SS Rajamouli: 10 ವರ್ಷ ಒಂದೇ ಪ್ರಾಜೆಕ್ಟ್​​ಮೇಲೆ ಕೆಲಸ ಮಾಡಲಿದ್ದಾರೆ ನಿರ್ದೇಶಕ ರಾಜಮೌಳಿ?

ರಾಜಮೌಳಿ ಪ್ರತಿ ಚಿತ್ರಕ್ಕೆ 2-3 ವರ್ಷ ತೆಗೆದುಕೊಳ್ಳುತ್ತಾರೆ. ಒಂದೊಮ್ಮೆ ಮಹಾಭಾರತವನ್ನು ಅವರು 10 ಪಾರ್ಟ್​​ನಲ್ಲಿ ತರಬೇಕಾದರೆ ಕನಿಷ್ಠ 10 ವರ್ಷ ಮುಡಿಪಿಡಬೇಕು.

SS Rajamouli: 10 ವರ್ಷ ಒಂದೇ ಪ್ರಾಜೆಕ್ಟ್​​ಮೇಲೆ ಕೆಲಸ ಮಾಡಲಿದ್ದಾರೆ ನಿರ್ದೇಶಕ ರಾಜಮೌಳಿ?
ರಾಜಮೌಳಿ
Follow us
|

Updated on: May 10, 2023 | 8:52 AM

ರಾಮಾಯಣ, ಮಹಾಭಾರತದ ಮೇಲೆ ಅನೇಕ ನಿರ್ದೇಶಕರು ಕಣ್ಣಿಟ್ಟಿದ್ದಾರೆ. ಈ ಮಹಾಕಾವ್ಯಗಳನ್ನು ಇಟ್ಟುಕೊಂಡು ಈಗಾಗಲೇ ಅನೇಕ ಸಿನಿಮಾ ಹಾಗೂ ಧಾರಾವಾಹಿಗಳು ಬಂದಿವೆ. ಸದ್ಯ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಆದಿಪುರುಷ್’ ತೆರೆಗೆ ಬರಲು ಸಿದ್ಧಗೊಂಡಿದ್ದು, ಇದು ರಾಮಾಯಣ ಆಧರಿಸಿದೆ. ಈಗ ಎಸ್​.ಎಸ್​. ರಾಜಮೌಳಿ (SS Rajamouli) ಅವರು ಮಹಾಭಾರತದ ಬಗ್ಗೆ ಮಾತನಾಡಿದ್ದಾರೆ. ಮಹಾಭಾರತವನ್ನು ತೆರೆಮೇಲೆ ತರಲು ಅವರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಶೇಷ ಎಂದರೆ 10 ಪಾರ್ಟ್​​ನಲ್ಲಿ ಈ ಸಿನಿಮಾ ಮೂಡಿಬರಲಿದೆ ಎನ್ನಲಾಗಿದೆ. ಇದಕ್ಕಾಗಿ ರಾಜಮೌಳಿ ಎಷ್ಟು ವರ್ಷ ತೆಗೆದುಕೊಳ್ಳಲಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.

ಫಿಕ್ಷನ್ ಲೋಕವನ್ನು ಕಟ್ಟಿಕೊಡುವಲ್ಲಿ ರಾಜಮೌಳಿ ಅವರದ್ದು ಎತ್ತಿದ ಕೈ. ‘ಈಗ’, ‘ಬಾಹುಬಲಿ’, ‘ಆರ್​ಆರ್​ಆರ್​’ ಸೇರಿ ಅನೇಕ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಈಗ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಬೇಕಿದೆ. ಈ ಚಿತ್ರಕ್ಕೆ ಮಹೇಶ್​ ಬಾಬು ನಾಯಕ. ಈಗ ಅವರು ‘ಮಹಾಭಾರತ’ ಮಾಡುವ ಬಗ್ಗೆ ಮತ್ತೊಮ್ಮೆ ಆಸಕ್ತಿ ತೋರಿಸಿದ್ದಾರೆ.

ಮಹಾಭಾರತ ಆಧರಿಸಿ ಈ ಮೊದಲು ಧಾರಾವಾಹಿ ಹಾಗೂ ಸಿನಿಮಾ ಬಂದಿವೆ. ಹಿಂದಿಯಲ್ಲಿ ಮೂಡಿಬಂದ 260 ಎಪಿಸೋಡ್​ಗಳ ಮಹಾಭಾರತ ಈಗಲೂ ಜನರಮನದಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಈಗ ರಾಜಮೌಳಿ ಅವರು 10 ಪಾರ್ಟ್​​ಗಳಲ್ಲಿ ಇದನ್ನು ದೊಡ್ಡ ಪರದೆಮೇಲೆ ತರುವ ಪ್ರಯತ್ನದಲ್ಲಿದ್ದಾರೆ.

ಮಹಾಭಾರತವನ್ನು ತೆರೆಮೇಲೆ ತರಬೇಕು ಎಂಬುದು ರಾಜಮೌಳಿ ಅವರ ಹಲವು ವರ್ಷಗಳ ಕನಸು. ಆದರೆ, ಬೇರೆ ಸಿನಿಮಾ ಕೆಲಸಗಳ ಕಾರಣದಿಂದ ಇದನ್ನು ಪರದೆಮೇಲೆ ತರೋಕೆ ಅವರಿಗೆ ಸಾಧ್ಯವಾಗಿಲ್ಲ. ಆದರೆ ಆ ಬಗ್ಗೆ ಅವರಿಗೆ ಇರುವ ಆಸಕ್ತಿ ಕಡಿಮೆ ಆಗಿಲ್ಲ. ರಾಜಮೌಳಿ ಪ್ರತಿ ಚಿತ್ರಕ್ಕೆ 2-3 ವರ್ಷ ತೆಗೆದುಕೊಳ್ಳುತ್ತಾರೆ. ಒಂದೊಮ್ಮೆ ಮಹಾಭಾರತವನ್ನು ಅವರು 10 ಪಾರ್ಟ್​​ನಲ್ಲಿ ತರಬೇಕಾದರೆ ಕನಿಷ್ಠ 10 ವರ್ಷ ಮುಡಿಪಿಡಬೇಕು. ಇದು ಅವರಿಂದ ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಅದ್ಭುತ ಸಿನಿಮಾ ಆಲೋಚನೆಯಲ್ಲಿದ್ದ ರಾಜಮೌಳಿಗೆ ಪ್ರವೇಶ ನಿರಾಕರಿಸಿತ್ತು ಪಾಕಿಸ್ತಾನ

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’ ಸಿನಿಮಾ ಅಪರೂಪದ ಸಾಧನೆ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡು ಸೂಪರ್ ಹಿಟ್ ಆಯಿತು. ಆಸ್ಕರ್ ಕೂಡ ಗೆದ್ದಿತು. ಒಂದು ವರ್ಷಗಳ ಕಾಲ ಸಿನಿಮಾ ಯಶಸ್ಸನ್ನು ರಾಜಮೌಳಿ ಸಂಭ್ರಮಿಸಿದರು. ಈಗ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗುತ್ತಿದ್ದಾರೆ. ಚಿತ್ರದ ಸ್ಕ್ರಿಪ್ಟ್ ಕೆಲಸ ಪ್ರಗತಿಯಲ್ಲಿದೆ. ತ್ರಿವಿಕ್ರಂ ಶ್ರೀನಿವಾಸ್ ಹಾಗೂ ಮಹೇಶ್ ಬಾಬು ಸಿನಿಮಾ ಕೆಲಸ ಮುಗಿದ ಬಳಿಕ ರಾಜಮೌಳಿ ಸಿನಿಮಾ ಕೆಲಸ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ