AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ ಸುಕುಮಾರ್​ ಅವರು ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ.

‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?
ಅಲ್ಲು ಅರ್ಜುನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 01, 2024 | 8:17 AM

Share

‘ಪುಷ್ಪ 2’ ಚಿತ್ರದ ರಿಲೀಸ್ ದಿನಾಂಕ ಪದೇ ಪದೇ ಮುಂದಕ್ಕೆ ಹೋಗುತ್ತಿದೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಆದಾಗ್ಯೂ ಅವರ ಅಭಿಮಾನಿಗಳು ಭಕ್ತಿಯಿಂದ ಚಿತ್ರಕ್ಕಾಗಿ ಕಾಯುತ್ತಾ ಇದ್ದಾರೆ. ‘ಪುಷ್ಪ 2’ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇರಲಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಅವರು ಈ ಚಿತ್ರದಲ್ಲಿ ಅಭಿನಯ ಮಾಡುತ್ತಾ ಇದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮೂರನೇ ಪಾರ್ಟ್​ಗೆ ಲಿಂಕ್ ಕೊಡುವ ಕೆಲಸ ಆಗಿದೆಯಂತೆ.

ಈಗಾಗಲೇ ‘ಕೆಜಿಎಫ್ 2’ ಸಿನಿಮಾದಲ್ಲಿ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸಲಾಗಿದೆ. ಇಷ್ಟೇ ಅಲ್ಲ, ‘ಕೆಜಿಎಫ್ 3’ ಬರಲಿದೆ ಎನ್ನುವ ಸೂಚನೆ ನೀಡಲಾಗಿದೆ. ಅದೇ ರೀತಿ ‘ಪುಷ್ಪ 2’ ಚಿತ್ರದ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸುವ ಆಲೋಚನೆ ಸುಕುಮಾರ್​ಗೆ ಇದೆ. ಅದೇ ರೀತಿ ‘ಪುಷ್ಪ 3’ ಚಿತ್ರಕ್ಕೆ ಲಿಂಕ್ ಕೊಡುವ ಕೆಲಸ ಕೂಡ ಆಗಲಿದೆ.

‘ಪುಷ್ಪ 2’ ಕೊನೆಯಲ್ಲಿ ಸ್ಟಾರ್ ಹೀರೋನ ಪರಿಚಯಿಸುವ ಆಲೋಚನೆ ಇದೆ. ಹೀಗಾದಲ್ಲಿ ಮೂರನೇ ಭಾಗದ ಬಗ್ಗೆ ಜನರಿಗೆ ನಿರೀಕ್ಷೆ ಇರುತ್ತದೆ. ಇನ್ನು, ಕೆಲವು ವರ್ಷ ಬಿಟ್ಟು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡರೂ ಜನರು ಅದಕ್ಕಾಗಿ ಕಾಯುವಂತೆ ಇರಬೇಕು. ಆ ರೀತಿಯಲ್ಲಿ ಕ್ಲೈಮ್ಯಾಕ್ಸ್​ ರಚಿಸಲು ಆಲೋಚಿಸಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ

‘ಪುಷ್ಪ 3’ ಸಿನಿಮಾ ಸದ್ಯಕ್ಕೆ ಬರೋದಿಲ್ಲ ಎಂದು ಅಲ್ಲು ಅರ್ಜುನ್ ಈ ಮೊದಲೇ ಘೋಷಣೆ ಮಾಡಿದ್ದಾರೆ. ಆದರೆ, ಇಂದಲ್ಲ ನಾಳೆ ಸಿನಿಮಾ ಮಾಡೇ ಮಾಡುತ್ತೇವೆ ಎನ್ನುವ ಭರವಸೆಯನ್ನು ಅವರು ನೀಡಿದ್ದಾರೆ. ಅಲ್ಲು ಅರ್ಜುನ್ ಅವರ ನಟನೆಯ ‘ಅಲಾ ವೈಂಕುಂಟಪುರಮುಲೋ’ 2020ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ರಿಲೀಸ್ ಆಗಿದ್ದು ‘ಪುಷ್ಪ’ ಸಿನಿಮಾ ಮಾತ್ರ. ಸದ್ಯ ಅವರು ‘ಪುಷ್ಪ 2’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ. ಡಿಸೆಂಬರ್ 6ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ