AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ ಸುಕುಮಾರ್​ ಅವರು ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ.

‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?
ಅಲ್ಲು ಅರ್ಜುನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 01, 2024 | 8:17 AM

Share

‘ಪುಷ್ಪ 2’ ಚಿತ್ರದ ರಿಲೀಸ್ ದಿನಾಂಕ ಪದೇ ಪದೇ ಮುಂದಕ್ಕೆ ಹೋಗುತ್ತಿದೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಆದಾಗ್ಯೂ ಅವರ ಅಭಿಮಾನಿಗಳು ಭಕ್ತಿಯಿಂದ ಚಿತ್ರಕ್ಕಾಗಿ ಕಾಯುತ್ತಾ ಇದ್ದಾರೆ. ‘ಪುಷ್ಪ 2’ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇರಲಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಅವರು ಈ ಚಿತ್ರದಲ್ಲಿ ಅಭಿನಯ ಮಾಡುತ್ತಾ ಇದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮೂರನೇ ಪಾರ್ಟ್​ಗೆ ಲಿಂಕ್ ಕೊಡುವ ಕೆಲಸ ಆಗಿದೆಯಂತೆ.

ಈಗಾಗಲೇ ‘ಕೆಜಿಎಫ್ 2’ ಸಿನಿಮಾದಲ್ಲಿ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸಲಾಗಿದೆ. ಇಷ್ಟೇ ಅಲ್ಲ, ‘ಕೆಜಿಎಫ್ 3’ ಬರಲಿದೆ ಎನ್ನುವ ಸೂಚನೆ ನೀಡಲಾಗಿದೆ. ಅದೇ ರೀತಿ ‘ಪುಷ್ಪ 2’ ಚಿತ್ರದ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸುವ ಆಲೋಚನೆ ಸುಕುಮಾರ್​ಗೆ ಇದೆ. ಅದೇ ರೀತಿ ‘ಪುಷ್ಪ 3’ ಚಿತ್ರಕ್ಕೆ ಲಿಂಕ್ ಕೊಡುವ ಕೆಲಸ ಕೂಡ ಆಗಲಿದೆ.

‘ಪುಷ್ಪ 2’ ಕೊನೆಯಲ್ಲಿ ಸ್ಟಾರ್ ಹೀರೋನ ಪರಿಚಯಿಸುವ ಆಲೋಚನೆ ಇದೆ. ಹೀಗಾದಲ್ಲಿ ಮೂರನೇ ಭಾಗದ ಬಗ್ಗೆ ಜನರಿಗೆ ನಿರೀಕ್ಷೆ ಇರುತ್ತದೆ. ಇನ್ನು, ಕೆಲವು ವರ್ಷ ಬಿಟ್ಟು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡರೂ ಜನರು ಅದಕ್ಕಾಗಿ ಕಾಯುವಂತೆ ಇರಬೇಕು. ಆ ರೀತಿಯಲ್ಲಿ ಕ್ಲೈಮ್ಯಾಕ್ಸ್​ ರಚಿಸಲು ಆಲೋಚಿಸಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ

‘ಪುಷ್ಪ 3’ ಸಿನಿಮಾ ಸದ್ಯಕ್ಕೆ ಬರೋದಿಲ್ಲ ಎಂದು ಅಲ್ಲು ಅರ್ಜುನ್ ಈ ಮೊದಲೇ ಘೋಷಣೆ ಮಾಡಿದ್ದಾರೆ. ಆದರೆ, ಇಂದಲ್ಲ ನಾಳೆ ಸಿನಿಮಾ ಮಾಡೇ ಮಾಡುತ್ತೇವೆ ಎನ್ನುವ ಭರವಸೆಯನ್ನು ಅವರು ನೀಡಿದ್ದಾರೆ. ಅಲ್ಲು ಅರ್ಜುನ್ ಅವರ ನಟನೆಯ ‘ಅಲಾ ವೈಂಕುಂಟಪುರಮುಲೋ’ 2020ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ರಿಲೀಸ್ ಆಗಿದ್ದು ‘ಪುಷ್ಪ’ ಸಿನಿಮಾ ಮಾತ್ರ. ಸದ್ಯ ಅವರು ‘ಪುಷ್ಪ 2’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ. ಡಿಸೆಂಬರ್ 6ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್