AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ ಸುಕುಮಾರ್​ ಅವರು ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ.

‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?
ಅಲ್ಲು ಅರ್ಜುನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 01, 2024 | 8:17 AM

Share

‘ಪುಷ್ಪ 2’ ಚಿತ್ರದ ರಿಲೀಸ್ ದಿನಾಂಕ ಪದೇ ಪದೇ ಮುಂದಕ್ಕೆ ಹೋಗುತ್ತಿದೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಆದಾಗ್ಯೂ ಅವರ ಅಭಿಮಾನಿಗಳು ಭಕ್ತಿಯಿಂದ ಚಿತ್ರಕ್ಕಾಗಿ ಕಾಯುತ್ತಾ ಇದ್ದಾರೆ. ‘ಪುಷ್ಪ 2’ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇರಲಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಅವರು ಈ ಚಿತ್ರದಲ್ಲಿ ಅಭಿನಯ ಮಾಡುತ್ತಾ ಇದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮೂರನೇ ಪಾರ್ಟ್​ಗೆ ಲಿಂಕ್ ಕೊಡುವ ಕೆಲಸ ಆಗಿದೆಯಂತೆ.

ಈಗಾಗಲೇ ‘ಕೆಜಿಎಫ್ 2’ ಸಿನಿಮಾದಲ್ಲಿ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸಲಾಗಿದೆ. ಇಷ್ಟೇ ಅಲ್ಲ, ‘ಕೆಜಿಎಫ್ 3’ ಬರಲಿದೆ ಎನ್ನುವ ಸೂಚನೆ ನೀಡಲಾಗಿದೆ. ಅದೇ ರೀತಿ ‘ಪುಷ್ಪ 2’ ಚಿತ್ರದ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸುವ ಆಲೋಚನೆ ಸುಕುಮಾರ್​ಗೆ ಇದೆ. ಅದೇ ರೀತಿ ‘ಪುಷ್ಪ 3’ ಚಿತ್ರಕ್ಕೆ ಲಿಂಕ್ ಕೊಡುವ ಕೆಲಸ ಕೂಡ ಆಗಲಿದೆ.

‘ಪುಷ್ಪ 2’ ಕೊನೆಯಲ್ಲಿ ಸ್ಟಾರ್ ಹೀರೋನ ಪರಿಚಯಿಸುವ ಆಲೋಚನೆ ಇದೆ. ಹೀಗಾದಲ್ಲಿ ಮೂರನೇ ಭಾಗದ ಬಗ್ಗೆ ಜನರಿಗೆ ನಿರೀಕ್ಷೆ ಇರುತ್ತದೆ. ಇನ್ನು, ಕೆಲವು ವರ್ಷ ಬಿಟ್ಟು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡರೂ ಜನರು ಅದಕ್ಕಾಗಿ ಕಾಯುವಂತೆ ಇರಬೇಕು. ಆ ರೀತಿಯಲ್ಲಿ ಕ್ಲೈಮ್ಯಾಕ್ಸ್​ ರಚಿಸಲು ಆಲೋಚಿಸಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ

‘ಪುಷ್ಪ 3’ ಸಿನಿಮಾ ಸದ್ಯಕ್ಕೆ ಬರೋದಿಲ್ಲ ಎಂದು ಅಲ್ಲು ಅರ್ಜುನ್ ಈ ಮೊದಲೇ ಘೋಷಣೆ ಮಾಡಿದ್ದಾರೆ. ಆದರೆ, ಇಂದಲ್ಲ ನಾಳೆ ಸಿನಿಮಾ ಮಾಡೇ ಮಾಡುತ್ತೇವೆ ಎನ್ನುವ ಭರವಸೆಯನ್ನು ಅವರು ನೀಡಿದ್ದಾರೆ. ಅಲ್ಲು ಅರ್ಜುನ್ ಅವರ ನಟನೆಯ ‘ಅಲಾ ವೈಂಕುಂಟಪುರಮುಲೋ’ 2020ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ರಿಲೀಸ್ ಆಗಿದ್ದು ‘ಪುಷ್ಪ’ ಸಿನಿಮಾ ಮಾತ್ರ. ಸದ್ಯ ಅವರು ‘ಪುಷ್ಪ 2’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ. ಡಿಸೆಂಬರ್ 6ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​