AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್​’ ಸಿನಿಮಾ ಹೇಗೆ ಮಾಡಿದಿರಿ?’; ರಾಜಮೌಳಿಗೆ ಹಾಲಿವುಡ್​ ದಿಗ್ಗಜ ​ಸ್ಪೀಲ್​ಬರ್ಗ್ ಪ್ರಶ್ನೆ

ರಾಜಮೌಳಿ ಹಾಗೂ ಸ್ಟೀವನ್​ ಸ್ಪೀಲ್​ಬರ್ಗ್ ಅವರು ಈ ವರ್ಷದ ಆರಂಭದಲ್ಲಿ ಭೇಟಿ ಆಗಿದ್ದರು. ಲಾಸ್ ಏಂಜಲೀಸ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಭೇಟಿ ನಡೆದಿತ್ತು. ಈ ಸಂದರ್ಭದಲ್ಲಿ ಅವರು ‘ಆರ್​ಆರ್​ಆರ್​’ ಚಿತ್ರವನ್ನು ನೋಡಿರಲಿಲ್ಲ.

‘ಆರ್​ಆರ್​ಆರ್​’ ಸಿನಿಮಾ ಹೇಗೆ ಮಾಡಿದಿರಿ?’; ರಾಜಮೌಳಿಗೆ ಹಾಲಿವುಡ್​ ದಿಗ್ಗಜ ​ಸ್ಪೀಲ್​ಬರ್ಗ್ ಪ್ರಶ್ನೆ
ಸ್ಟೀವನ್​ ಸ್ಪೀಲ್​ಬರ್ಗ್-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Feb 11, 2023 | 10:25 AM

Share

ಹಾಲಿವುಡ್​ ಸಿನಿಮಾಗಳನ್ನು ನೋಡಿ ಭಾರತದ ನಿರ್ದೇಶಕರು ಅಚ್ಚರಿ ಪಡುತ್ತಿದ್ದ ಕಾಲವೊಂದಿತ್ತು. ಈ ಸಿನಿಮಾಗಳ ಮೇಕಿಂಗ್ ಬಗ್ಗೆ ಅಚ್ಚರಿ ಮೂಡುವಂತೆ ಅವರು ಮಾಡುತ್ತಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಭಾರತದ ನಿರ್ದೇಶಕರ ಕೆಲಸವನ್ನು ವಿದೇಶಿಗರು ಮೆಚ್ಚಿಕೊಳ್ಳುತ್ತಿದ್ದಾರೆ. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ (RRR Movie) ಸೇರಿ ಭಾರತದ ಅನೇಕ ಸಿನಿಮಾಗಳಿಗೆ ವಿದೇಶದಲ್ಲಿ ಮನ್ನಣೆ ಸಿಗುತ್ತಿದೆ. ವಿಶೇಷ ಎಂದರೆ, ‘ಆರ್​ಆರ್​ಆರ್​’ ಸಿನಿಮಾ ಹೇಗೆ ಮಾಡಿದಿರಿ ಎಂಬುದನ್ನು ನನಗೂ ತಿಳಿಸಿ ಎಂದು ರಾಜಮೌಳಿಗೆ (SS Rajamouli) ಹಾಲಿವುಡ್​ ದಿಗ್ಗಜ ಸ್ಟೀವನ್​ ಸ್ಪೀಲ್​ಬರ್ಗ್ ಕೋರಿದ್ದಾರೆ.

ರಾಜಮೌಳಿ ಹಾಗೂ ಸ್ಟೀವನ್​ ಸ್ಪೀಲ್​ಬರ್ಗ್ ಅವರು ಈ ವರ್ಷದ ಆರಂಭದಲ್ಲಿ ಭೇಟಿ ಆಗಿದ್ದರು. ಲಾಸ್ ಏಂಜಲೀಸ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಭೇಟಿ ನಡೆದಿತ್ತು. ಈ ಸಂದರ್ಭದಲ್ಲಿ ಅವರು ‘ಆರ್​ಆರ್​ಆರ್​’ ಚಿತ್ರವನ್ನು ನೋಡಿರಲಿಲ್ಲ. ಹೀಗಾಗಿ, ಈ ಸಿನಿಮಾ ಬಗ್ಗೆ ಅವರಿಗೆ ಏನನ್ನೂ ಹೇಳೋಕೆ ಸಾಧ್ಯವಾಗಿರಲಿಲ್ಲ. ಆಗ ಇಬ್ಬರೂ ಉಭಯಕುಶಲೋಪರಿ ಮಾತನಾಡಿಕೊಂಡಿದ್ದರು. ಈಗ ಸ್ಟೀವನ್​ ಸ್ಪೀಲ್​ಬರ್ಗ್ ಅವರು ‘ಆರ್​ಆರ್​ಆರ್​’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

‘ಆರ್​ಆರ್​ಆರ್​ ಸಿನಿಮಾ ಅದ್ಭುತವಾಗಿದೆ. ನನ್ನ ಕಣ್ಣುಗಳಲ್ಲೇ ಅದನ್ನು ನಂಬಲು ಸಾಧ್ಯವಾಗಿಲ್ಲ. ರಾಮ್ ಚರಣ್, ಜ್ಯೂ.ಎನ್​ಟಿಆರ್​, ಆಲಿಯಾ ಭಟ್ ಅವರ ನಟನೆ ಅದ್ಭುತವಾಗಿತ್ತು. ಚಿತ್ರದ ಕ್ಲೈಮ್ಯಾಕ್ಸ್ ಇಷ್ಟವಾಯಿತು. ‘ಆರ್​ಆರ್​ಆರ್​’ ಚಿತ್ರಕ್ಕೆ ಅಭಿನಂದನೆಗಳು’ ಎಂದು ಸ್ಟೀವನ್​ ಸ್ಪೀಲ್​ಬರ್ಗ್ ಹೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ರಾಜಮೌಳಿ ಅವರು, ‘ಧನ್ಯವಾದಗಳು. ನಿಮ್ಮ ಈ ಮಾತಿನಿಂದ ಕುರ್ಚಿ ಬಿಟ್ಟು ಡ್ಯಾನ್ಸ್ ಮಾಡಬೇಕು ಎನಿಸುತ್ತಿದೆ’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ
Image
ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ಬಾಚಿದ ‘ಬ್ರಹ್ಮಾಸ್ತ್ರ’ ಚಿತ್ರದಿಂದ ರಾಜಮೌಳಿಗೆ ಸಿಕ್ಕ ಹಣ ಎಷ್ಟು?
Image
ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ಪಬ್ಲಿಸಿಟಿ ಸ್ಟಂಟ್ಸ್ ಎಂದ ನೆಟ್ಟಿಗರು
Image
ಕೊನೇ ಕ್ಷಣದಲ್ಲಿ ಅಮಿತ್ ಶಾ ಭೇಟಿಯಿಂದ ಹಿಂದೆ ಸರಿದ ರಾಜಮೌಳಿ? ಇದಕ್ಕಿದೆ ದೊಡ್ಡ ಕಾರಣ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

‘ಆರ್​ಆರ್​​ಆರ್​’ ಚಿತ್ರದ ಮೇಕಿಂಗ್ ಬಗ್ಗೆ ಸ್ಟೀವನ್​ ಸ್ಪೀಲ್​ಬರ್ಗ್ ಅವರಿಗೆ ಒಂದಷ್ಟು ಪ್ರಶ್ನೆಗಳು ಉಳಿದುಕೊಂಡಿವೆ. ಮುಖತಃ ಭೇಟಿ ಆದಾಗ ಈ ಪ್ರಶ್ನೆಗಳನ್ನು ಕೇಳುವುದಾಗಿ ರಾಜಮೌಳಿಗೆ ಸ್ಟೀವನ್​ ಸ್ಪೀಲ್​ಬರ್ಗ್ ಹೇಳಿದ್ದಾರೆ. ಇದನ್ನು ಕೇಳಿ ರಾಜಮೌಳಿ ಖುಷಿ ಆಗಿದ್ದಾರೆ.

ಇದನ್ನೂ ಓದಿ: ‘ಗೋಲ್ಡನ್​ ಗ್ಲೋಬ್​​’ ಬಳಿಕ ವಿದೇಶದಲ್ಲಿ ಮತ್ತೆರಡು ಪ್ರಶಸ್ತಿ ಬಾಚಿಕೊಂಡ ‘ಆರ್​ಆರ್​ಆರ್​’ ಚಿತ್ರ

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು.. ಹಾಡು ಆಸ್ಕರ್​ಗೆ ನಾಮಿನೇಷನ್ ಆಗಿದೆ. 95ನೇ ಅಕಾಡೆಮಿ ಅವಾರ್ಡ್​ ಕಾರ್ಯಕ್ರಮ ಮಾರ್ಚ್​ 12ರಂದು ಲಾಸ್ ಏಂಜಲೀಸ್​ನಲ್ಲಿ ನಡೆಯಲಿದೆ. ಅವಾರ್ಡ್ ಕಾರ್ಯಮದಲ್ಲಿ ‘ಆರ್​ಆರ್​ಆರ್’ ತಂಡ ಭಾಗಿ ಆಗಲಿದೆ. ಭಾರತಕ್ಕೆ ಒಂದು ಅವಾರ್ಡ್ ತರುವ ಕನಸನ್ನು ರಾಜಮೌಳಿ ಕಾಣುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್