AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ; ಹೊಸ ಪೋಸ್ಟರ್ ಮೂಲಕ ಹಿಗ್ಗಾಮುಗ್ಗಾ ಟ್ರೋಲ್

Kumbha Poster Troll: ಎಸ್​ಎಸ್ ರಾಜಮೌಳಿ ನಿರ್ದೇಶನದ SSMB 29 ಚಿತ್ರದ ವಿಲನ್ ಪೃಥ್ವಿರಾಜ್ ಸುಕುಮಾರನ್ 'ಕುಂಭ' ಪಾತ್ರದ ಪೋಸ್ಟರ್ ಬಿಡುಗಡೆಯಾಗಿದೆ. ನಿರೀಕ್ಷೆಗೂ ಮೀರಿ ಈ ಪೋಸ್ಟರ್ ಟ್ರೋಲ್ ಹಾಗೂ ಹಾಲಿವುಡ್ ಕಾಪಿ ಆರೋಪಗಳಿಗೆ ಗುರಿಯಾಗಿದೆ. ವಿಚಿತ್ರವಾದ ಚೇರ್​ನಲ್ಲಿ ಪೃಥ್ವಿರಾಜ್ ಕಾಣಿಸಿಕೊಂಡಿದೆ.

ರಾಜಮೌಳಿ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ; ಹೊಸ ಪೋಸ್ಟರ್ ಮೂಲಕ ಹಿಗ್ಗಾಮುಗ್ಗಾ ಟ್ರೋಲ್
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Nov 08, 2025 | 3:08 PM

Share

ಎಸ್​ಎಸ್​ ರಾಜಮೌಳಿ ಸಿನಿಮಾ ಅನೌನ್ಸ್ ಮಾಡಿದರು ಎಂದರೆ ಅದರ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗುತ್ತವೆ. ಪಾತ್ರಧಾರಿಗಳ ಪರಿಚಯಿಸಿದಾಗ ಎಲ್ಲರಿಗೂ ಖುಷಿ ಆಗುತ್ತದೆ. ಆದರೆ, ಈ ಬಾರಿ ಯಾಕೋ ರಾಜಮೌಳಿ (Rajamouli) ಅದೃಷ್ಟ ಕೈ ಕೊಟ್ಟಂತೆ ಕಾಣುತ್ತಿದೆ. ಅವರು ತಮ್ಮ ಹೊಸ ಸಿನಿಮಾದ ವಿಲನ್ ಪಾತ್ರವನ್ನು ಪರಿಚಯಿಸಿದ್ದಾರೆ. ಈ ಪಾತ್ರದ ಪೋಸ್ಟರ್ ಸಿನಿಮಾಗೆ ಹೈಪ್ ನೀಡುವ ಬದಲು ಟ್ರೋಲಿಗರಿಗೆ ಆಹಾರ ಆಗಿದ್ದಾರೆ.

‘ಎಸ್​ಎಸ್​ಎಂಬಿ 29’ ಹೆಸರಿನ ಸಿನಿಮಾನ ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ ಆದರೆ, ಪ್ರಿಯಾಂಕಾ ಚೋಪ್ರಾ ನಾಯಕಿ. ಈ ಸಿನಿಮಾದ ಟೈಟಲ್ ಇನ್ನು ಕೆಲವೇ ದಿನಗಳಲ್ಲಿ ರಿವೀಲ್ ಆಗಲಿದೆ. ಅದಕ್ಕೂ ಮೊದಲು ಚಿತ್ರದ ವಿಲನ್ ಪೃಥ್ವಿರಾಜ್ ಸುಕುಮಾರನ್​ ಪಾತ್ರವನ್ನು ರಾಜಮೌಳಿ ಅವರು ಪರಿಚಯಿಸಿದರು.

‘ಕುಂಭ’ ಹೆಸರಿನ ಪಾತ್ರದಲ್ಲಿ ಪೃಥ್ವಿರಾಜ್ ಸುಕುಮಾರನ್​ ಕಾಣಿಸಿಕೊಂಡಿದ್ದಾರೆ. ಅವರು ಚೇರ್ ಮೇಲೆ ಕುಳಿತಿದ್ದಾರೆ. ಆ ಚೇರ್​​ ವಿಚಿತ್ರವಾಗಿದೆ. ಅದಕ್ಕೆ ಎರಡು ಚಕ್ರ ಇದೆ. ಪೃಥ್ವಿರಾಜ್ ಕಾಲು ಸರಿ ಇಲ್ಲ ಎಂಬುದು ಪೋಸ್ಟರ್​​ನಲ್ಲಿ ಕಾಣಿಸುತ್ತದೆ. ಈ ಚೇರ್​ಗೆ ಚಿತ್ರ ವಿಚಿತ್ರವಾದ ಕೈಗಳಿವೆ. ಇದು ಯಾವುದೋ ಹಾಲಿವುಡ್ ಸಿನಿಮಾದಿಂದ ಕದಿಯಲ್ಪಟ್ಟ ಪೋಸ್ಟರ್ ಎಂಬ ಆರೋಪ ಒಂದು ಕಡೆಯಾದರೆ, ಟ್ರೋಲ್​ಗಳ ಕಾಟ ಮತ್ತೊಂದು ಕಡೆ.

ಇದನ್ನೂ ಓದಿ: ಪವರ್​ಫುಲ್ ‘ವಿಲನ್’ ಪರಿಚಯಿಸಿದ ರಾಜಮೌಳಿ, ಹಾಲಿವುಡ್ ಸ್ಪೂರ್ತಿ?

ಸದ್ಯ ಈ ಪೋಸ್ಟರ್ ಸಾಕಷ್ಟು ಟ್ರೋಲ್​ಗಳನ್ನು ಎದುರಿಸುತ್ತಿದೆ. ಈ ಪೋಸ್ಟರ್​ಗೆ ವಿವಿಧ ರೀತಿಯ ಟ್ರೋಲ್​ಗಳು ಎದುರಾಗುತ್ತಿವೆ. ಹಳೆಯ ಸಿನಿಮಾಗಳ ದೃಶ್ಯಗಳನ್ನು ಬಳಕೆ ಮಾಡಿಕೊಂಡು ಈ ಪೋಸ್ಟರ್ ಅನ್ನು ಟೀಕಿಸುವ ಕೆಲಸ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ