Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ‘ಆದಿಪುರುಷ್’ ಚಿತ್ರದಿಂದ ಪಾಠ ಕಲಿತ ರಾಜಮೌಳಿ? ಏನಿದು ಸಮಾಚಾರ?

ಮಹಾಭಾರತ ಆಧರಿಸಿ ರಾಜಮೌಳಿ ಸಿನಿಮಾ ಮಾಡಲಿದ್ದಾರೆ. ‘ಆದಿಪುರುಷ್’ ಚಿತ್ರತಂಡದಿಂದ ಆದ ತಪ್ಪಿನಿಂದ ರಾಜಮೌಳಿ ಪಾಠ ಕಲಿತಿದ್ದಾರಂತೆ.

SS Rajamouli: ‘ಆದಿಪುರುಷ್’ ಚಿತ್ರದಿಂದ ಪಾಠ ಕಲಿತ ರಾಜಮೌಳಿ? ಏನಿದು ಸಮಾಚಾರ?
ರಾಜಮೌಳಿ-ಆದಿಪುರುಷ್
Follow us
ರಾಜೇಶ್ ದುಗ್ಗುಮನೆ
|

Updated on: Jul 12, 2023 | 6:30 AM

ನಿರ್ದೇಶಕ ಎಸ್​​ಎಸ್​ ರಾಜಮೌಳಿ (SS Rajamouli) ‘ಬಾಹುಬಲಿ’ ಸರಣಿ ಮತ್ತು ‘ಆರ್‌ಆರ್‌ಆರ್’ ಸಿನಿಮಾಗಳ ಮೂಲಕ ವಿಶ್ವಾದ್ಯಂತ ಮನ್ನಣೆ ಗಳಿಸಿದ್ದಾರೆ. ‘ಆರ್‌ಆರ್‌ಆರ್‌’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಕೂಡ ಸಿಕ್ಕಿದೆ. ಹಾಲಿವುಡ್‌ನ ಖ್ಯಾತ ನಿರ್ದೇಶಕರಾದ ಸ್ಟಿವನ್ ಸ್ಪೀಲ್​ಬರ್ಗ್ ಮತ್ತು ಜೇಮ್ಸ್ ಕ್ಯಾಮೆರಾನ್ ಕೂಡ ರಾಜಮೌಳಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈಗ ರಾಜಮೌಳಿ ಅವರು ಮಹೇಶ್ ಬಾಬು Mahesh Babu)  ಜೊತೆಗೆ ಮಾಡಲಿರುವ ‘SSMB 29’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದಾದ ಬಳಿಕ ಮಹಾಭಾರತ ಆಧರಿಸಿ ಸಿನಿಮಾ ಮಾಡಲಿದ್ದಾರೆ. ‘ಆದಿಪುರುಷ್’ ಚಿತ್ರತಂಡದಿಂದ ಆದ ತಪ್ಪನ್ನು ರಾಜಮೌಳಿ ಪಾಠ ಕಲಿತಿದ್ದಾರಂತೆ.

ರಾಜಮೌಳಿ ಈ ಹಿಂದೆ ಮಹಾಭಾರತ ಬಗ್ಗೆ ಹೇಳಿಕೆ ನೀಡಿದ್ದರು. ‘ಅದು ನನ್ನ ಕನಸಿನ ಯೋಜನೆ’ ಎಂದಿದ್ದರು. ‘ಭಾರತೀಯ ಮಹಾಕಾವ್ಯಗಳ ಬಗ್ಗೆ ಜಗತ್ತಿಗೆ ಹೇಳಬೇಕು. ಮಹಾಭಾರತ ನನ್ನ ಬಹುಕಾಲದ ಯೋಜನೆ. ಅದು ಸಾಗರ ಇದ್ದಂತೆ. ಅದರೊಳಗೆ ಪ್ರವೇಶಿಸಲು ಬಹಳ ಸಮಯ ಬೇಕು. ಮಹಾಭಾರತ ಮಾಡಿದರೆ ನಾನು ಹತ್ತು ಭಾಗದಲ್ಲಿ ಅದನ್ನು ತರಬೇಕು’ ಎಂದಿದ್ದರು. ಈ ಬಗ್ಗೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ. 2025ರ ಬಳಿಕ ಈ ಚಿತ್ರವನ್ನು ರಾಜಮೌಳಿ ಕೈಗೆತ್ತಿಕೊಳ್ಳಲಿದ್ದಾರಂತೆ.

ಆದರೆ ಮಹಾಭಾರತವನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸುವುದು ಅಷ್ಟು ಸುಲಭದ ಮಾತಲ್ಲ. ಇತ್ತೀಚೆಗಷ್ಟೇ ರಿಲೀಸ್ ಆದ ‘ಆದಿಪುರುಷ್’ ಚಿತ್ರದ ಬಗ್ಗೆ ಸಾಕಷ್ಟು ವಿವಾದ ಹುಟ್ಟಿಕೊಂಡಿತ್ತು. ರಾಮಾಯಣ ಆಧಾರಿತ ಈ ಸಿನಿಮಾದ ಮೂಲ ಉದ್ದೇಶ ತಪ್ಪಿದ್ದರಿಂದ ನಿರ್ದೇಶಕ ಓಂ ರಾವತ್ ಬಗ್ಗೆ ಟೀಕೆ ವ್ಯಕ್ತವಾಯಿತು. ಈ ಸಿನಿಮಾವನ್ನು ಬ್ಯಾನ್ ಮಾಡಬೇಕೆಂಬ ಒತ್ತಾಯವೂ ಕೇಳಿಬಂದಿತ್ತು.

ಹೀಗಿರುವಾಗಲೇ ರಾಜಮೌಳಿ ಅವರು ಭಾರತದ ಮತ್ತೊಂದು ಮಹಾಕಾವ್ಯವಾದ ಮಹಾಭಾರತವನ್ನು ತೆರೆಗೆ ತರಲು ಮುಂದಾಗಿದ್ದಾರೆ. ‘ಆರ್‌ಆರ್‌ಆರ್’ ಸಿನಿಮಾ ಬಹುತೇಕ ಕಾಲ್ಪನಿಕ ಕಥೆ ಆಗಿತ್ತು. ಹೀಗಾಗಿ ರಾಜಮೌಳಿಗೆ ಸ್ವಾತಂತ್ರ್ಯ ಇತ್ತು. ಆದರೆ, ‘ಮಹಾಭಾರತ’ದಲ್ಲಿ ಹೀಗಾಗುವುದಿಲ್ಲ. ಎಲ್ಲರಿಗೂ ಗೊತ್ತಿರುವ ವಿಚಾರವನ್ನೇ ಮತ್ತೊಮ್ಮೆ ಹೇಳಬೇಕು ಎಂದರೆ ಅದು ನಿಜಕ್ಕೂ ಚಾಲೆಂಜಿಂಗ್.

ಇದನ್ನೂ ಓದಿ: ‘ಆದಿಪುರುಷ್’ ಚಿತ್ರಕ್ಕೆ ಮತ್ತೊಂದು ಶಾಕ್; ಒಟಿಟಿ ರಿಲೀಸ್​ಗೂ ಮೊದಲೇ ಕಹಿ ಸುದ್ದಿ

ರಾಮಾಯಣಕ್ಕೆ ಹೋಲಿಸಿದರೆ ಮಹಾಭಾರತವು ಹೆಚ್ಚಿನ ಸಂಖ್ಯೆಯ ಪಾತ್ರಗಳನ್ನು ಹೊಂದಿದೆ. ರಾಜಮೌಳಿ ಹೇಳುವಂತೆ ಇದೊಂದು ಸಾಗರ. ಆಯಾ ಪಾತ್ರಗಳಿಗೆ ತಕ್ಕಂತೆ ನಟರನ್ನು ಆಯ್ಕೆ ಮಾಡುವತ್ತ ರಾಜಮೌಳಿ ಗಮನಹರಿಸಬೇಕು. ಅಲ್ಲದೆ, ಗೆಟಪ್‌ಗಳು ಮತ್ತು ಸಂಭಾಷಣೆಗಳ ವಿಷಯದಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಯಾರಿಗೂ ನೋವಾಗದಂತೆ, ವಿವಾದಗಳಿಗೆ ಎಡೆ ಮಾಡಿಕೊಡದೆ ರಾಜಮೌಳಿ ಮಹಾಭಾರತವನ್ನು ಹೇಗೆ ತೆರೆಗೆ ತರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ