Sign In

By signing in or creating an account, you agree with Associated Broadcasting Company's Terms & Conditions and Privacy Policy.

Prabhas: ಪ್ರಭಾಸ್​ಗಾಗಿ ‘ಸಲಾರ್’ ಪ್ರಮೋಷನ್​ಗೆ ಬರಲಿದ್ದಾರೆ ನಿರ್ದೇಶಕ ರಾಜಮೌಳಿ

‘ಸಲಾರ್’ ಮೂಲಕ ಗೆಲುವು ಪಡೆಯಲೇಬೇಕು ಎನ್ನುವ ಹಠಕ್ಕೆ ಪ್ರಭಾಸ್ ಬಿದ್ದಿದ್ದಾರೆ. ಇದಕ್ಕೆ ರಾಜಮೌಳಿ ಕೂಡ ಸಾಥ್ ನೀಡುತ್ತಿದ್ದಾರೆ. ಗೆಳೆಯನ ಸಿನಿಮಾ ಪ್ರಚಾರ ಮಾಡಲು ರಾಜಮೌಳಿ ಸಹಾಯ ಮಾಡುತ್ತಿದ್ದಾರೆ.

Prabhas: ಪ್ರಭಾಸ್​ಗಾಗಿ ‘ಸಲಾರ್’ ಪ್ರಮೋಷನ್​ಗೆ ಬರಲಿದ್ದಾರೆ ನಿರ್ದೇಶಕ ರಾಜಮೌಳಿ
ರಾಜಮೌಳಿ-ಪ್ರಭಾಸ್
Follow us
ರಾಜೇಶ್ ದುಗ್ಗುಮನೆ
|

Updated on:Dec 14, 2023 | 8:22 AM

ನಿರ್ದೇಶಕ ರಾಜಮೌಳಿ ಹಾಗೂ ಪ್ರಭಾಸ್ (Prabhas) ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಪ್ರಭಾಸ್​ಗೆ ‘ಬಾಹುಬಲಿ’ ಸರಣಿ ಮೂಲಕ ದೊಡ್ಡ ಗೆಲುವು ತಂದುಕೊಟ್ಟಿದ್ದು ಇದೇ ರಾಜಮೌಳಿ. ಹೀಗಾಗಿ ಅವರ ಮೇಲೆ ಪ್ರಭಾಸ್​ಗೆ ವಿಶೇಷ ಗೌರವ. ರಾಜಮೌಳಿ ಅವರು ಪ್ರಭಾಸ್​ನ ಆಪ್ತ ಎಂದೇ ಪರಿಗಣಿಸಿದ್ದಾರೆ. ಈಗ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರಚಾರದಲ್ಲಿ ರಾಜಮೌಳಿ ಕೂಡ ಭಾಗಿ ಆಗಲಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಪ್ರಭಾಸ್ ನಟನೆಯ ‘ಬಾಹುಬಲಿ 2’ ರಿಲೀಸ್ ಆಗಿ ಹಲವು ವರ್ಷಗಳು ಕಳೆದಿವೆ. ಇದಾದ ಬಳಿಕ ಅವರ ನಟನೆಯ ಮೂರು ಚಿತ್ರಗಳು ರಿಲೀಸ್ ಆದವು. ಆದರೆ, ಯಾವ ಚಿತ್ರದಲ್ಲೂ ಅವರಿಗೆ ಗೆಲುವು ಸಿಗಲಿಲ್ಲ. ಇದು ಪ್ರಭಾಸ್​ಗೆ ಬೇಸರ ತರಿಸಿದೆ. ‘ಸಲಾರ್’ ಮೂಲಕ ಗೆಲುವು ಪಡೆಯಲೇಬೇಕು ಎನ್ನುವ ಹಠಕ್ಕೆ ಪ್ರಭಾಸ್ ಬಿದ್ದಿದ್ದಾರೆ. ಇದಕ್ಕೆ ರಾಜಮೌಳಿ ಕೂಡ ಸಾಥ್ ನೀಡುತ್ತಿದ್ದಾರೆ. ಗೆಳೆಯನ ಸಿನಿಮಾ ಪ್ರಚಾರ ಮಾಡಲು ರಾಜಮೌಳಿ ಸಹಾಯ ಮಾಡುತ್ತಿದ್ದಾರೆ.

ಹಾಗಂತ ರಾಜಮೌಳಿ ಅವರು ತಂಡದ ಜೊತೆ ತೆರಳಿ ವೇದಿಕೆ ಹತ್ತುತ್ತಿಲ್ಲ. ಬದಲಿಗೆ, ಪ್ರಭಾಸ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರನ್ನು ರಾಜಮೌಳಿ ಸಂದರ್ಶನ ಮಾಡಲಿದ್ದಾರೆ. ಇದನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲು ಹೊಂಬಾಳೆ ಫಿಲ್ಮ್ಸ್​ ಮುಂದಾಗಿದೆ. ಈ ವೇಳೆ ಸಿನಿಮಾ ಕುರಿತ ಆಸಕ್ತಿಕರ ವಿಚಾರಗಳು ರಿವೀಲ್ ಆಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಈ ಮೊದಲು ‘ರಾಧೆ ಶ್ಯಾಮ್’ ರಿಲೀಸ್ ಸಂದರ್ಭದಲ್ಲೂ ಪ್ರಭಾಸ್ ಅವರನ್ನು ರಾಜಮೌಳಿ ಸಂದರ್ಶನ ಮಾಡಿದ್ದರು.

ಇದನ್ನೂ ಓದಿ: ‘ಆಕಾಶ ಗಡಿಯ ದಾಟಿ’ ಗೆಳೆತನವನ್ನು ಸಂಭ್ರಮಿಸುವ ‘ಸಲಾರ್’ ಹಾಡು ಬಿಡುಗಡೆ

‘ಸಲಾರ್’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಆದರೆ, ಚಿತ್ರತಂಡ ಅಂದುಕೊಂಡ ರೀತಿಯಲ್ಲಿ ಪ್ರಚಾರ ಮಾಡುತ್ತಿಲ್ಲ ಅನ್ನೋದು ಅಭಿಮಾನಿಗಳ ಆರೋಪ. ದೊಡ್ಡ ಬಜೆಟ್​ನಲ್ಲಿ ರೆಡಿ ಆಗಿರುವ ಈ ಚಿತ್ರಕ್ಕೆ ‘ಹೊಂಬಾಳೆ ಫಿಲ್ಮ್ಸ್’ ಮೂಲಕ ವಿಜಯ್ ಕಿರಗಂದೂರು ಅವರು ಬಂಡವಾಳ ಹೂಡುತ್ತಿದ್ದಾರೆ. ಪ್ರಭಾಸ್, ಪೃಥ್ವಿರಾಜ್​ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಡಿಸೆಂಬರ್ 22ರಂದು ಈ ಚಿತ್ರ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Thu, 14 December 23

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ