಂಡಾ ಇಟ್ಟುಕೊಂಡು ಸಿನಿಮಾ ಮಾಡ್ತಾರೆ’ ಎಂದವರಿಗೆ ರಾಜಮೌಳಿ ಕೊಟ್ರು ತಿರುಗೇಟು
Image
ಹಾಲಿವುಡ್​ ಅವಾರ್ಡ್​ ಫಂಕ್ಷನ್​ಗೆ ಜೂ.ಎನ್​ಟಿಆರ್​ಗೆ ಇರಲಿಲ್ಲ ಆಹ್ವಾನ? ಸ್ಪಷ್ಟನೆ ನೀಡಿದ ಆಯೋಜಕರು

ಇದನ್ನೂ ಓದಿ: SS Rajamouli: ‘ಅಜೆಂಡಾ ಇಟ್ಟುಕೊಂಡು ಸಿನಿಮಾ ಮಾಡ್ತಾರೆ’ ಎಂದವರಿಗೆ ರಾಜಮೌಳಿ ಕೊಟ್ರು ತಿರುಗೇಟು

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ರಾಜಮೌಳಿ ಅವರು ಹಾಲಿವುಡ್​ನಲ್ಲಿ ಸಿನಿಮಾ ಮಾಡುವ ಪ್ಲ್ಯಾನ್​ನಲ್ಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕಾಗಿ ಅವರು ಇಷ್ಟು ಹಣ ಖರ್ಚು ಮಾಡಿ ಹಾಲಿವುಡ್ ಅಂಗಳದಲ್ಲಿ ಸುದ್ದಿ ಆಗುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ. ಹಾಲಿವುಡ್​ನಲ್ಲಿ ಅವರು ಸಿನಿಮಾ ಮಾಡೋಕೆ ಮುಂದಾದರೆ ಸಹಾಯ ಮಾಡುವುದಾಗಿ ಇಂಗ್ಲಿಷ್​ನ ದೊಡ್ಡ ದೊಡ್ಡ ನಿರ್ದೇಶಕರು ಭರವಸೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್