AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಬರ್ತಿದೆ ನೇತಾಜಿ ಸುಭಾಷ್​ ಚಂದ್ರ ಬೋಸ್​ ಬಗ್ಗೆ ಧಾರಾವಾಹಿ; ಜೂನ್​ 7ರಿಂದ ಶುರು

ಜೀ ಕನ್ನಡ ವಾಹಿನಿಯಲ್ಲಿ ‘ನೇತಾಜಿ ಸುಭಾಷ್ ಚಂದ್ರ ಬೋಸ್’ ಧಾರಾವಾಹಿ ಜೂನ್ 7ರಿಂದ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 5ರಿಂದ 6 ಗಂಟೆವರೆಗೆ ಪ್ರಸಾರವಾಗಲಿದೆ.

ಕನ್ನಡದಲ್ಲಿ ಬರ್ತಿದೆ ನೇತಾಜಿ ಸುಭಾಷ್​ ಚಂದ್ರ ಬೋಸ್​ ಬಗ್ಗೆ ಧಾರಾವಾಹಿ; ಜೂನ್​ 7ರಿಂದ ಶುರು
ಸುಭಾಷ್​ ಚಂದ್ರ ಬೋಸ್
ರಾಜೇಶ್ ದುಗ್ಗುಮನೆ
|

Updated on: Jun 02, 2021 | 4:08 PM

Share

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸ್ವತಃ ಸೈನ್ಯ ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದವರು ನೇತಾಜಿ ಸುಭಾಷ್​ ಚಂದ್ರ ಬೋಸ್. ಇವರ ಬಗ್ಗೆ ಸಿನಿಮಾ ಹಾಗೂ ವೆಬ್​ ಸೀರಿಸ್​ಗಳು ಸಿದ್ಧಗೊಂಡಿವೆ. ಈಗ ಇವರ ಬಗ್ಗೆ ಕನ್ನಡದಲ್ಲಿ ಧಾರಾವಾಹಿ ಕೂಡ ಬರುತ್ತಿದೆ ಅನ್ನೋದು ವಿಶೇಷ.  

ಹೌದು, ಜೀ ಕನ್ನಡ ವಾಹಿನಿಯಲ್ಲಿ ‘ನೇತಾಜಿ ಸುಭಾಷ್ ಚಂದ್ರ ಬೋಸ್’ ಧಾರಾವಾಹಿ ಜೂನ್ 7ರಿಂದ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 5ರಿಂದ 6 ಗಂಟೆವರೆಗೆ ಪ್ರಸಾರವಾಗಲಿದೆ. ಈ ಧಾರಾವಾಹಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸೈನ್ಯ ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಧೀರ ನಾಯಕನ ಐತಿಹಾಸಿಕ ಕಥೆಯನ್ನು ಬಿಂಬಿಸಲಿದೆ.

ಅಂಬೇಡ್ಕರ್ ಧಾರಾವಾಹಿಯನ್ನು ಜೀ ಕನ್ನಡ ಈ ಮೊದಲು ಪ್ರಸಾರ ಮಾಡಿತ್ತು. ಈ ಮೂಲಕ ಹೆಚ್ಚಿನ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈಗ ಸುಭಾಷ್ ಚಂದ್ರ ಬೋಸ್ ಅವರ ಜೀವನಗಾಥೆಯನ್ನು ಮನರಂಜನೆ ರೀತಿಯಲ್ಲಿ ಕನ್ನಡ ಪ್ರೇಕ್ಷಕರ ಮುಂದಿಡುತ್ತಿದೆ.

ಒರಿಸ್ಸಾದ ಕಟಕ್​ನಲ್ಲಿ ಜನಿಸಿದ ಸುಭಾಷ್​ಚಂದ್ರ ಬೋಸ್ ಸ್ವಾತಂತ್ರ್ಯ ಹೋರಾಟದಲ್ಲಿ ತುಂಬಾನೇ ಮಹತ್ವ ವಹಿಸಿದ್ದಾರೆ. ಜರ್ಮನಿಯ ನೆರವಿನೊಂದಿಗೆ ಇಂಡಿಯನ್ ನ್ಯಾಷನಲ್ ಆರ್ಮಿ ಕಟ್ಟಿದರು. ಅಹಿಂಸಾ ಹೋರಾಟ ವಿರೋಧಿಸಿ ಸ್ವಂತ ಸೇನೆ ಕಟ್ಟಿದರು. ಸುಭಾಷ್ ​ಚಂದ್ರ ಬೋಸ್​ ಅವರು ವಿಮಾನ ಅಪಘಾತದಲ್ಲಿ ಮೃತರಾದರು ಎಂದು ನಂಬಲಾಗಿದೆ. ಆದರೆ ಅದನ್ನು ಒಪ್ಪದೇ ಇರುವವರೂ ಬಹಳ ಮಂದಿ ಇದ್ದಾರೆ.

ಕನ್ನಡದಲ್ಲಿ ಸುಭಾಷ್​ ಚಂದ್ರರರ ಬಗ್ಗೆ ಧಾರಾವಾಹಿ ಪ್ರಸಾರವಾಗುತ್ತಿರುವುದಕ್ಕೆ ಕರ್ನಾಟಕದ ಮೂಲೆ ಮೂಲೆಗೂ ಅವರ ಕಥೆ ತಲುಪಲಿದೆ. ಕನ್ನಡದಲ್ಲೇ ಈ ಧಾರಾವಾಹಿ ಬರುತ್ತಿರುವುದಕ್ಕೆ ಅನೇಕರಿಗೆ ಸುಲಭವಾಗಿ ಅರ್ಥ ಕೂಡ ಆಗಲಿದೆ.

ಇದನ್ನೂ ಓದಿ: ವೆಬ್​ ಸಿರೀಸ್​ ರೂಪದಲ್ಲಿ ಬರಲಿದೆ ಕನ್ನಡದ ಸೂಪರ್​ ಹಿಟ್​ ಧಾರಾವಾಹಿ ಮಾಯಾಮೃಗ; ಪ್ರೇಕ್ಷಕರಿಗೆ ಗುಡ್​ ನ್ಯೂಸ್​

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ