AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಣಾಸಿ’ ಚಿತ್ರಕ್ಕಾಗಿ ಹಾಲಿವುಡ್ ದೃಶ್ಯಗಳ ಕಾಪಿ ಮಾಡಿದ್ರಾ ರಾಜಮೌಳಿ? ಶುರುವಾಗಿದೆ ಚರ್ಚೆ

ರಾಜಮೌಳಿ ಅವರ ಬಹುನಿರೀಕ್ಷಿತ 'ವಾರಣಾಸಿ' ಸಿನಿಮಾದ ಟೀಸರ್ ಕೃತಿ ಚೌರ್ಯದ ಆರೋಪ ಎದುರಿಸುತ್ತಿದೆ. ನೆಟ್ಟಿಗರು ಟೀಸರ್​ನ ದೃಶ್ಯಗಳನ್ನು ಹಾಲಿವುಡ್ ಚಿತ್ರಗಳೊಂದಿಗೆ ಹೋಲಿಕೆ ಮಾಡುತ್ತಿದ್ದಾರೆ. ಇದು ಹಿಂದೆ ಕೂಡ ರಾಜಮೌಳಿ ಎದುರಿಸಿದ ಟೀಕೆಯಾಗಿತ್ತು. ಮಹೇಶ್ ಬಾಬು ಅಭಿನಯದ ಈ ಚಿತ್ರ 2027ಕ್ಕೆ ಬಿಡುಗಡೆಯಾಗಲಿದೆ.

‘ವಾರಣಾಸಿ’ ಚಿತ್ರಕ್ಕಾಗಿ ಹಾಲಿವುಡ್ ದೃಶ್ಯಗಳ ಕಾಪಿ ಮಾಡಿದ್ರಾ ರಾಜಮೌಳಿ? ಶುರುವಾಗಿದೆ ಚರ್ಚೆ
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Nov 17, 2025 | 1:08 PM

Share

ಟಾಲಿವುಡ್ ಸ್ಟಾರ್ ನಿರ್ದೇಶಕ ರಾಜಮೌಳಿ (Rajamouli) ಅವರು ಯಾವುದೇ ಪ್ರಾಜೆಕ್ಟ್ ಕೈಗೆತ್ತಿಕೊಂಡರೂ ಅದರಲ್ಲಿ ಒಂದು ವಿಶೇಷತೆ ಇರುತ್ತದೆ. ಸಿನಿಮಾ ಅದ್ದೂರಿಯಾಗಿ ಮೂಡಿ ಬರುತ್ತದೆ. ಸಿನಿಮಾದ ದೃಶ್ಯಗಳನ್ನು ಥಿಯೇಟರ್​ನಲ್ಲಿ ಕುಳಿತು ನೋಡುವಾಗ ಮೈ ರೋಮಾಂಚನ ಆಗುತ್ತದೆ. ಈಗ ಅವರ ಮೇಲೆ ಕೃತಿ ಚೌರ್ಯದ ಆರೋಪ ಕೇಳಿ ಬಂದಿದೆ. ‘ವಾರಣಾಸಿ’ ಟೀಸರ್ ನೋಡಿ ಅನೇಕರು ಇದನ್ನು ಹಾಲಿವುಡ್ ಸಿನಿಮಾ ದೃಶ್ಯಗಳಿಗೆ ಹೋಲಿಕೆ ಮಾಡಿದ್ದಾರೆ.

ರಾಜಮೌಳಿ ಅವರು  ‘ಮಗಧೀರ’, ‘ಈಗ’, ‘ಬಾಹುಬಲಿ’, ‘ಬಾಹುಬಲಿ 2’, ‘ಆರ್​ಆರ್​ಆರ್’ನಂತಹ ಸಿನಿಮಾಗಳನ್ನು ನೀಡಿದ್ದಾರೆ. ಇವೆಲ್ಲವೂ ಫ್ಯಾಂಟಸಿ ಚಿತ್ರಗಳು. ಈ ಸಿನಿಮಾಗಳಲ್ಲಿ ಅವರ ಆಲೋಚನಾ ಶಕ್ತಿ ಪ್ರೇಕ್ಷಕರನ್ನು ವಿಸ್ಮಯಗೊಳಿಸುತ್ತದೆ. ಆದರೆ, ಕೆಲವು ದೃಶ್ಯಗಳು ಬೇರೆ ಬೇರೆ ಸಿನಿಮಾಗಳ ದೃಶ್ಯಗಳಿಗೆ ಹೋಲಿಕೆ ಆಗಿದ್ದು ಇದೆ. ಈ ಸಂದರ್ಭದಲ್ಲಿ ಅವರು ಟೀಕೆ ಎದುರಿಸಿದ್ದರು.

ಈಗ ರಾಜಮೌಳಿ ಅವರ ‘ವಾರಣಾಸಿ’ ಟೀಸರ್​ನ ದೃಶ್ಯಗಳ ಮೇಲೂ ಕೃತಿ ಚೌರ್ಯದ ಆರೋಪ ಎದುರಾಗಿದೆ. ನೆಟ್ಟಿಗರು ಬೇರೆ ಬೇರೆ ಹಾಲಿವುಡ್ ಸಿನಿಮಾಗಳಿಗೆ ‘ವಾರಣಾಸಿ’ ಚಿತ್ರದ ದೃಶ್ಯವನ್ನು ಹೋಲಿಕೆ ಮಾಡುತ್ತಿದ್ದಾರೆ. ಒರಿಜಿನಲ್ ದೃಶ್ಯ ಹಾಗೂ ರಾಜಮೌಳಿ ವರ್ಷನ್ ಎಂದು ಫೋಟೋ ಸಮೇತ ಹಾಕಲಾಗಿದೆ. ಎರಡರ ಮಧ್ಯೆ ಸಾಮ್ಯತೆ ಇದೆ.

ತಮ್ಮ ಸಿನಿಮಾಗಳಲ್ಲಿ ಹಾಲಿವುಡ್​ನ ಸ್ಫೂರ್ತಿ ಇರುತ್ತದೆ ಎಂದು ರಾಜಮೌಳಿ ಹೇಳಿದ್ದಾರೆ. ಆದಾಗ್ಯೂ ರಾಜಮೌಳಿ ಅವರು ಸಾಕಷ್ಟು ಬಾರಿ ಟೀಕೆಗಳನ್ನು ಎದುರಿಸಿದ ಉದಾಹರಣೆ ಇದೆ. ಈಗ ಸಿನಿಮಾದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆದ ಬಳಿಕ ಈ ಬಗ್ಗೆ ಮತ್ತಷ್ಟು ಸ್ಪಷ್ಟನೆ ಸಿಗಲಿದೆ.

ಇದನ್ನೂ ಓದಿ: ‘ವಾರಣಾಸಿ’ ಈವೆಂಟ್​ನಲ್ಲಿ ಹಿಂದೂ ದೇವರ ಬಗ್ಗೆ ರಾಜಮೌಳಿ ಟೀಕೆ; ಸಿನಿಮಾ ಬ್ಯಾನ್ ಮಾಡಲು ಆಗ್ರಹ

‘ವಾರಣಾಸಿ’ ಸಿನಿಮಾಗೆ ಮಹೇಶ್ ಬಾಬು ಹೀರೋ. ಪ್ರಿಯಾಂಕಾ ಚೋಪ್ರಾ ನಾಯಕಿ. ಮಲಯಾಳಂನ ಪೃಥ್ವಿರಾಜ್​ ಸುಕುಮಾರನ್ ವಿಲನ್. ಈ ಸಿನಿಮಾ 2027ರ ಸಮ್ಮರ್​ ಅಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ