Prabhas: ಪ್ರಭಾಸ್​ಗಾಗಿ ‘ಸಲಾರ್’ ಪ್ರಮೋಷನ್​ಗೆ ಬರಲಿದ್ದಾರೆ ನಿರ್ದೇಶಕ ರಾಜಮೌಳಿ

‘ಸಲಾರ್’ ಮೂಲಕ ಗೆಲುವು ಪಡೆಯಲೇಬೇಕು ಎನ್ನುವ ಹಠಕ್ಕೆ ಪ್ರಭಾಸ್ ಬಿದ್ದಿದ್ದಾರೆ. ಇದಕ್ಕೆ ರಾಜಮೌಳಿ ಕೂಡ ಸಾಥ್ ನೀಡುತ್ತಿದ್ದಾರೆ. ಗೆಳೆಯನ ಸಿನಿಮಾ ಪ್ರಚಾರ ಮಾಡಲು ರಾಜಮೌಳಿ ಸಹಾಯ ಮಾಡುತ್ತಿದ್ದಾರೆ.

Prabhas: ಪ್ರಭಾಸ್​ಗಾಗಿ ‘ಸಲಾರ್’ ಪ್ರಮೋಷನ್​ಗೆ ಬರಲಿದ್ದಾರೆ ನಿರ್ದೇಶಕ ರಾಜಮೌಳಿ
ರಾಜಮೌಳಿ-ಪ್ರಭಾಸ್
Follow us
|

Updated on:Dec 14, 2023 | 8:22 AM

ನಿರ್ದೇಶಕ ರಾಜಮೌಳಿ ಹಾಗೂ ಪ್ರಭಾಸ್ (Prabhas) ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಪ್ರಭಾಸ್​ಗೆ ‘ಬಾಹುಬಲಿ’ ಸರಣಿ ಮೂಲಕ ದೊಡ್ಡ ಗೆಲುವು ತಂದುಕೊಟ್ಟಿದ್ದು ಇದೇ ರಾಜಮೌಳಿ. ಹೀಗಾಗಿ ಅವರ ಮೇಲೆ ಪ್ರಭಾಸ್​ಗೆ ವಿಶೇಷ ಗೌರವ. ರಾಜಮೌಳಿ ಅವರು ಪ್ರಭಾಸ್​ನ ಆಪ್ತ ಎಂದೇ ಪರಿಗಣಿಸಿದ್ದಾರೆ. ಈಗ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರಚಾರದಲ್ಲಿ ರಾಜಮೌಳಿ ಕೂಡ ಭಾಗಿ ಆಗಲಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಪ್ರಭಾಸ್ ನಟನೆಯ ‘ಬಾಹುಬಲಿ 2’ ರಿಲೀಸ್ ಆಗಿ ಹಲವು ವರ್ಷಗಳು ಕಳೆದಿವೆ. ಇದಾದ ಬಳಿಕ ಅವರ ನಟನೆಯ ಮೂರು ಚಿತ್ರಗಳು ರಿಲೀಸ್ ಆದವು. ಆದರೆ, ಯಾವ ಚಿತ್ರದಲ್ಲೂ ಅವರಿಗೆ ಗೆಲುವು ಸಿಗಲಿಲ್ಲ. ಇದು ಪ್ರಭಾಸ್​ಗೆ ಬೇಸರ ತರಿಸಿದೆ. ‘ಸಲಾರ್’ ಮೂಲಕ ಗೆಲುವು ಪಡೆಯಲೇಬೇಕು ಎನ್ನುವ ಹಠಕ್ಕೆ ಪ್ರಭಾಸ್ ಬಿದ್ದಿದ್ದಾರೆ. ಇದಕ್ಕೆ ರಾಜಮೌಳಿ ಕೂಡ ಸಾಥ್ ನೀಡುತ್ತಿದ್ದಾರೆ. ಗೆಳೆಯನ ಸಿನಿಮಾ ಪ್ರಚಾರ ಮಾಡಲು ರಾಜಮೌಳಿ ಸಹಾಯ ಮಾಡುತ್ತಿದ್ದಾರೆ.

ಹಾಗಂತ ರಾಜಮೌಳಿ ಅವರು ತಂಡದ ಜೊತೆ ತೆರಳಿ ವೇದಿಕೆ ಹತ್ತುತ್ತಿಲ್ಲ. ಬದಲಿಗೆ, ಪ್ರಭಾಸ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರನ್ನು ರಾಜಮೌಳಿ ಸಂದರ್ಶನ ಮಾಡಲಿದ್ದಾರೆ. ಇದನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲು ಹೊಂಬಾಳೆ ಫಿಲ್ಮ್ಸ್​ ಮುಂದಾಗಿದೆ. ಈ ವೇಳೆ ಸಿನಿಮಾ ಕುರಿತ ಆಸಕ್ತಿಕರ ವಿಚಾರಗಳು ರಿವೀಲ್ ಆಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಮೊದಲು ‘ರಾಧೆ ಶ್ಯಾಮ್’ ರಿಲೀಸ್ ಸಂದರ್ಭದಲ್ಲೂ ಪ್ರಭಾಸ್ ಅವರನ್ನು ರಾಜಮೌಳಿ ಸಂದರ್ಶನ ಮಾಡಿದ್ದರು.

ಇದನ್ನೂ ಓದಿ: ‘ಆಕಾಶ ಗಡಿಯ ದಾಟಿ’ ಗೆಳೆತನವನ್ನು ಸಂಭ್ರಮಿಸುವ ‘ಸಲಾರ್’ ಹಾಡು ಬಿಡುಗಡೆ

‘ಸಲಾರ್’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಆದರೆ, ಚಿತ್ರತಂಡ ಅಂದುಕೊಂಡ ರೀತಿಯಲ್ಲಿ ಪ್ರಚಾರ ಮಾಡುತ್ತಿಲ್ಲ ಅನ್ನೋದು ಅಭಿಮಾನಿಗಳ ಆರೋಪ. ದೊಡ್ಡ ಬಜೆಟ್​ನಲ್ಲಿ ರೆಡಿ ಆಗಿರುವ ಈ ಚಿತ್ರಕ್ಕೆ ‘ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಅವರು ಬಂಡವಾಳ ಹೂಡುತ್ತಿದ್ದಾರೆ. ಪ್ರಭಾಸ್, ಪೃಥ್ವಿರಾಜ್​ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಡಿಸೆಂಬರ್ 22ರಂದು ಈ ಚಿತ್ರ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Thu, 14 December 23

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್