Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajamouli: ರಾಜಮೌಳಿಗೆ ತಲೆ ನೋವಾಯ್ತು ತಂದೆಯ ಮಾತುಗಳು; ವಿಜಯೇಂದ್ರ ಪ್ರಸಾದ್​ ಮಾಡಿದ ಎಡವಟ್ಟು ಏನು?

Vijayendra Prasad: ವಿಜಯೇಂದ್ರ ಪ್ರಸಾದ್​ ಅವರು ಏನೋ ಒಂದು ಹೇಳುತ್ತಾರೆ. ಅದನ್ನೇ ಇಟ್ಟುಕೊಂಡು ಸೋಶಿಯಲ್​ ಮೀಡಿಯಾದಲ್ಲಿ ನೂರಾರು ಬಗೆಯ ಅಂತೆ-ಕಂತೆಗಳು ಹುಟ್ಟಿಕೊಳ್ಳುತ್ತವೆ.

Rajamouli: ರಾಜಮೌಳಿಗೆ ತಲೆ ನೋವಾಯ್ತು ತಂದೆಯ ಮಾತುಗಳು; ವಿಜಯೇಂದ್ರ ಪ್ರಸಾದ್​ ಮಾಡಿದ ಎಡವಟ್ಟು ಏನು?
ರಾಜಮೌಳಿ, ವಿಜಯೇಂದ್ರ ಪ್ರಸಾದ್​
Follow us
ಮದನ್​ ಕುಮಾರ್​
|

Updated on: Jul 11, 2023 | 11:42 AM

ಎಸ್​ಎಸ್​ ರಾಜಮೌಳಿ (SS Rajamouli) ಅವರು ಸ್ಟಾರ್​ ಡೈರೆಕ್ಟರ್​ ಆಗಿ ಖ್ಯಾತಿ ಪಡೆದಿದ್ದಾರೆ. ಅವರು ಮಾಡಿದ ಎಲ್ಲ ಸಿನಿಮಾಗಳು ಸೂಪರ್​ ಹಿಟ್ ಆಗಿವೆ. ಆಸ್ಕರ್​ ವೇದಿಕೆ ಏರುವ ಮಟ್ಟಕ್ಕೆ ಅವರ ಸಿನಿಮಗಳು ಸಾಧನೆ ಮಾಡಿವೆ. ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್​ (Vijayendra Prasad) ಅವರು ಕಥೆಗಾರನಾಗಿ ಸಾಕಷ್ಟು ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ರಾಜಮೌಳಿಯ ಪ್ರತಿ ಸಿನಿಮಾದಲ್ಲೂ ವಿಜಯೇಂದ್ರ ಪ್ರಸಾದ್​ ಕೆಲಸ ಮಾಡುತ್ತಾರೆ. ಆದರೆ ಈಗ ತಂದೆಯ ಮಾತುಗಳೇ ರಾಜಮೌಳಿ ಅವರಿಗೆ ತಲೆ ನೋವಾಗಿ ಪರಿಣಮಿಸುತ್ತಿದೆ. ಇದರಿಂದ ಅಭಿಮಾನಿಗಳಿಗೂ ಚಿಂತೆ ಶುರುವಾಗಿದೆ. ಈ ಬಗ್ಗೆ ಫ್ಯಾನ್ಸ್​ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಅಷ್ಟಕ್ಕೂ ವಿಜಯೇಂದ್ರ ಪ್ರಸಾದ್​ ಅವರು ಮಾಡಿದ ತಪ್ಪು ಏನು? ಇಲ್ಲಿದೆ ವಿವರ..

‘ಆರ್​ಆರ್​ಆರ್​’ ಸಿನಿಮಾದ ಭಾರಿ ಗೆಲುವಿನ ಬಳಿಕ ರಾಜಮೌಳಿ ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರು ಮಾಡಲಿರುವ ಹೊಸ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಆ ಬಗ್ಗೆ ಅಪ್​ಡೇಟ್​ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ವಿಶೇಷ ದಿನದಂದು, ವಿಶೇಷ ರೀತಿಯಲ್ಲಿ ಅಪ್​ಡೇಟ್​ ನೀಡಿದರೆ ಅದು ಹೆಚ್ಚು ಜನರನ್ನು ತಲುಪುತ್ತದೆ. ಆದರೆ ವಿಜಯೇಂದ್ರ ಪ್ರಸಾದ್​ ಅವರು ಮಾಧ್ಯಮಗಳ ಎದುರು ಕೆಲವು ಮಾಹಿತಿಗಳನ್ನು ಲೀಕ್​ ಮಾಡುತ್ತಿದ್ದಾರೆ. ಸಂದರ್ಶನಗಳನ್ನು ನೀಡುವಾಗ ಸಾಕಷ್ಟು ಮಾಹಿತಿಯನ್ನು ಅವರು ಬಿಟ್ಟುಕೊಡುತ್ತಿದ್ದಾರೆ. ಇದರಿಂದ ಅಭಿಮಾನಿಗಳಲ್ಲಿ ಇರುವ ಎಗ್ಸೈಟ್​ಮೆಂಟ್​ ಕಮ್ಮಿ ಆಗುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: SS Rajamouli: ರಾಮ್​ ಚರಣ್​, ಜೂ. ಎನ್​ಟಿಆರ್​ಗೆ ಮಣೆಹಾಕಿ ರಾಜಮೌಳಿಯನ್ನು ಕಡೆಗಣಿಸಿದ ಆಸ್ಕರ್​; ಅಭಿಮಾನಿಗಳಿಗೆ ಅಸಮಾಧಾನ

ವಿಜಯೇಂದ್ರ ಪ್ರಸಾದ್​ ಅವರು ಏನೋ ಒಂದು ಹೇಳುತ್ತಾರೆ. ಅದನ್ನೇ ಇಟ್ಟುಕೊಂಡು ಸೋಶಿಯಲ್​ ಮೀಡಿಯಾದಲ್ಲಿ ನೂರಾರು ಬಗೆಯ ಅಂತೆ-ಕಂತೆಗಳು ಹುಟ್ಟಿಕೊಳ್ಳುತ್ತವೆ. ಅದಕ್ಕೆಲ್ಲ ರಾಜಮೌಳಿ ಅವರು ಉತ್ತರ ಕೊಡಬೇಕಾಗುತ್ತದೆ. ಹಾಗಾಗಿ ತಂದೆಯ ಮಾತುಗಳೇ ಈಗ ರಾಜಮೌಳಿಗೆ ತಲೆ ಬಿಸಿ ತಂದೊಡ್ಡುತ್ತಿವೆ ಎಂದು ಟಾಲಿವುಡ್​ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: SS Rajamouli: ಆಸ್ಕರ್​ ಸದಸ್ಯತ್ವ ಪಡೆದವರಿಗೆ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಕಡೆಯಿಂದ ಅಭಿನಂದನೆ

ರಾಜಮೌಳಿ ಅವರು ‘ಆರ್​ಆರ್​ಆರ್​ 2’ ಸಿನಿಮಾಗೆ ನಿರ್ದೇಶನ ಮಾಡುತ್ತಾರೋ ಇಲ್ಲವೋ ಎಂಬ ಅನುಮಾನ ಶುರುವಾಗಿದೆ. ಯಾಕೆಂದರೆ, ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ವಿಜಯೇಂದ್ರ ಪ್ರಸಾದ್​ ಅವರು, ‘ಆ ಸಿನಿಮಾಗೆ ರಾಜಮೌಳಿ ನಿರ್ದೇಶನ ಮಾಡಬಹುದು ಅಥವಾ ಅವರ ಮಾರ್ಗದರ್ಶನದಲ್ಲಿ ಬೇರೆ ಯಾರಾದರೂ ಆ್ಯಕ್ಷನ್​-ಕಟ್​ ಹೇಳಬಹುದು’ ಎಂದಿದ್ದರು. ಅದರ ಬೆನ್ನಲ್ಲೇ ಬಗೆಬಗೆಯ ಗಾಸಿಪ್​ಗಳು ಹುಟ್ಟಿಕೊಂಡಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್