AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli: ​ಅಮೆರಿಕಾದಲ್ಲಿ ‘ಆರ್​ಆರ್​ಆರ್’ಗೆ ವಿಶೇಷ ಮನ್ನಣೆ: ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್​ 'ಆರ್​ಆರ್​ಆರ್'​ ಚಿತ್ರಕ್ಕೆ ಎಸ್​ಎಸ್​​ ರಾಜಮೌಳಿ ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ನೀಡಿದೆ.

SS Rajamouli: ​ಅಮೆರಿಕಾದಲ್ಲಿ 'ಆರ್​ಆರ್​ಆರ್'ಗೆ ವಿಶೇಷ ಮನ್ನಣೆ: ರಾಜಮೌಳಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ
ಎಸ್​ಎಸ್​​ ರಾಜಮೌಳಿ
TV9 Web
| Edited By: |

Updated on:Dec 03, 2022 | 11:27 AM

Share

ಟಾಲಿವುಡ್​​ನ ಜನಪ್ರಿಯ ನಿರ್ದೇಶಕ ಎಸ್​ಎಸ್​ ರಾಜಮೌಳಿ (ss rajamouli). ‘ಆರ್​ಆರ್​ಆರ್’ (RRR) ​​ನಂತಹ ದೊಡ್ಡ ಬಜೆಟ್​​ನ ಸಿನಿಮಾ ಮಾಡಿ ಇಡೀ ವಿಶ್ವವೇ ಒಂದು ಬಾರಿ ತಿರುಗಿ ನೋಡುವಂತೆ ಮಾಡಿದ ವ್ಯಕ್ತಿ. ‘ಆರ್​ಆರ್​ಆರ್’​ ಸಿನಿಮಾ ತೆರೆಗೆ ಬಂದು ತಿಂಗಳುಗಳೇ ಕಳೆದಿವೆ. ಆದರೂ ಅದರ ಹವಾ ಮಾತ್ರ ನಿಂತಿಲ್ಲ. ಒಂದಿಲ್ಲೊಂದು ದಾಖಲೆಗಳನ್ನು ಮಾಡುತ್ತಲೇ ಇದೆ. ಸದ್ಯ ‘ಆರ್​ಆರ್​ಆರ್’​ ಸಿನಿಮಾದ ನಿರ್ದೇಶಕರಿಗೆ ಪ್ರಶಸ್ತಿ ಹುಡುಕಿಕೊಂಡು ಬಂದಿದೆ. ‘ಆರ್‌ಆರ್‌ಆರ್’ ಸಿನಿಮಾ ಅಂತರರಾಷ್ಟ್ರೀಯ ಪ್ರಶಸ್ತಿ ಸರ್ಕ್ಯೂಟ್‌ನಲ್ಲಿ ತನ್ನ ಖಾತೆಯನ್ನು ತೆರೆದಿದೆ. ಆ ಮೂಲಕ ಎಸ್​ಎಸ್​​ ರಾಜಮೌಳಿ ಅವರು ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ (New York Film Critics Circle) ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಶುಕ್ರವಾರ (ಡಿ.2) ನಡೆದ ಕಾರ್ಯಮದಲ್ಲಿ ಎಸ್​ಎಸ್​​ ರಾಜಮೌಳಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಈ ನ್ಯೂ ಯಾರ್ಕ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್‌ 1935ರಲ್ಲಿ ಸ್ಥಾಪನೆಯಾದ ಅಮೆರಿಕಾದ ಅತ್ಯಂತ ಹಳೆಯ ವಿಮರ್ಶಕರ ಗುಂಪುಗಳಲ್ಲಿ ಒಂದು. ಈ ತಂಡದಲ್ಲಿ ಪತ್ರಿಕೆ, ನಿಯತಕಾಲಿಕೆ ಮತ್ತು ಆನ್​ಲೈನ್​ ಪ್ರಕಟಣಾ ಸದಸ್ಯರನ್ನು ಹೊಂದಿದೆ.

‘ಆರ್​ಆರ್​ಆರ್’ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಜೂನಿಯರ್ ಎನ್​ಟಿಆರ್​, ರಾಮ್ ಚರಣ್, ಆಲಿಯಾ ಭಟ್, ಅಜಯ್ ದೇವಗನ್, ಶ್ರಿಯಾ ಶರಣ್​ ಮತ್ತು ಇತರೆ ಸಹಕಲಾವಿದರು ನಟಿಸಿದ್ದಾರೆ. ಮಾರ್ಚ್ 2022 ರಲ್ಲಿ ಬಿಡುಗಡೆಯಾದ ‘RRR’ ಚಿತ್ರ ಇಬ್ಬರು ತೆಲುಗು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಂ ಭೀಮ್ ಅವರ ಪಾತ್ರಗಳನಿಟ್ಟುಕೊಂಡು ಮಾಡಿದ ಆಧರಿಸಿದ ಕಾಲ್ಪನಿಕ ಕಥೆಯಾಗಿದೆ. ಈ ಚಿತ್ರ ವಿಶ್ವಾದ್ಯಂತ 1200 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿತ್ತು.

ಇದನ್ನೂ ಓದಿ: RRR: ಆಸ್ಕರ್​ ಪ್ರಶಸ್ತಿ ಪಡೆಯುತ್ತಾ ‘ಆರ್​ಆರ್​​ಆರ್​’ ಸಿನಿಮಾ? ಜಾಗತಿಕ ಮಟ್ಟದಲ್ಲಿ ರಾಜಮೌಳಿ ಚಿತ್ರದ ಬಗ್ಗೆ ಚರ್ಚೆ

‘ಆರ್​ಆರ್​ಆರ್’ ಚಿತ್ರ ಭಾರಿ ಯಶಸ್ಸಿನ ಹೊರತಾಗಿಯೂ ಆಸ್ಕರ್​ 2023ಕ್ಕೆ ಆಯ್ಕೆ ಮಾಡಲಾಗಿಲ್ಲ. ಹೀಗಿರುವಾಗ ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ಈ ಕುರಿತಾಗಿ ಟ್ವೀಟ್​ ಮಾಡಿದ್ದರು.  ‘ಫಾರ್ ಯುವರ್ ಕನ್ಸಿಡರೇಷನ್’ ಅಭಿಯಾನದ ಅಡಿಯಲ್ಲಿ 14 ವಿಭಾಗಗಳಲ್ಲಿ ‘RRR’ ಚಿತ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ಅತ್ಯುತ್ತಮ ಚಿತ್ರ (ಡಿವಿವಿ ದಾನಯ್ಯ), ಅತ್ಯುತ್ತಮ ನಿರ್ದೇಶಕ (ಎಸ್‌ಎಸ್ ರಾಜಮೌಳಿ), ಅತ್ಯುತ್ತಮ ನಟ (ಜೂನಿಯರ್ ಎನ್‌ಟಿಆರ್ ಮತ್ತು ರಾಮ್ ಚರಣ್), ಅತ್ಯುತ್ತಮ ಪೋಷಕ ನಟ (ಅಜಯ್ ದೇವಗನ್), ಅತ್ಯುತ್ತಮ ಪೋಷಕ ನಟಿ (ಆಲಿಯಾ ಭಟ್) ಸೇರಿದಂತೆ ಹಲವು ವಿಭಾಗಗಳನ್ನು ಪರಿಗಣಿಸಲು ಆರ್‌ಆರ್‌ಆರ್ ತಂಡ ತಿಳಿಸಿತ್ತು.

ಆಸ್ಕರ್​ ಪ್ರಶಸ್ತಿ ಗೆಲ್ಲಬೇಕು ಎಂದರೆ ಒಂದಷ್ಟು ನಿಯಮಗಳನ್ನು ಪಾಲಿಸಲೇಬೇಕಾಗುತ್ತದೆ. ಆ ನಿಯಮಗಳ ಅನುಸಾರ ತಯಾರಾದ ಚಿತ್ರವನ್ನು ಆಯ್ಕೆ ಮಾಡಿ ಭಾರತದಿಂದ ಒಂದು ಸಿನಿಮಾವನ್ನು ಕಳಿಸಲಾಗುತ್ತದೆ. ಅದಕ್ಕಾಗಿ ಪ್ರತ್ಯೇಕ ಸಮಿತಿ ಕೂಡ ರಚನೆ ಮಾಡಲಾಗಿರುತ್ತದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:26 am, Sat, 3 December 22

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!