AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು-ರಾಜಮೌಳಿ ಬಗ್ಗೆ ಅಪ್ಸೆಟ್​ ಆದ ಅಭಿಮಾನಿಗಳು; ಕಾರಣ ಏನು?

ಮಹೇಶ್ ಬಾಬು ಮತ್ತು ಎಸ್.ಎಸ್. ರಾಜಮೌಳಿ ಅವರ ಮುಂಬರುವ ಚಲನಚಿತ್ರ ‘SSMB29’ ಕುರಿತು ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಇದೆ. ಚಿತ್ರದ ಶೂಟಿಂಗ್ ಪ್ರಾರಂಭವಾಗಿದ್ದರೂ, ಅಧಿಕೃತ ಮಾಹಿತಿಯ ಕೊರತೆಯಿಂದ ಅಭಿಮಾನಿಗಳು ನಿರಾಶರಾಗಿದ್ದಾರೆ. ಚಿತ್ರದ ಬಜೆಟ್ 1000 ಕೋಟಿ ರೂಪಾಯಿಗಳನ್ನು ಮೀರಲಿದೆ ಎಂದು ವರದಿಯಾಗಿದೆ. 2027ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಮಹೇಶ್ ಬಾಬು-ರಾಜಮೌಳಿ ಬಗ್ಗೆ ಅಪ್ಸೆಟ್​ ಆದ ಅಭಿಮಾನಿಗಳು; ಕಾರಣ ಏನು?
ಮಹೇಶ್​ ಬಾಬು-ರಾಜಮೌಳಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 24, 2025 | 10:55 AM

Share

ಮಹೇಶ್ ಬಾಬು ಹಾಗೂ ನಿರ್ದೇಶಕ ಎಸ್​​ಎಸ್​​ ರಾಜಮೌಳಿ ಹೊಸ ಸಿನಿಮಾ ‘SSMB29’ ಬಗ್ಗೆ ಪ್ರೇಕ್ಷರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಕೆಲಸ ಆರಂಭ ಆಗಿ ಹಲವು ದಿನಗಳು ಆಗಿವೆ. ಸದ್ದಿಲ್ಲದೆ ಚಿತ್ರಕ್ಕೆ ಪೂಜೆ ಮಾಡಲಾಗಿತ್ತು. ಆದರೆ, ಈ ಬಗ್ಗೆ ಯಾವುದೇ ಅಪ್​ಡೇಟ್ ಕೊಟ್ಟಿಲ್ಲ. ಈ ವಿಚಾರವನ್ನು ಹೈಡ್ ಮಾಡಿ ಇಡಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಫ್ಯಾನ್ಸ್ ಕೂಡ ಈ ಬಗ್ಗೆ ಅಪ್​​ಸೆಟ್ ಆಗಿದ್ದಾರೆ.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಅಂದುಕೊಂಡಂತೆ ಯಶಸ್ಸು ಕಾಣಲಿಲ್ಲ. ಈ ಚಿತ್ರದವರೆಗೆ ಮಹೇಶ್ ಬಾಬು ಪ್ಯಾನ್ ಇಂಡಿಯಾ ಸಿನಿಮಾ ಮಾಡಿಲ್ಲ. ಈಗ ಅವರು ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ, ಈ ಸಿನಿಮಾ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

ಸದ್ಯ ಮಹೇಶ್ ಬಾಬು ಅಭಿಮಾನಿಗಳು ಅಪ್ಸೆಟ್ ಆಗಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ, ಸಿನಿಮಾ ಪಾತ್ರವರ್ಗದ ಬಗ್ಗೆ ಅಪ್​ಡೇಟ್ ಕೊಡುವಂತೆ ಕೇಳುತ್ತಿದ್ದಾರೆ. ಆದರೆ, ಇದಕ್ಕೆ ಮಹೇಶ್ ಬಾಬು ಅವರು ಸೊಪ್ಪು ಹಾಕುವ ಕೆಲಸ ಮಾಡುತ್ತಿಲ್ಲ. ಅವರು ಅಂದುಕೊಂಡ ದಿನಾಂಕದಂದೇ  ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಮಾಡುವ ಆಲೋಚನೆಯಲ್ಲಿ ಇದ್ದಾರೆ.

ರಾಜಮೌಳಿ ಅವರು ಸಾಮಾನ್ಯವಾಗಿ ಸುದ್ದಿಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತಿದ್ದರು. ಇದು ನಡೆದುಕೊಂಡು ಬಂದ ಪದ್ಧತಿ. ಆದರೆ, ಈ ಬಾರಿ ಮಹೇಶ್ ಬಾಬು ಅವರು ಇದಕ್ಕೆ ಬ್ರೇಕ್ ಹಾಕಿದರೇ ಎನ್ನುವ ಪ್ರಶ್ನೆ ಮೂಡಿದೆ. ಸುದ್ದಿಗೋಷ್ಠಿಯಲ್ಲಿ ಕೆಲವರು ಪ್ರಶ್ನೆಗಳನ್ನು ಕೇಳಿ ಸಿನಿಮಾ ಬಗ್ಗೆ ಮಾಹಿತಿ ರಿವೀಲ್ ಆಗಿಬಿಟ್ಟರೆ ಎನ್ನುವ ಅನುಮಾನ ಹುಟ್ಟುಹಾಕುವಂತೆ ಆಗಿದೆ.

ಇದನ್ನೂ ಓದಿ: ರಾಜಮೌಳಿ, ಮಹೇಶ್ ಬಾಬು ಸಿನಿಮಾಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಎಷ್ಟು?

ಸದ್ಯದ ಮಾಹಿತಿ ಪ್ರಕಾರ ಸಿನಿಮಾದ ಶೂಟಿಂಗ್​​ ಮೊದಲ ಹಂತದ ಶೂಟಿಂಗ್ ಬಳಿಕ ನಡೆಸಲು ಸಿದ್ಧತೆ ಮಾಡಲಾಗಿದೆ. ಮಾರ್ಚ್ ಹಾಗೂ ಏಪ್ರಿಲ್​ನಲ್ಲಿ ಮೊದಲ ಹಂತದ ಶೂಟ್ ಪೂರ್ಣಗೊಳ್ಳುವ ಸಾಧ್ಯತೆ ಇದಾಗಿದೆ. ಕೆಲವು ವರದಿಗಳ ಪ್ರಕಾರ ಈ ಚಿತ್ರದ ಬಜೆಟ್ 1000 ಕೋಟಿ ರೂಪಾಯಿ ಮೀರಲಿದೆ. ಆಫ್ರಿಕಾ ಜಂಗಲ್​ನಲ್ಲಿ ಸಿನಿಮಾ ಶೂಟ್ ನಡೆಯಲಿದೆ. 2027ರಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:53 am, Mon, 24 February 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು