Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾಗೆ ಹೋಗಿ ತಪ್ಪು ಮಾಡಿದ್ರಾ ರಾಜಮೌಳಿ? ಶೂಟಿಂಗ್ ಸೆಟ್ ಫೋಟೋ ಲೀಕ್

ಎಸ್​ಎಸ್​ ರಾಜಮೌಳಿ, ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್​ ಮುಂತಾದವರು ಒಡಿಶಾದಲ್ಲಿದ್ದಾರೆ. ‘SSMB 29’ ಸಿನಿಮಾದ ಚಿತ್ರೀಕರಣವನ್ನು ಅಲ್ಲಿ ಮಾಡಲಾಗುತ್ತಿದೆ. ಆದರೆ ಶೂಟಿಂಗ್ ಸೆಟ್ ಫೋಟೋ ಲೀಕ್ ಆಗಿದೆ. ಒಡಿಶಾ ಸುದ್ದಿವಾಹಿನಿಗಳು ಫೋಟೋ ಲೀಕ್ ಮಾಡಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಒಡಿಶಾಗೆ ಹೋಗಿ ತಪ್ಪು ಮಾಡಿದ್ರಾ ರಾಜಮೌಳಿ? ಶೂಟಿಂಗ್ ಸೆಟ್ ಫೋಟೋ ಲೀಕ್
Ss Rajamouli
Follow us
ಮದನ್​ ಕುಮಾರ್​
|

Updated on: Mar 07, 2025 | 9:28 PM

ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮೇಕಿಂಗ್ ವಿಚಾರದಲ್ಲಿ ತುಂಬ ಕಟ್ಟುನಿಟ್ಟಾಗಿ ಇರುತ್ತಾರೆ. ಶೂಟಿಂಗ್​ ಸೆಟ್​ನಿಂದ ಯಾವುದೇ ಫೋಟೋ ಲೀಕ್ ಆಗಬಾರದು ಎಂದು ಅವರು ಬಹಳ ಎಚ್ಚರಿಕೆ ವಹಿಸುತ್ತಾರೆ. ಚಿತ್ರತಂಡದ ಎಲ್ಲರೂ ರಾಜಮೌಳಿ ಆದೇಶವನ್ನು ಪಾಲಿಸಲೇಬೇಕು. ಆದರೆ ಈಗ ಒಂದು ಎಡವಟ್ಟು ನಡೆದಿದೆ. ‘SSMB 29’ ಸಿನಿಮಾದ ಚಿತ್ರೀಕರಣದ ಸ್ಥಳದಿಂದ ಫೋಟೋ ಲೀಕ್ ಆಗಿದೆ. ಇದರಿಂದಾಗಿ ಚಿತ್ರತಂಡಕ್ಕೆ ತಲೆನೋವು ಶುರುವಾಗಿದೆ. ಮಹೇಶ್ ಬಾಬು (Mahesb Babu), ಪ್ರಿಯಾಂಕಾ ಚೋಪ್ರಾ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಮಹೇಶ್ ಬಾಬು ನಟಿಸುತ್ತಿರುವ 29ನೇ ಸಿನಿಮಾ ಇದು. ಇದರ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್​ ಎಂಬ ಕಾರಣಕ್ಕೆ ಭಾರಿ ನಿರೀಕ್ಷೆ ಮನೆ ಮಾಡಿದೆ. ಸಿಕ್ಕಾಪಟ್ಟೆ ತಯಾರಿ ಮಾಡಿಕೊಂಡ ಬಳಿಕ ಶೂಟಿಂಗ್ ಶುರು ಮಾಡಲಾಗಿದೆ. ಆದರೆ ಚಿತ್ರೀಕರಣದ ಸೆಟ್ ಫೋಟೋ ಲೀಕ್ ಆಗಿರುವುದು ತಂಡಕ್ಕೆ ಬೇಸರ ತಂದಿದೆ.

ರಾಜಮೌಳಿ ಅವರು ರಾಮೋಜಿ ಫಿಲ್ಮ್ ಸಿಟಿ ಬಿಟ್ಟು ಈ ಬಾರಿ ಒಡಿಶಾಗೆ ತೆರಳಿದ್ದಾರೆ. ಒಡಿಶಾದಲ್ಲಿ ‘SSMB 29’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ಒಡಿಶಾದ ಸುದ್ದಿ ವಾಹಿನಿಗಳು ಭಾರಿ ಉತ್ಸಾಹದಲ್ಲಿ ಶೂಟಿಂಗ್ ಸೆಟ್ ಫೋಟೋವನ್ನು ವೈರಲ್ ಮಾಡಿವೆ. ಈಗ ಆ ಸುದ್ದಿವಾಹಿನಿಗಳ ಜೊತೆ ಚಿತ್ರತಂಡದವರು ಮಾತನಾಡಬೇಕಿದೆ. ಇನ್ಮುಂದೆ ಯಾವುದೇ ಫೋಟೋ ಲೀಕ್ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ.

ಇದನ್ನೂ ಓದಿ
Image
ಆರೋಪಗಳ ಬಳಿಕ ವಿಡಿಯೋ ಹಂಚಿಕೊಂಡ ಎಸ್​ಎಸ್ ರಾಜಮೌಳಿ, ಹೇಳಿದ್ದೇನು?
Image
ರಾಜಮೌಳಿ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡ ಹಳೆ ಗೆಳೆಯ, ಕಾರಣ?
Image
ರೆಡಿಯೋ ಜಾಕಿ ಹಿಂದೆ ಬಿದ್ದ ರಾಜಮೌಳಿ, ಪ್ರಪೋಸ್ ಮಾಡೇಬಿಟ್ಟ ಚೆಲುವೆ
Image
ಮಹೇಶ್ ಬಾಬು-ರಾಜಮೌಳಿ ಸಿನಿಮಾಕ್ಕೆ ಹೆಸರು ಫಿಕ್ಸ್

ಒಡಿಶಾದಲ್ಲಿ ಶೂಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಇಷ್ಟೆಲ್ಲ ಆಯ್ತಾ ಎಂಬ ಪ್ರಶ್ನೆ ಮೂಡಿದೆ. ರಾಜಮೌಳಿ ಹೊಸ ಸಿನಿಮಾ ಮಾಡುತ್ತಾರೆ ಎಂದಾಗ ಎಲ್ಲರಲ್ಲೂ ಕುತೂಹಲ ಮೂಡುವುದು ಸಹಜ. ಕಲಾವಿದರ ಲುಕ್ ಹೇಗಿರುತ್ತದೆ? ಶೂಟಿಂಗ್ ಸೆಟ್ ಯಾವ ರೀತಿ ಇರುತ್ತದೆ ಎಂಬಿತ್ಯಾದಿ ವಿವರ ತಿಳಿದುಕೊಳ್ಳಲು ಸಿನಿಪ್ರಿಯರು ಕಾದಿರುತ್ತಾರೆ. ಅದನ್ನೆಲ್ಲ ತೋರಿಸಿ ಟಿಆರ್​ಪಿ ಪಡೆಯುವ ಉದ್ದೇಶದಿಂದ ಒಡಿಶಾದ ಸುದ್ದಿ ವಾಹಿನಿಗಳು ‘SSMB 29’ ಚಿತ್ರತಂಡದ ಮೇಲೆ ಕಣ್ಣಿಟ್ಟಿವೆ.

ಇದನ್ನೂ ಓದಿ: ಮಹೇಶ್ ಬಾಬು-ರಾಜಮೌಳಿ ಸಿನಿಮಾ ತಂಡಕ್ಕೆ ಮಲಯಾಳಂ ನಟ ಪೃಥ್ವಿರಾಜ್ ಎಂಟ್ರಿ

ಈ ಸಿನಿಮಾದಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಕೂಡ ನಟಿಸುತ್ತಿದ್ದಾರೆ. ಆದರೆ ಆ ವಿಚಾರವನ್ನು ಚಿತ್ರತಂಡದವರು ಅಧಿಕೃತವಾಗಿ ಹೇಳಿಲ್ಲ. ಪ್ರಿಯಾಂಕಾ ಚೋಪ್ರಾ ನಾಯಕಿ ಎಂಬುದನ್ನು ಕೂಡ ತಂಡದವರು ಬಾಯಿ ಬಿಟ್ಟಿಲ್ಲ. ಹಾಗಿದ್ದರೂ ಕೂಡ ವಿಷಯ ಬಹಿರಂಗ ಆಗಿದೆ.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ