AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಣಾಸಿ’ ಸಿನಿಮಾ ಅಬ್ಬರ; 3,500 ಜೂನಿಯರ್ ಆರ್ಟಿಸ್ಟ್‌ಗಳ ಜತೆ ಮಹೇಶ್ ಬಾಬು ಮಹಾಯುದ್ಧ

ಹಿಂದೆಂದೂ ಕಂಡಿರದ ದೃಶ್ಯವೈಭವ ಸೃಷ್ಟಿಸಲು ನಿರ್ದೇಶಕ ರಾಜಮೌಳಿ ಅವರು ತಯಾರಾಗಿದ್ದಾರೆ. ‘ವಾರಣಾಸಿ’ ಸಿನಿಮಾದಲ್ಲಿ ಅತಿ ದೊಡ್ಡ ಯುದ್ಧದ ಸೀನ್ ಇರಲಿದೆ. ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಆ್ಯಕ್ಷನ್ ಸೀಕ್ವೆನ್ಸ್ ಆಗಿರಲಿದೆ ಎನ್ನಲಾಗಿದೆ. ಆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ.

‘ವಾರಣಾಸಿ’ ಸಿನಿಮಾ ಅಬ್ಬರ; 3,500 ಜೂನಿಯರ್ ಆರ್ಟಿಸ್ಟ್‌ಗಳ ಜತೆ ಮಹೇಶ್ ಬಾಬು ಮಹಾಯುದ್ಧ
SS Rajamouli, Mahesh Babu
ಮದನ್​ ಕುಮಾರ್​
|

Updated on: Jun 29, 2026 | 6:35 PM

Share

ಮುಖ್ಯಾಂಶಗಳು

  • ತೆರೆಯ ಮೇಲೆ ಸೃಷ್ಟಿಯಾಗಲಿದೆ 50,000 ವಾನರ ಸೈನ್ಯದ ಯುದ್ಧದ ದೃಶ್ಯ.
  • ರಾಜಮೌಳಿ, ಮಹೇಶ್ ಬಾಬು ಕಾಂಬಿನೇಷನ್​ನ ‘ವಾರಣಾಸಿ’ ಸಿನಿಮಾ.
  • 2027ರ ಏಪ್ರಿಲ್‌ನಲ್ಲಿ ಬಿಡುಗಡೆ ಆಗಲಿರುವ ಸಿನಿಮಾಗೆ ಭರ್ಜರಿ ಶೂಟಿಂಗ್.

ಪ್ರಖ್ಯಾತ ನಿರ್ದೇಶಕ ಎಸ್‌ಎಸ್‌ ರಾಜಮೌಳಿ (SS Rajamouli) ಸಾರಥ್ಯದಲ್ಲಿ ಮೂಡಿಬರುತ್ತಿರುವ, ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ನಟನೆಯ ಬಹುನಿರೀಕ್ಷಿತ ಚಿತ್ರ ‘ವಾರಣಾಸಿ’ (Varanasi) ಚಿತ್ರೀಕರಣದ ಬಗ್ಗೆ ರೋಮಾಂಚನಕಾರಿ ಅಪ್‌ಡೇಟ್ ಒಂದು ಹೊರಬಿದ್ದಿದೆ. ಜುಲೈ 7ರಿಂದ ಹೈದರಾಬಾದ್‌ನಲ್ಲಿ ಚಿತ್ರದ ಬೃಹತ್ ಶೂಟಿಂಗ್ ಶೆಡ್ಯೂಲ್ ಆರಂಭವಾಗಲಿದ್ದು, ಭಾರತೀಯ ಚಿತ್ರರಂಗದಲ್ಲೇ ಹಿಂದೆಂದೂ ಕಾಣದ ಭೀಕರ ಯುದ್ಧದ ದೃಶ್ಯವೊಂದನ್ನು ಸೆರೆಹಿಡಿಯಲು ರಾಜಮೌಳಿ ಸಜ್ಜಾಗಿದ್ದಾರೆ.

‘ಮಿಡ್-ಡೇ’ ವರದಿಯ ಪ್ರಕಾರ, ಈ ಯುದ್ಧದ ದೃಶ್ಯವು ರಾಜಮೌಳಿ ಅವರ ಈ ಹಿಂದಿನ ‘ಬಾಹುಬಲಿ’ ಅಥವಾ ‘ಆರ್‌ಆರ್‌ಆರ್‌’ ಚಿತ್ರಗಳಿಗಿಂತಲೂ ಮಿಗಿಲಾದ ಬೃಹತ್ ಕ್ಯಾನ್ವಾಸ್‌ನಲ್ಲಿ ಮೂಡಿಬರಲಿದೆ. ಈ ಅತ್ಯಂತ ಸಂಕೀರ್ಣವಾದ ಶೂಟಿಂಗ್‌ಗಾಗಿ ಬರೋಬ್ಬರಿ 3,500 ಜೂನಿಯರ್ ಆರ್ಟಿಸ್ಟ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ. ನಾಯಕ ಮಹೇಶ್ ಬಾಬು ಈ ಬೃಹತ್ ಸೈನಿಕರ ದಂಡಿನ ನಡುವೆ ಹೋರಾಡಲಿದ್ದು, ಇದಕ್ಕಾಗಿ ಕಳೆದ ಕೆಲವು ವಾರಗಳಿಂದ ಭರ್ಜರಿ ಪೂರ್ವಸಿದ್ಧತೆಗಳು ನಡೆದಿವೆ.

ಲೈವ್ ಆಗಿ ಶೂಟ್ ಮಾಡಲಾಗುವ 3,500 ಕಲಾವಿದರ ದೃಶ್ಯಗಳು ಕೇವಲ ಆರಂಭವಷ್ಟೇ. ಈ ಯುದ್ಧದ ಅಸಲಿ ದೃಶ್ಯವೈಭವವು ಪೋಸ್ಟ್ ಪ್ರೊಡಕ್ಷನ್ ಹಾಗೂ ಗ್ರಾಫಿಕ್ಸ್ ಕೆಲಸಗಳ ಮೂಲಕ ಅನಾವರಣಗೊಳ್ಳಲಿದೆ. ಅತ್ಯಾಧುನಿಕ ವಿಎಫ್‌ಎಕ್ಸ್ ತಂತ್ರಜ್ಞಾನವನ್ನು ಬಳಸಿ, ಶೂಟ್ ಮಾಡಲಾದ ಕಲಾವಿದರ ಸಂಖ್ಯೆಯನ್ನು ಡಿಜಿಟಲ್ ಆಗಿ ಹೆಚ್ಚಿಸಲಾಗುತ್ತದೆ. ತೆರೆಯ ಮೇಲೆ ಏಕಕಾಲದಲ್ಲಿ ಬರೋಬ್ಬರಿ 50 ಸಾವಿರ ವಾನರರು ಇರುವಂತೆ ದೃಶ್ಯವನ್ನು ಸೃಷ್ಟಿಸಲು ಚಿತ್ರತಂಡ ಯೋಜನೆ ರೂಪಿಸಿದೆ.

ಇತ್ತೀಚೆಗಷ್ಟೇ ಪ್ಯಾರಿಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜಮೌಳಿ, ಯುರೋಪಿಯನ್ ಪ್ರೇಕ್ಷಕರೆದುರು ‘ವಾರಣಾಸಿ’ ಚಿತ್ರದ ಮೊದಲ ಗ್ಲಿಂಪ್ಸ್ ಪ್ರದರ್ಶಿಸಿದ್ದರು. ಈ ಮೊದಲ ಝಲಕ್‌ಗೆ ಅಲ್ಲಿನ ಪ್ರೇಕ್ಷಕರಿಂದ ಭಾರಿ ಪ್ರಶಂಸೆ ವ್ಯಕ್ತವಾಗಿದ್ದು, ಚಿತ್ರದ ಮೇಲಿನ ನಿರೀಕ್ಷೆ ಜಾಗತಿಕ ಮಟ್ಟದಲ್ಲಿ ದುಪ್ಪಟ್ಟಾಗಿದೆ. ಆದ್ದರಿಂದ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ರಿಲೀಸ್​​ಗೆ 7 ತಿಂಗಳಿರುವಾಗಲೇ ‘ವಾರಣಾಸಿ’ ಶೂಟ್ ಪೂರ್ಣಗೊಳಿಸಲಿದ್ದಾರೆ ರಾಜಮೌಳಿ

‘ವಾರಣಾಸಿ’ ಒಂದು ಭವ್ಯವಾದ ಪೌರಾಣಿಕ ಆ್ಯಕ್ಷನ್ ಸಿನಿಮಾವಾಗಿದ್ದು, ನಾಯಕ ಬೇರೆ ಬೇರೆ ಕಾಲಘಟ್ಟಗಳಿಗೆ ಹೋಗಿ ಬರುವ ಡಿಫರೆಂಟ್ ಕಥಾಹಂದರವನ್ನು ಹೊಂದಿರಲಿದೆ. ಮಹೇಶ್ ಬಾಬು ಜೊತೆಗೆ ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ 2027ರ ಏಪ್ರಿಲ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!