AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸಿನಿಮಾ ಆರಂಭ ಮತ್ತು ಬೆಳವಣಿಗೆ ಬಗ್ಗೆ ಸಿನಿಮಾ ಮಾಡಲು ಮುಂದಾದ ರಾಜಮೌಳಿ

ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ಅವರು ರಾಜಮೌಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಗ್ಯಾಪ್​ನಲ್ಲಿ ರಾಜಮೌಳಿ ಸಿನಿಮಾ ನಿರ್ಮಾಣ ಮಾಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಶೀಘ್ರವೇ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ.  

ಭಾರತೀಯ ಸಿನಿಮಾ ಆರಂಭ ಮತ್ತು ಬೆಳವಣಿಗೆ ಬಗ್ಗೆ ಸಿನಿಮಾ ಮಾಡಲು ಮುಂದಾದ ರಾಜಮೌಳಿ
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on:Sep 19, 2023 | 7:02 AM

Share

ಭಾರತೀಯ ಸಿನಿಮಾ ಜಗತ್ತು ಕಂಡ ಶ್ರೇಷ್ಠ ನಿರ್ದೇಶಕರಲ್ಲಿ ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಕೂಡ ಒಬ್ಬರು. ಅವರು ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಅವರ ಸಿನಿಮಾಗಳ ಸಕ್ಸಸ್ ರೇಟ್ ಶೇ.100 ಇದೆ. ಚಿತ್ರದಿಂದ ಚಿತ್ರಕ್ಕೆ ಕಲೆಕ್ಷನ್ ಹೆಚ್ಚುತ್ತಿದೆ. ‘ಆರ್​ಆರ್​ಆರ್​’ ಸಿನಿಮಾದ (RRR Movie) ‘ನಾಟು ನಾಟು..’ ಹಾಡಿಗೆ ಆಸ್ಕರ್ ಬಂದಿದೆ. ‘ಆರ್​ಆರ್​ಆರ್​’ ಸಿನಿಮಾ ಬಳಿಕ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಈಗ ರಾಜಮೌಳಿ ಅವರು ಹೊಸ ಸಿನಿಮಾ ಅನೌನ್ಸ್​ ಮಾಡಲು ರೆಡಿ ಆಗಿದ್ದಾರೆ. ಭಾರತೀಯ ಸಿನಿಮಾ ಇತಿಹಾಸ ಮತ್ತು ಬೆಳವಣಿಗೆ ಕುರಿತು ಈ ಚಿತ್ರ ಇರಲಿದೆ.

ಈಗಾಗಲೇ ಮಹೇಶ್ ಬಾಬು ಜೊತೆ ರಾಜಮೌಳಿ ಸಿನಿಮಾ ಮಾಡುವ ಘೋಷಣೆ ಮಾಡಿ ಆಗಿದೆ. ಹಾಗಾದರೆ ಆ ಸಿನಿಮಾ ಕೆಲಸ ಮುಂದಕ್ಕೆ ಹೋಗಲಿದೆಯೇ? ಇಲ್ಲ. ರಾಜಮೌಳಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿಲ್ಲ. ಬದಲಿಗೆ ಅದನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿ ಆಗಿದ್ದಾರೆ. ಅವರ ತಂಡ ಯಾವ ರೀತಿಯಲ್ಲಿ ಸಿನಿಮಾ ನಿರ್ಮಾಣ ಮಾಡಬಹುದು ಎನ್ನುವ ಕುತೂಹಲ ಮೂಡಿದೆ.

ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಆ ಬಳಿಕ ಅವರು ರಾಜಮೌಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ. ಈ ಗ್ಯಾಪ್​ನಲ್ಲಿ ರಾಜಮೌಳಿ ಸಿನಿಮಾ ನಿರ್ಮಾಣ ಮಾಡುವ ಆಲೋಚನೆ ಮಾಡಿದ್ದಾರೆ. ಈ ಬಗ್ಗೆ ಶೀಘ್ರವೇ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ.

ಮಗ ಕಾರ್ತಿಕೇಯ ಸೇರಿ ಅನೇಕರನ್ನು ತಂಡದಲ್ಲಿ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ. ‘ಬರ್ತ್​ ಆ್ಯಂಡ್ ರೈಸ್ ಆಫ್ ಇಂಡಿಯನ್ ಸಿನಿಮಾ’ ಎನ್ನುವ ಶೀರ್ಷಿಕೆ ಇಡಲು ರಾಜಮೌಳಿ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.  ಈ ಚಿತ್ರವನ್ನು ಯಾರು ನಿರ್ದೇಶನ ಮಾಡಲಿದ್ದಾರೆ, ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ರಾಜಮೌಳಿ ನಟನೆ? ಹಿರಿದಾಗುತ್ತಿದೆ ಪ್ರಭಾಸ್​ ಸಿನಿಮಾದ ಪಾತ್ರವರ್ಗ

ಭಾರತಕ್ಕೆ ಸಿನಿಮಾ ಬಂದಾಗ ಯಾವುದೂ ಸುಲಭದಲ್ಲಿ ಸಿಗುತ್ತಿರಲಿಲ್ಲ. ತಂತ್ರಜ್ಞಾನ ಕೂಡ ಮುಂದುವರಿದಿರಲಿಲ್ಲ. ಇಂಥ ಸಂದರ್ಭದಲ್ಲಿ ಸಿನಿಮಾ ಮಾಡುವುದು ಎಂದರೆ ಅದು ನಿಜಕ್ಕೂ ಚಾಲೆಂಜಿಂಗ್ ವಿಚಾರ. ಈ ಚಾಲೆಂಜ್​ನ ತೆಗೆದುಕೊಂಡು ಸಿನಿಮಾ ಮಾಡಲಾಯಿತು ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:01 am, Tue, 19 September 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?