AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stunt Master Death: ಸಿನಿಮಾ ಶೂಟಿಂಗ್​ ವೇಳೆ ಕ್ರೇನ್​ ಅವಘಡ; ಹಿರಿಯ ಸಾಹಸ ನಿರ್ದೇಶಕ ನಿಧನ

Viduthalai Movie | Stunt Master Suresh: ದುರ್ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ.

Stunt Master Death: ಸಿನಿಮಾ ಶೂಟಿಂಗ್​ ವೇಳೆ ಕ್ರೇನ್​ ಅವಘಡ; ಹಿರಿಯ ಸಾಹಸ ನಿರ್ದೇಶಕ ನಿಧನ
ಸ್ಟಂಟ್ ಮಾಸ್ಟರ್ ಸುರೇಶ್
TV9 Web
| Edited By: |

Updated on:Dec 05, 2022 | 11:48 AM

Share

ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಗ್ಯಾರಂಟಿ ಎಂಬುದಕ್ಕೆ ಈಗಾಗಲೇ ಅನೇಕ ನಿದರ್ಶನಗಳಿವೆ. ಅಂಥ ಒಂದು ದುರ್ಘಟನೆ ಈಗ ಮತ್ತೆ ಸಂಭವಿಸಿದೆ. ತಮಿಳು ಸಿನಿಮಾವೊಂದರ (Tamil Cinema) ಶೂಟಿಂಗ್​ ಸಮಯದಲ್ಲಿ ಹಿರಿಯ ಸಾಹಸ ನಿರ್ದೇಶಕರೊಬ್ಬರು ನಿಧನರಾಗಿದ್ದಾರೆ. ಕ್ರೇನ್​ ವೈಫಲ್ಯದಿಂದಾಗಿ ಈ ಘಟನೆ ನಡೆದಿದೆ. 20 ಅಡಿ ಮೇಲಿಂದ ಬಿದ್ದ ಪರಿಣಾಮ ಸ್ಟಂಟ್​ ಮಾಸ್ಟರ್​ ಸಾವು (Stunt Master Death) ಸಂಭವಿಸಿದೆ. ಕಳೆದ ಹಲವಾರು ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ಸಾಹಸ ನಿರ್ದೇಶಕರಾಗಿದ್ದ ಸುರೇಶ್​ ಅವರೇ ಮೃತ ದುರ್ದೈವಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದಾರೆ. ಸುರೇಶ್​ (Stunt Master Suresh) ಅವರಿಗೆ 54 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಮಕ್ಕಳನ್ನು ಅವರು ಅಗಲಿದ್ದಾರೆ.

ಶನಿವಾರ (ಡಿ.3) ಮುಂಜಾನೆ 10 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿತು ಎಂದು ವರದಿ ಆಗಿದೆ. ಖ್ಯಾತ ನಿರ್ದೇಶಕ ವೆಟ್ರಿಮಾರನ್​ ಅವರು ‘ವಿದುತಲೈ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಸೂರಿ ಮುಖ್ಯಭೂಮಿಕೆ ನಿಭಾಯಿಸುತ್ತಿರುವ, ವಿಜಯ್​ ಸೇತುಪತಿ ಅತಿಥಿ ಪಾತ್ರ ಮಾಡುತ್ತಿರುವ ಈ ಸಿನಿಮಾದ ಶೂಟಿಂಗ್​ ವಂದಲೂರ್​ ಸಮೀಪ ನಡೆಯುತ್ತಿತ್ತು. ಮುಖ್ಯ ಸಾಹಸ ನಿರ್ದೇಶಕರ ಜೊತೆ ಸುರೇಶ್​ ಕೆಲಸ ಮಾಡುತ್ತಿದ್ದರು. ದೃಶ್ಯವೊಂದರ ಚಿತ್ರೀಕರಣಕ್ಕಾಗಿ ಸ್ಟಂಟ್ಸ್​ ಕಲಾವಿದರಿಗೆ ಹಗ್ಗ ಕಟ್ಟಿ ಕ್ರೇನ್​ಗೆ ನೇತು ಹಾಕಲಾಗಿತ್ತು. ಸುರೇಶ್​ ಅವರು ನಟಿಸುವಾಗ ಹಗ್ಗ ತುಂಡಾಗಿದ್ದರಿಂದ ಅವರು ಕ್ರೇನ್​ನಿಂದ ಕೆಳಗೆ ಬಿದ್ದರು ಎಂದು ತಿಳಿದುಬಂದಿದೆ.

ಕೂಡಲೇ ಸುರೇಶ್​ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಇನ್ನೊರ್ವ ಸ್ಟಂಟ್​ ಕಲಾವಿದನಿಗೆ ತೀವ್ರ ಗಾಯಗಳಾಗಿವೆ. ಕಳೆದ 25 ವರ್ಷಗಳಿಂದ ಸುರೇಶ್​ ಅವರು ಸ್ಟಂಟ್​ ಮಾಸ್ಟರ್​ ಆಗಿದ್ದರು. ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ.

ಇದನ್ನೂ ಓದಿ
Image
‘ನಾನು ಹೆದರಿ ಎಲ್ಲಿಯೂ ಓಡಿ ಹೋಗಿಲ್ಲ’; ವಿಚಾರಣೆ ಬಳಿಕ ನಟ ಅಜಯ್​ ರಾವ್​ ಮಾತು
Image
‘ಲವ್​ ಯೂ ರಚ್ಚು’ ಫೈಟರ್​ ವಿವೇಕ್​ ಸಾವಿಗೆ ಅಸಲಿ ಕಾರಣ ಏನು? ಪ್ರತ್ಯಕ್ಷದರ್ಶಿ ರಂಜಿತ್​ ತೆರೆದಿಟ್ಟ ಸತ್ಯ
Image
Fighter Vivek Death: ‘ಲವ್​ ಯೂ ರಚ್ಚು’ ಚಿತ್ರದ ನಿರ್ದೇಶಕ ಸೇರಿದಂತೆ ಮೂವರಿಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ
Image
Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

ರೈಲು ಅಪಘಾತದ ಶೂಟಿಂಗ್​:

‘ವಿದುತಲೈ’ ಚಿತ್ರದಲ್ಲಿ ಬರುವ ರೈಲು ಅಪಘಾತದ ದೃಶ್ಯವನ್ನು ಚಿತ್ರೀಕರಿಸಲಾಗುತ್ತಿತ್ತು. ಅದಕ್ಕಾಗಿ ಬೃಹತ್​ ಸೆಟ್​ ನಿರ್ಮಾಣ ಮಾಡಲಾಗಿತ್ತು. ಹಳಿ ತಪ್ಪಿ ಬಿದ್ದ ರೈಲು ಬೋಗಿಗಳ ಮೇಲೆ ನಟರು ಓಡಿ ಹೋಗುವ ದೃಶ್ಯವನ್ನು ಚಿತ್ರೀಕರಿಸಲಾಗುತ್ತಿತ್ತು. ಅದರಲ್ಲಿ ಭಾಗ ವಹಿಸಿದ್ದ ಸುರೇಶ್​ ಅವರು ಈ ಅವಘಡದಿಂದ ಕೊನೆಯುಸಿರು ಎಳೆದರು.

ಈ ದುರ್ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾರ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ. ಸುರೇಶ್​ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದಾರೆ. ಕನ್ನಡದ ‘ಲವ್​ ಯೂ ರಚ್ಚು’, ‘ಮಾಸ್ತಿ ಗುಡಿ’ ಸಿನಿಮಾಗಳ ಶೂಟಿಂಗ್​ ಸಂದರ್ಭದಲ್ಲೂ ಇಂಥ ಕಹಿ ಘಟನೆ ನಡೆದಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:44 am, Mon, 5 December 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ