AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀನ್ಯಾದಲ್ಲಿ ಯಾವುದೂ ಸರಿ ಇಲ್ಲ; ರಾಜಮೌಳಿ-ಮಹೇಶ್ ಬಾಬು ಸಿನಿಮಾ ಶೂಟ್ ಕ್ಯಾನ್ಸಲ್?

SS Rajamouli: ರಾಜಮೌಳಿ ನಿರ್ದೇಶನದ SSMB29 ಚಿತ್ರದ ಕೀನ್ಯಾ ಶೂಟಿಂಗ್ ರದ್ದಾಗಿದೆ. ಕೀನ್ಯಾದ ರಾಜಕೀಯ ಅಶಾಂತಿ ಇದಕ್ಕೆ ಕಾರಣ. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಅಭಿನಯದ ಈ ಆಕ್ಷನ್ ಅಡ್ವೆಂಚರ್ ಚಿತ್ರದ ಚಿತ್ರೀಕರಣಕ್ಕೆ ಪರ್ಯಾಯ ಯೋಜನೆಗಳನ್ನು ರೂಪಿಸಲಾಗುತ್ತಿದೆ. 2026ರಲ್ಲಿ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಕೀನ್ಯಾದಲ್ಲಿ ಯಾವುದೂ ಸರಿ ಇಲ್ಲ; ರಾಜಮೌಳಿ-ಮಹೇಶ್ ಬಾಬು ಸಿನಿಮಾ ಶೂಟ್ ಕ್ಯಾನ್ಸಲ್?
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on:Jul 09, 2025 | 12:48 PM

Share

ರಾಜಮೌಳಿ, ಪ್ರಿಯಾಂಕಾ ಚೋಪ್ರಾ ಹಾಗೂ ಮಹೇಶ್ (Mahesh Babu) ನಾನು ‘SSMB29’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಎಲ್ಲ ಅಂದುಕೊಂಡಂತೆ ನಡೆದಿದ್ದರೆ ಮುಂದಿನ ತಿಂಗಳು ಇವರು ಆಫ್ರಿಕಾದ ಕೀನ್ಯಾಗೆ ತೆರಳಿ ಶೂಟ್ ಮಾಡಬೇಕಿತ್ತು. ಆದರೆ, ಈಗ ಶೂಟ್ ಕ್ಯಾನ್ಸಲ್ ಆಗುವ ಸೂಚನೆ ಸಿಕ್ಕಿದೆ. ಸದ್ಯದ ಮಟ್ಟಿಗೆ ಪ್ಲ್ಯಾನ್ ಬದಲಾಯಿಸಿಕೊಳ್ಳಲು ತಂಡದವರು ಚಿಂತಿಸಿದ್ದಾರೆ ಎಂದು ವರದಿ ಆಗಿದೆ. ಇದಕ್ಕೆ ಕಾರಣ ಕೀನ್ಯಾದ ರಾಜಕೀಯ ಪರಿಸ್ಥಿತಿ.

ರಾಜಮೌಳಿ ಅವರು ಜುಲೈ ವೇಳೆಗೆ ಕೀನ್ಯಾಗೆ ತೆರಳಿ ಪ್ರಮುಖ ದೃಶ್ಯಗಳ ಶೂಟ್ ಮಾಡಲು ಯೋಜಿಸಿದ್ದರು. ಆಫ್ರಿಕಾದ ದಟ್ಟಾರಣ್ಯದಲ್ಲಿ ಆ್ಯಕ್ಷನ್ ದೃಶ್ಯಗಳನ್ನು ಶೂಟ್ ಮಾಡುವ ಆಲೋಚನೆ ಇತ್ತು. ಆದರೆ, ಕೀನ್ಯಾದಲ್ಲಿ ರಾಜಕೀಯ ತಿಕ್ಕಾಟ ನಡೆಯುತ್ತಿದ್ದು, ಪರಿಸ್ಥಿತಿ ಸರಿ ಇಲ್ಲ. ಹೀಗಾಗಿ, ಇಲ್ಲಿ ಶೂಟ್ ಮಾಡೋದು ಅನುಮಾನ ಎನ್ನಲಾಗುತ್ತಿದೆ.

ಪ್ಲ್ಯಾನ್ ಬಿ

ರಾಜಮೌಳಿ ಅವರು ಯಾವಾಗಲೂ ಹೆಚ್ಚು ಆಲೋಚಿಸುತ್ತಾರೆ. ಅವರ ಬಳಿ ಹಲವು ಪ್ಲ್ಯಾನ್​ಗಳು ರೆಡಿ ಇರುತ್ತವೆ. ಈಗ ಪ್ಲ್ಯಾನ್ ಎ ಕೈ ಕೊಡುವ ಸೂಚನೆ ಇದೆ. ಹೀಗಿರುವಾಗ ಪ್ಲ್ಯಾನ್ ಬಿ ಬಗ್ಗೆ ಅವರು ಆಲೋಚಿಸುವ ಸಾಧ್ಯತೆ ಇದೆ. ಇದೇ ಶೂಟ್​ನ ಬೇರೆ ಎಲ್ಲಾದರೂ ಪ್ಲ್ಯಾನ್ ಮಾಡಬಹುದು ಅಥವಾ ಈಗ ಬೇರೆ ದೃಶ್ಯಗಳ ಶೂಟ್​ ನಡೆಸಿ ಆ ಬಳಿಕ ಕೀನ್ಯಾಗೆ ತೆರಳಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ
Image
‘ನಾನು ಗೌರಿಯನ್ನು ಮದುವೆಯಾಗಿ ಆಗಿದೆ..’; ಶಾಕಿಂಗ್ ಅಪ್​ಡೇಟ್ ಕೊಟ್ಟ ಆಮಿರ್
Image
ನಿರ್ದೇಶಕನ ಜೊತೆಗಿನ ಪ್ರೀತಿ ವಿಚಾರವನ್ನು ಖಚಿತಪಡಿಸಿದ ಸಮಂತಾ; ಕ್ಯೂಟ್ ಫೋಟೋ
Image
ಆಂಧ್ರ ಪ್ರದೇಶದಲ್ಲಿ ಗಾಂಜಾ ಕಡಿಮೆ ಮಾಡಿದ ನಟ ಪವನ್ ಕಲ್ಯಾಣ್
Image
‘ನಿವೇದಿತಾಳನ್ನು ಈಗಲೂ ಮಿಸ್ ಮಾಡಿ ಕೊಳ್ತೀನಿ’; ಚಂದನ್ ಶೆಟ್ಟಿ

ಮಹೇಶ್ ಬಾಬು ಅವರು ಇದೇ ಮೊದಲ ಬಾರಿಗೆ ರಾಜಮೌಳಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಂಡ ಬಿಟ್ಟುಕೊಟ್ಟಿಲ್ಲ. ಈ ಸಿನಿಮಾಗೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ. ಇದು ಆ್ಯಕ್ಷನ್ ಅಡ್ವೆಂಚರ್ ಡ್ರಾಮಾ ಆಗಿರಲಿದೆ.

ಇದನ್ನೂ ಓದಿ: ರಾಜಮೌಳಿ ಕುಟುಂಬದಲ್ಲಿ ಶೋಕ, ಕೀರವಾಣಿ ತಂದೆ ಶಿವಶಕ್ತಿ ದತ್ತ ನಿಧನ

ರಾಜಮೌಳಿ ಜೊತೆ ಸಿನಿಮಾ ಮಾಡಬೇಕು ಎಂದರೆ ಒಂದಷ್ಟು ವರ್ಷ ಸಮಯವನ್ನು ಮೀಸಲು ಇಡಲು ರೆಡಿ ಇರಬೇಕು. ಈಗ ಮಹೇಶ್ ಬಾಬು ಕೂಡ ಅದೇ ಬದ್ಧತೆಯೊಂದಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ 2026ರ ವೇಳೆಗೆ ರಿಲೀಸ್ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:39 pm, Wed, 9 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು