AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​ಆರ್​ ಚಿತ್ರದ ಒಂದು ಹಾಡಿನ ಶೂಟ್​ಗೆ 30 ದಿನ; ಹುಬ್ಬೇರಿಸಿದ ಸಿನಿಪ್ರಿಯರು

ಮೂಲಗಳ ಪ್ರಕಾರ ಎರಡು ಹಾಡುಗಳ ಶೂಟ್​ ಬಾಕಿ ಇದೆಯಂತೆ. ರಾಮ್​ ಚರಣ್​ ಮತ್ತು ಆಲಿಯಾ ಭಟ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಹಾಡಿಗೆ ಒಂದು ವಾರದ ಕಾಲ್​ಶೀಟ್​ ನಿಗದಿ ಮಾಡಲಾಗಿದೆ.

ಆರ್​ಆರ್​ಆರ್​ ಚಿತ್ರದ ಒಂದು ಹಾಡಿನ ಶೂಟ್​ಗೆ 30 ದಿನ; ಹುಬ್ಬೇರಿಸಿದ ಸಿನಿಪ್ರಿಯರು
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: May 29, 2021 | 4:16 PM

Share

ಎಸ್​ಎಸ್​ ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ಸಿನಿಮಾದಲ್ಲಿ ಬರುವ ಫೈಟ್​ ಇರಲಿ ಅಥವಾ ಹಾಡಿರಲಿ ಪ್ರೇಕ್ಷಕರಿಗೆ ವಾಹ್​ ಎನಿಸದೇ ಇರದು. ಈಗ ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾ ಸಾಕಷ್ಟು ವಿಚಾರಗಳಿಗೆ ನಿರೀಕ್ಷೆ ಹುಟ್ಟುಹಾಕಿದೆ. ಅಚ್ಚರಿ ಎಂದರೆ ಈ ಸಿನಿಮಾದಲ್ಲಿ ಬರುವ ಹಾಡೊಂದರ ಶೂಟಿಂಗ್​ಗೆ ರಾಜಮೌಳಿ 30 ದಿನ ತೆಗೆದುಕೊಳ್ಳುತ್ತಿದ್ದಾರಂತೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.

ಆರ್​ಆರ್​ಆರ್​ ಸಿನಿಮಾದ ಶೂಟಿಂಗ್​ ಕೊನೆಯ ಹಂತದಲ್ಲಿದೆ. ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳದೆ ಇದ್ದಿದ್ದರೆ, ಇಷ್ಟೊತ್ತಿಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಂಡಿರುತ್ತಿತ್ತು. ಆದರೆ, ಈಗ ಚಿತ್ರೀಕರಣ ನಡೆಯುತ್ತಿಲ್ಲ. ಪರಿಸ್ಥಿತಿ ಸುಸ್ಥಿತಿಗೆ ಮರಳಿದ ಮೇಲೆಯೇ ಶೂಟಿಂಗ್​ ಮಾಡಲು ಆರ್​ಆರ್​ಆರ್​ ತಂಡ ನಿರ್ಧರಿಸಿದೆ. ಈಗ ಸಿನಿಮಾ ಬಗ್ಗೆ ಕೇಳಿ ಬಂದ ಹೊಸ ವಿಚಾರ ಅಭಿಮಾನಿಗಳ ಕುತೂಹಲವನ್ನು ಕೆರಳಿಸಿದೆ.

ಮೂಲಗಳ ಪ್ರಕಾರ ಎರಡು ಹಾಡುಗಳ ಶೂಟ್​ ಬಾಕಿ ಇದೆಯಂತೆ. ರಾಮ್​ ಚರಣ್​ ಮತ್ತು ಆಲಿಯಾ ಭಟ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಹಾಡಿಗೆ ಒಂದು ವಾರದ ಕಾಲ್​ಶೀಟ್​ ನಿಗದಿ ಮಾಡಲಾಗಿದೆ. ಇದಲ್ಲದೆ, ಜ್ಯೂ. ಎನ್​ಟಿಆರ್ ಹಾಗೂ ರಾಮ್​ ಚರಣ್​ ಅವರ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಸಾಂಗ್​ ಒಂದರ ಶೂಟ್​ಗೆ ಒಂದು ತಿಂಗಳು ಹಿಡಿಯಬಹುದು ಎಂದು ಅಂದಾಜಿಸಲಾಗಿದೆಯಂತೆ.

ಸಿನಿಮಾ ಶೂಟಿಂಗ್​ ಬಹುತೇಕ ಪೂರ್ಣಗೊಂಡಿದೆ. ಕೆಲ ಪ್ಯಾಚ್​ಅಪ್​ ಕೆಲಸಗಳು ಬಾಕಿ ಇವೆ. ಹೀಗಾಗಿ, ಇದಕ್ಕೆ 10 ದಿನಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಎಲ್ಲವೂ ಸೇರಿ ಸುಮಾರು 50 ದಿನಗಳ ಶೂಟ್​ ಬಾಕಿ ಇದೆಯಂತೆ. ಅದಾದ ನಂತರದಲ್ಲಿ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗಲಿವೆ.

ಆರ್​ಆರ್​ಆರ್​ ಚಿತ್ರ ಶೂಟಿಂಗ್​ ಮುಗಿಸುವ ಮುನ್ನವೇ ದೊಡ್ಡ ದೊಡ್ಡ ಡೀಲ್​ಗಳನ್ನು ಪಡೆದುಕೊಳ್ಳುತ್ತಿದೆ. ಈ ಸಿನಿಮಾದ ಡಿಜಿಟಲ್ ಪ್ರಸಾರ ಹಕ್ಕುಗಳು 325 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎನ್ನಲಾಗಿದೆ. ಜ್ಯೂ. ಎನ್​ಟಿಆರ್ ಮತ್ತು ರಾಮ್​ಚರಣ್​ ಮುಖ್ಯಭೂಮಿಕೆಯಲ್ಲಿದ್ದಾರೆ. ಬಾಲಿವುಡ್​ ಸ್ಟಾರ್​ ಕಲಾವಿದರಾದ ಅಜಯ್​ ದೇವಗನ್​ ಮತ್ತು ಆಲಿಯಾ ಭಟ್​ ಕೂಡ ಈ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

RRR ಫೈಟಿಂಗ್​ ದೃಶ್ಯದಲ್ಲಿ ರಾಜಮೌಳಿ ಹೊಸ ಪ್ರಯೋಗ; ತಂದೆಯಿಂದಲೇ ಬಯಲಾದ ಸೀಕ್ರೆಟ್​ ಏನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್