AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಣಾಸಿ’ ಚಿತ್ರಕ್ಕಾಗಿ ಹಾಲಿವುಡ್ ದೃಶ್ಯಗಳ ಕಾಪಿ ಮಾಡಿದ್ರಾ ರಾಜಮೌಳಿ? ಶುರುವಾಗಿದೆ ಚರ್ಚೆ

ರಾಜಮೌಳಿ ಅವರ ಬಹುನಿರೀಕ್ಷಿತ 'ವಾರಣಾಸಿ' ಸಿನಿಮಾದ ಟೀಸರ್ ಕೃತಿ ಚೌರ್ಯದ ಆರೋಪ ಎದುರಿಸುತ್ತಿದೆ. ನೆಟ್ಟಿಗರು ಟೀಸರ್​ನ ದೃಶ್ಯಗಳನ್ನು ಹಾಲಿವುಡ್ ಚಿತ್ರಗಳೊಂದಿಗೆ ಹೋಲಿಕೆ ಮಾಡುತ್ತಿದ್ದಾರೆ. ಇದು ಹಿಂದೆ ಕೂಡ ರಾಜಮೌಳಿ ಎದುರಿಸಿದ ಟೀಕೆಯಾಗಿತ್ತು. ಮಹೇಶ್ ಬಾಬು ಅಭಿನಯದ ಈ ಚಿತ್ರ 2027ಕ್ಕೆ ಬಿಡುಗಡೆಯಾಗಲಿದೆ.

‘ವಾರಣಾಸಿ’ ಚಿತ್ರಕ್ಕಾಗಿ ಹಾಲಿವುಡ್ ದೃಶ್ಯಗಳ ಕಾಪಿ ಮಾಡಿದ್ರಾ ರಾಜಮೌಳಿ? ಶುರುವಾಗಿದೆ ಚರ್ಚೆ
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Nov 17, 2025 | 1:08 PM

Share

ಟಾಲಿವುಡ್ ಸ್ಟಾರ್ ನಿರ್ದೇಶಕ ರಾಜಮೌಳಿ (Rajamouli) ಅವರು ಯಾವುದೇ ಪ್ರಾಜೆಕ್ಟ್ ಕೈಗೆತ್ತಿಕೊಂಡರೂ ಅದರಲ್ಲಿ ಒಂದು ವಿಶೇಷತೆ ಇರುತ್ತದೆ. ಸಿನಿಮಾ ಅದ್ದೂರಿಯಾಗಿ ಮೂಡಿ ಬರುತ್ತದೆ. ಸಿನಿಮಾದ ದೃಶ್ಯಗಳನ್ನು ಥಿಯೇಟರ್​ನಲ್ಲಿ ಕುಳಿತು ನೋಡುವಾಗ ಮೈ ರೋಮಾಂಚನ ಆಗುತ್ತದೆ. ಈಗ ಅವರ ಮೇಲೆ ಕೃತಿ ಚೌರ್ಯದ ಆರೋಪ ಕೇಳಿ ಬಂದಿದೆ. ‘ವಾರಣಾಸಿ’ ಟೀಸರ್ ನೋಡಿ ಅನೇಕರು ಇದನ್ನು ಹಾಲಿವುಡ್ ಸಿನಿಮಾ ದೃಶ್ಯಗಳಿಗೆ ಹೋಲಿಕೆ ಮಾಡಿದ್ದಾರೆ.

ರಾಜಮೌಳಿ ಅವರು  ‘ಮಗಧೀರ’, ‘ಈಗ’, ‘ಬಾಹುಬಲಿ’, ‘ಬಾಹುಬಲಿ 2’, ‘ಆರ್​ಆರ್​ಆರ್’ನಂತಹ ಸಿನಿಮಾಗಳನ್ನು ನೀಡಿದ್ದಾರೆ. ಇವೆಲ್ಲವೂ ಫ್ಯಾಂಟಸಿ ಚಿತ್ರಗಳು. ಈ ಸಿನಿಮಾಗಳಲ್ಲಿ ಅವರ ಆಲೋಚನಾ ಶಕ್ತಿ ಪ್ರೇಕ್ಷಕರನ್ನು ವಿಸ್ಮಯಗೊಳಿಸುತ್ತದೆ. ಆದರೆ, ಕೆಲವು ದೃಶ್ಯಗಳು ಬೇರೆ ಬೇರೆ ಸಿನಿಮಾಗಳ ದೃಶ್ಯಗಳಿಗೆ ಹೋಲಿಕೆ ಆಗಿದ್ದು ಇದೆ. ಈ ಸಂದರ್ಭದಲ್ಲಿ ಅವರು ಟೀಕೆ ಎದುರಿಸಿದ್ದರು.

ಈಗ ರಾಜಮೌಳಿ ಅವರ ‘ವಾರಣಾಸಿ’ ಟೀಸರ್​ನ ದೃಶ್ಯಗಳ ಮೇಲೂ ಕೃತಿ ಚೌರ್ಯದ ಆರೋಪ ಎದುರಾಗಿದೆ. ನೆಟ್ಟಿಗರು ಬೇರೆ ಬೇರೆ ಹಾಲಿವುಡ್ ಸಿನಿಮಾಗಳಿಗೆ ‘ವಾರಣಾಸಿ’ ಚಿತ್ರದ ದೃಶ್ಯವನ್ನು ಹೋಲಿಕೆ ಮಾಡುತ್ತಿದ್ದಾರೆ. ಒರಿಜಿನಲ್ ದೃಶ್ಯ ಹಾಗೂ ರಾಜಮೌಳಿ ವರ್ಷನ್ ಎಂದು ಫೋಟೋ ಸಮೇತ ಹಾಕಲಾಗಿದೆ. ಎರಡರ ಮಧ್ಯೆ ಸಾಮ್ಯತೆ ಇದೆ.

ತಮ್ಮ ಸಿನಿಮಾಗಳಲ್ಲಿ ಹಾಲಿವುಡ್​ನ ಸ್ಫೂರ್ತಿ ಇರುತ್ತದೆ ಎಂದು ರಾಜಮೌಳಿ ಹೇಳಿದ್ದಾರೆ. ಆದಾಗ್ಯೂ ರಾಜಮೌಳಿ ಅವರು ಸಾಕಷ್ಟು ಬಾರಿ ಟೀಕೆಗಳನ್ನು ಎದುರಿಸಿದ ಉದಾಹರಣೆ ಇದೆ. ಈಗ ಸಿನಿಮಾದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆದ ಬಳಿಕ ಈ ಬಗ್ಗೆ ಮತ್ತಷ್ಟು ಸ್ಪಷ್ಟನೆ ಸಿಗಲಿದೆ.

ಇದನ್ನೂ ಓದಿ: ‘ವಾರಣಾಸಿ’ ಈವೆಂಟ್​ನಲ್ಲಿ ಹಿಂದೂ ದೇವರ ಬಗ್ಗೆ ರಾಜಮೌಳಿ ಟೀಕೆ; ಸಿನಿಮಾ ಬ್ಯಾನ್ ಮಾಡಲು ಆಗ್ರಹ

‘ವಾರಣಾಸಿ’ ಸಿನಿಮಾಗೆ ಮಹೇಶ್ ಬಾಬು ಹೀರೋ. ಪ್ರಿಯಾಂಕಾ ಚೋಪ್ರಾ ನಾಯಕಿ. ಮಲಯಾಳಂನ ಪೃಥ್ವಿರಾಜ್​ ಸುಕುಮಾರನ್ ವಿಲನ್. ಈ ಸಿನಿಮಾ 2027ರ ಸಮ್ಮರ್​ ಅಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!