AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​ಆರ್​ ಚಿತ್ರದ ಒಂದು ಹಾಡಿನ ಶೂಟ್​ಗೆ 30 ದಿನ; ಹುಬ್ಬೇರಿಸಿದ ಸಿನಿಪ್ರಿಯರು

ಮೂಲಗಳ ಪ್ರಕಾರ ಎರಡು ಹಾಡುಗಳ ಶೂಟ್​ ಬಾಕಿ ಇದೆಯಂತೆ. ರಾಮ್​ ಚರಣ್​ ಮತ್ತು ಆಲಿಯಾ ಭಟ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಹಾಡಿಗೆ ಒಂದು ವಾರದ ಕಾಲ್​ಶೀಟ್​ ನಿಗದಿ ಮಾಡಲಾಗಿದೆ.

ಆರ್​ಆರ್​ಆರ್​ ಚಿತ್ರದ ಒಂದು ಹಾಡಿನ ಶೂಟ್​ಗೆ 30 ದಿನ; ಹುಬ್ಬೇರಿಸಿದ ಸಿನಿಪ್ರಿಯರು
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: May 29, 2021 | 4:16 PM

Share

ಎಸ್​ಎಸ್​ ರಾಜಮೌಳಿ ನಿರ್ದೇಶನದ ಸಿನಿಮಾ ಎಂದರೆ ಅಲ್ಲೊಂದು ಅದ್ದೂರಿತನ ಇರುತ್ತದೆ. ಸಿನಿಮಾದಲ್ಲಿ ಬರುವ ಫೈಟ್​ ಇರಲಿ ಅಥವಾ ಹಾಡಿರಲಿ ಪ್ರೇಕ್ಷಕರಿಗೆ ವಾಹ್​ ಎನಿಸದೇ ಇರದು. ಈಗ ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​ ಸಿನಿಮಾ ಸಾಕಷ್ಟು ವಿಚಾರಗಳಿಗೆ ನಿರೀಕ್ಷೆ ಹುಟ್ಟುಹಾಕಿದೆ. ಅಚ್ಚರಿ ಎಂದರೆ ಈ ಸಿನಿಮಾದಲ್ಲಿ ಬರುವ ಹಾಡೊಂದರ ಶೂಟಿಂಗ್​ಗೆ ರಾಜಮೌಳಿ 30 ದಿನ ತೆಗೆದುಕೊಳ್ಳುತ್ತಿದ್ದಾರಂತೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.

ಆರ್​ಆರ್​ಆರ್​ ಸಿನಿಮಾದ ಶೂಟಿಂಗ್​ ಕೊನೆಯ ಹಂತದಲ್ಲಿದೆ. ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳದೆ ಇದ್ದಿದ್ದರೆ, ಇಷ್ಟೊತ್ತಿಗಾಗಲೇ ಸಿನಿಮಾದ ಶೂಟಿಂಗ್​ ಪೂರ್ಣಗೊಂಡಿರುತ್ತಿತ್ತು. ಆದರೆ, ಈಗ ಚಿತ್ರೀಕರಣ ನಡೆಯುತ್ತಿಲ್ಲ. ಪರಿಸ್ಥಿತಿ ಸುಸ್ಥಿತಿಗೆ ಮರಳಿದ ಮೇಲೆಯೇ ಶೂಟಿಂಗ್​ ಮಾಡಲು ಆರ್​ಆರ್​ಆರ್​ ತಂಡ ನಿರ್ಧರಿಸಿದೆ. ಈಗ ಸಿನಿಮಾ ಬಗ್ಗೆ ಕೇಳಿ ಬಂದ ಹೊಸ ವಿಚಾರ ಅಭಿಮಾನಿಗಳ ಕುತೂಹಲವನ್ನು ಕೆರಳಿಸಿದೆ.

ಮೂಲಗಳ ಪ್ರಕಾರ ಎರಡು ಹಾಡುಗಳ ಶೂಟ್​ ಬಾಕಿ ಇದೆಯಂತೆ. ರಾಮ್​ ಚರಣ್​ ಮತ್ತು ಆಲಿಯಾ ಭಟ್​ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಹಾಡಿಗೆ ಒಂದು ವಾರದ ಕಾಲ್​ಶೀಟ್​ ನಿಗದಿ ಮಾಡಲಾಗಿದೆ. ಇದಲ್ಲದೆ, ಜ್ಯೂ. ಎನ್​ಟಿಆರ್ ಹಾಗೂ ರಾಮ್​ ಚರಣ್​ ಅವರ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಸಾಂಗ್​ ಒಂದರ ಶೂಟ್​ಗೆ ಒಂದು ತಿಂಗಳು ಹಿಡಿಯಬಹುದು ಎಂದು ಅಂದಾಜಿಸಲಾಗಿದೆಯಂತೆ.

ಸಿನಿಮಾ ಶೂಟಿಂಗ್​ ಬಹುತೇಕ ಪೂರ್ಣಗೊಂಡಿದೆ. ಕೆಲ ಪ್ಯಾಚ್​ಅಪ್​ ಕೆಲಸಗಳು ಬಾಕಿ ಇವೆ. ಹೀಗಾಗಿ, ಇದಕ್ಕೆ 10 ದಿನಗಳು ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಎಲ್ಲವೂ ಸೇರಿ ಸುಮಾರು 50 ದಿನಗಳ ಶೂಟ್​ ಬಾಕಿ ಇದೆಯಂತೆ. ಅದಾದ ನಂತರದಲ್ಲಿ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗಲಿವೆ.

ಆರ್​ಆರ್​ಆರ್​ ಚಿತ್ರ ಶೂಟಿಂಗ್​ ಮುಗಿಸುವ ಮುನ್ನವೇ ದೊಡ್ಡ ದೊಡ್ಡ ಡೀಲ್​ಗಳನ್ನು ಪಡೆದುಕೊಳ್ಳುತ್ತಿದೆ. ಈ ಸಿನಿಮಾದ ಡಿಜಿಟಲ್ ಪ್ರಸಾರ ಹಕ್ಕುಗಳು 325 ಕೋಟಿ ರೂ.ಗಳಿಗೆ ಮಾರಾಟವಾಗಿದೆ ಎನ್ನಲಾಗಿದೆ. ಜ್ಯೂ. ಎನ್​ಟಿಆರ್ ಮತ್ತು ರಾಮ್​ಚರಣ್​ ಮುಖ್ಯಭೂಮಿಕೆಯಲ್ಲಿದ್ದಾರೆ. ಬಾಲಿವುಡ್​ ಸ್ಟಾರ್​ ಕಲಾವಿದರಾದ ಅಜಯ್​ ದೇವಗನ್​ ಮತ್ತು ಆಲಿಯಾ ಭಟ್​ ಕೂಡ ಈ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

RRR ಫೈಟಿಂಗ್​ ದೃಶ್ಯದಲ್ಲಿ ರಾಜಮೌಳಿ ಹೊಸ ಪ್ರಯೋಗ; ತಂದೆಯಿಂದಲೇ ಬಯಲಾದ ಸೀಕ್ರೆಟ್​ ಏನು?

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!