AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: 10 ವರ್ಷ ಒಂದೇ ಪ್ರಾಜೆಕ್ಟ್​​ಮೇಲೆ ಕೆಲಸ ಮಾಡಲಿದ್ದಾರೆ ನಿರ್ದೇಶಕ ರಾಜಮೌಳಿ?

ರಾಜಮೌಳಿ ಪ್ರತಿ ಚಿತ್ರಕ್ಕೆ 2-3 ವರ್ಷ ತೆಗೆದುಕೊಳ್ಳುತ್ತಾರೆ. ಒಂದೊಮ್ಮೆ ಮಹಾಭಾರತವನ್ನು ಅವರು 10 ಪಾರ್ಟ್​​ನಲ್ಲಿ ತರಬೇಕಾದರೆ ಕನಿಷ್ಠ 10 ವರ್ಷ ಮುಡಿಪಿಡಬೇಕು.

SS Rajamouli: 10 ವರ್ಷ ಒಂದೇ ಪ್ರಾಜೆಕ್ಟ್​​ಮೇಲೆ ಕೆಲಸ ಮಾಡಲಿದ್ದಾರೆ ನಿರ್ದೇಶಕ ರಾಜಮೌಳಿ?
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: May 10, 2023 | 8:52 AM

Share

ರಾಮಾಯಣ, ಮಹಾಭಾರತದ ಮೇಲೆ ಅನೇಕ ನಿರ್ದೇಶಕರು ಕಣ್ಣಿಟ್ಟಿದ್ದಾರೆ. ಈ ಮಹಾಕಾವ್ಯಗಳನ್ನು ಇಟ್ಟುಕೊಂಡು ಈಗಾಗಲೇ ಅನೇಕ ಸಿನಿಮಾ ಹಾಗೂ ಧಾರಾವಾಹಿಗಳು ಬಂದಿವೆ. ಸದ್ಯ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಆದಿಪುರುಷ್’ ತೆರೆಗೆ ಬರಲು ಸಿದ್ಧಗೊಂಡಿದ್ದು, ಇದು ರಾಮಾಯಣ ಆಧರಿಸಿದೆ. ಈಗ ಎಸ್​.ಎಸ್​. ರಾಜಮೌಳಿ (SS Rajamouli) ಅವರು ಮಹಾಭಾರತದ ಬಗ್ಗೆ ಮಾತನಾಡಿದ್ದಾರೆ. ಮಹಾಭಾರತವನ್ನು ತೆರೆಮೇಲೆ ತರಲು ಅವರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಶೇಷ ಎಂದರೆ 10 ಪಾರ್ಟ್​​ನಲ್ಲಿ ಈ ಸಿನಿಮಾ ಮೂಡಿಬರಲಿದೆ ಎನ್ನಲಾಗಿದೆ. ಇದಕ್ಕಾಗಿ ರಾಜಮೌಳಿ ಎಷ್ಟು ವರ್ಷ ತೆಗೆದುಕೊಳ್ಳಲಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.

ಫಿಕ್ಷನ್ ಲೋಕವನ್ನು ಕಟ್ಟಿಕೊಡುವಲ್ಲಿ ರಾಜಮೌಳಿ ಅವರದ್ದು ಎತ್ತಿದ ಕೈ. ‘ಈಗ’, ‘ಬಾಹುಬಲಿ’, ‘ಆರ್​ಆರ್​ಆರ್​’ ಸೇರಿ ಅನೇಕ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಈಗ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಬೇಕಿದೆ. ಈ ಚಿತ್ರಕ್ಕೆ ಮಹೇಶ್​ ಬಾಬು ನಾಯಕ. ಈಗ ಅವರು ‘ಮಹಾಭಾರತ’ ಮಾಡುವ ಬಗ್ಗೆ ಮತ್ತೊಮ್ಮೆ ಆಸಕ್ತಿ ತೋರಿಸಿದ್ದಾರೆ.

ಮಹಾಭಾರತ ಆಧರಿಸಿ ಈ ಮೊದಲು ಧಾರಾವಾಹಿ ಹಾಗೂ ಸಿನಿಮಾ ಬಂದಿವೆ. ಹಿಂದಿಯಲ್ಲಿ ಮೂಡಿಬಂದ 260 ಎಪಿಸೋಡ್​ಗಳ ಮಹಾಭಾರತ ಈಗಲೂ ಜನರಮನದಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಈಗ ರಾಜಮೌಳಿ ಅವರು 10 ಪಾರ್ಟ್​​ಗಳಲ್ಲಿ ಇದನ್ನು ದೊಡ್ಡ ಪರದೆಮೇಲೆ ತರುವ ಪ್ರಯತ್ನದಲ್ಲಿದ್ದಾರೆ.

ಮಹಾಭಾರತವನ್ನು ತೆರೆಮೇಲೆ ತರಬೇಕು ಎಂಬುದು ರಾಜಮೌಳಿ ಅವರ ಹಲವು ವರ್ಷಗಳ ಕನಸು. ಆದರೆ, ಬೇರೆ ಸಿನಿಮಾ ಕೆಲಸಗಳ ಕಾರಣದಿಂದ ಇದನ್ನು ಪರದೆಮೇಲೆ ತರೋಕೆ ಅವರಿಗೆ ಸಾಧ್ಯವಾಗಿಲ್ಲ. ಆದರೆ ಆ ಬಗ್ಗೆ ಅವರಿಗೆ ಇರುವ ಆಸಕ್ತಿ ಕಡಿಮೆ ಆಗಿಲ್ಲ. ರಾಜಮೌಳಿ ಪ್ರತಿ ಚಿತ್ರಕ್ಕೆ 2-3 ವರ್ಷ ತೆಗೆದುಕೊಳ್ಳುತ್ತಾರೆ. ಒಂದೊಮ್ಮೆ ಮಹಾಭಾರತವನ್ನು ಅವರು 10 ಪಾರ್ಟ್​​ನಲ್ಲಿ ತರಬೇಕಾದರೆ ಕನಿಷ್ಠ 10 ವರ್ಷ ಮುಡಿಪಿಡಬೇಕು. ಇದು ಅವರಿಂದ ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಅದ್ಭುತ ಸಿನಿಮಾ ಆಲೋಚನೆಯಲ್ಲಿದ್ದ ರಾಜಮೌಳಿಗೆ ಪ್ರವೇಶ ನಿರಾಕರಿಸಿತ್ತು ಪಾಕಿಸ್ತಾನ

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ ಅಪರೂಪದ ಸಾಧನೆ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡು ಸೂಪರ್ ಹಿಟ್ ಆಯಿತು. ಆಸ್ಕರ್ ಕೂಡ ಗೆದ್ದಿತು. ಒಂದು ವರ್ಷಗಳ ಕಾಲ ಸಿನಿಮಾ ಯಶಸ್ಸನ್ನು ರಾಜಮೌಳಿ ಸಂಭ್ರಮಿಸಿದರು. ಈಗ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುತ್ತಿದ್ದಾರೆ. ಚಿತ್ರದ ಸ್ಕ್ರಿಪ್ಟ್ ಕೆಲಸ ಪ್ರಗತಿಯಲ್ಲಿದೆ. ತ್ರಿವಿಕ್ರಂ ಶ್ರೀನಿವಾಸ್ ಹಾಗೂ ಮಹೇಶ್ ಬಾಬು ಸಿನಿಮಾ ಕೆಲಸ ಮುಗಿದ ಬಳಿಕ ರಾಜಮೌಳಿ ಸಿನಿಮಾ ಕೆಲಸ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು