AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ ಸುಕುಮಾರ್​ ಅವರು ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ.

‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?
ಅಲ್ಲು ಅರ್ಜುನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 01, 2024 | 8:17 AM

Share

‘ಪುಷ್ಪ 2’ ಚಿತ್ರದ ರಿಲೀಸ್ ದಿನಾಂಕ ಪದೇ ಪದೇ ಮುಂದಕ್ಕೆ ಹೋಗುತ್ತಿದೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಆದಾಗ್ಯೂ ಅವರ ಅಭಿಮಾನಿಗಳು ಭಕ್ತಿಯಿಂದ ಚಿತ್ರಕ್ಕಾಗಿ ಕಾಯುತ್ತಾ ಇದ್ದಾರೆ. ‘ಪುಷ್ಪ 2’ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇರಲಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಅವರು ಈ ಚಿತ್ರದಲ್ಲಿ ಅಭಿನಯ ಮಾಡುತ್ತಾ ಇದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮೂರನೇ ಪಾರ್ಟ್​ಗೆ ಲಿಂಕ್ ಕೊಡುವ ಕೆಲಸ ಆಗಿದೆಯಂತೆ.

ಈಗಾಗಲೇ ‘ಕೆಜಿಎಫ್ 2’ ಸಿನಿಮಾದಲ್ಲಿ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸಲಾಗಿದೆ. ಇಷ್ಟೇ ಅಲ್ಲ, ‘ಕೆಜಿಎಫ್ 3’ ಬರಲಿದೆ ಎನ್ನುವ ಸೂಚನೆ ನೀಡಲಾಗಿದೆ. ಅದೇ ರೀತಿ ‘ಪುಷ್ಪ 2’ ಚಿತ್ರದ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸುವ ಆಲೋಚನೆ ಸುಕುಮಾರ್​ಗೆ ಇದೆ. ಅದೇ ರೀತಿ ‘ಪುಷ್ಪ 3’ ಚಿತ್ರಕ್ಕೆ ಲಿಂಕ್ ಕೊಡುವ ಕೆಲಸ ಕೂಡ ಆಗಲಿದೆ.

‘ಪುಷ್ಪ 2’ ಕೊನೆಯಲ್ಲಿ ಸ್ಟಾರ್ ಹೀರೋನ ಪರಿಚಯಿಸುವ ಆಲೋಚನೆ ಇದೆ. ಹೀಗಾದಲ್ಲಿ ಮೂರನೇ ಭಾಗದ ಬಗ್ಗೆ ಜನರಿಗೆ ನಿರೀಕ್ಷೆ ಇರುತ್ತದೆ. ಇನ್ನು, ಕೆಲವು ವರ್ಷ ಬಿಟ್ಟು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡರೂ ಜನರು ಅದಕ್ಕಾಗಿ ಕಾಯುವಂತೆ ಇರಬೇಕು. ಆ ರೀತಿಯಲ್ಲಿ ಕ್ಲೈಮ್ಯಾಕ್ಸ್​ ರಚಿಸಲು ಆಲೋಚಿಸಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ

‘ಪುಷ್ಪ 3’ ಸಿನಿಮಾ ಸದ್ಯಕ್ಕೆ ಬರೋದಿಲ್ಲ ಎಂದು ಅಲ್ಲು ಅರ್ಜುನ್ ಈ ಮೊದಲೇ ಘೋಷಣೆ ಮಾಡಿದ್ದಾರೆ. ಆದರೆ, ಇಂದಲ್ಲ ನಾಳೆ ಸಿನಿಮಾ ಮಾಡೇ ಮಾಡುತ್ತೇವೆ ಎನ್ನುವ ಭರವಸೆಯನ್ನು ಅವರು ನೀಡಿದ್ದಾರೆ. ಅಲ್ಲು ಅರ್ಜುನ್ ಅವರ ನಟನೆಯ ‘ಅಲಾ ವೈಂಕುಂಟಪುರಮುಲೋ’ 2020ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ರಿಲೀಸ್ ಆಗಿದ್ದು ‘ಪುಷ್ಪ’ ಸಿನಿಮಾ ಮಾತ್ರ. ಸದ್ಯ ಅವರು ‘ಪುಷ್ಪ 2’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ. ಡಿಸೆಂಬರ್ 6ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!