AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಬರ್ತಿದೆ ನೇತಾಜಿ ಸುಭಾಷ್​ ಚಂದ್ರ ಬೋಸ್​ ಬಗ್ಗೆ ಧಾರಾವಾಹಿ; ಜೂನ್​ 7ರಿಂದ ಶುರು

ಜೀ ಕನ್ನಡ ವಾಹಿನಿಯಲ್ಲಿ ‘ನೇತಾಜಿ ಸುಭಾಷ್ ಚಂದ್ರ ಬೋಸ್’ ಧಾರಾವಾಹಿ ಜೂನ್ 7ರಿಂದ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 5ರಿಂದ 6 ಗಂಟೆವರೆಗೆ ಪ್ರಸಾರವಾಗಲಿದೆ.

ಕನ್ನಡದಲ್ಲಿ ಬರ್ತಿದೆ ನೇತಾಜಿ ಸುಭಾಷ್​ ಚಂದ್ರ ಬೋಸ್​ ಬಗ್ಗೆ ಧಾರಾವಾಹಿ; ಜೂನ್​ 7ರಿಂದ ಶುರು
ಸುಭಾಷ್​ ಚಂದ್ರ ಬೋಸ್
ರಾಜೇಶ್ ದುಗ್ಗುಮನೆ
|

Updated on: Jun 02, 2021 | 4:08 PM

Share

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸ್ವತಃ ಸೈನ್ಯ ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದವರು ನೇತಾಜಿ ಸುಭಾಷ್​ ಚಂದ್ರ ಬೋಸ್. ಇವರ ಬಗ್ಗೆ ಸಿನಿಮಾ ಹಾಗೂ ವೆಬ್​ ಸೀರಿಸ್​ಗಳು ಸಿದ್ಧಗೊಂಡಿವೆ. ಈಗ ಇವರ ಬಗ್ಗೆ ಕನ್ನಡದಲ್ಲಿ ಧಾರಾವಾಹಿ ಕೂಡ ಬರುತ್ತಿದೆ ಅನ್ನೋದು ವಿಶೇಷ.  

ಹೌದು, ಜೀ ಕನ್ನಡ ವಾಹಿನಿಯಲ್ಲಿ ‘ನೇತಾಜಿ ಸುಭಾಷ್ ಚಂದ್ರ ಬೋಸ್’ ಧಾರಾವಾಹಿ ಜೂನ್ 7ರಿಂದ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 5ರಿಂದ 6 ಗಂಟೆವರೆಗೆ ಪ್ರಸಾರವಾಗಲಿದೆ. ಈ ಧಾರಾವಾಹಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸೈನ್ಯ ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಧೀರ ನಾಯಕನ ಐತಿಹಾಸಿಕ ಕಥೆಯನ್ನು ಬಿಂಬಿಸಲಿದೆ.

ಅಂಬೇಡ್ಕರ್ ಧಾರಾವಾಹಿಯನ್ನು ಜೀ ಕನ್ನಡ ಈ ಮೊದಲು ಪ್ರಸಾರ ಮಾಡಿತ್ತು. ಈ ಮೂಲಕ ಹೆಚ್ಚಿನ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈಗ ಸುಭಾಷ್ ಚಂದ್ರ ಬೋಸ್ ಅವರ ಜೀವನಗಾಥೆಯನ್ನು ಮನರಂಜನೆ ರೀತಿಯಲ್ಲಿ ಕನ್ನಡ ಪ್ರೇಕ್ಷಕರ ಮುಂದಿಡುತ್ತಿದೆ.

ಒರಿಸ್ಸಾದ ಕಟಕ್​ನಲ್ಲಿ ಜನಿಸಿದ ಸುಭಾಷ್​ಚಂದ್ರ ಬೋಸ್ ಸ್ವಾತಂತ್ರ್ಯ ಹೋರಾಟದಲ್ಲಿ ತುಂಬಾನೇ ಮಹತ್ವ ವಹಿಸಿದ್ದಾರೆ. ಜರ್ಮನಿಯ ನೆರವಿನೊಂದಿಗೆ ಇಂಡಿಯನ್ ನ್ಯಾಷನಲ್ ಆರ್ಮಿ ಕಟ್ಟಿದರು. ಅಹಿಂಸಾ ಹೋರಾಟ ವಿರೋಧಿಸಿ ಸ್ವಂತ ಸೇನೆ ಕಟ್ಟಿದರು. ಸುಭಾಷ್ ​ಚಂದ್ರ ಬೋಸ್​ ಅವರು ವಿಮಾನ ಅಪಘಾತದಲ್ಲಿ ಮೃತರಾದರು ಎಂದು ನಂಬಲಾಗಿದೆ. ಆದರೆ ಅದನ್ನು ಒಪ್ಪದೇ ಇರುವವರೂ ಬಹಳ ಮಂದಿ ಇದ್ದಾರೆ.

ಕನ್ನಡದಲ್ಲಿ ಸುಭಾಷ್​ ಚಂದ್ರರರ ಬಗ್ಗೆ ಧಾರಾವಾಹಿ ಪ್ರಸಾರವಾಗುತ್ತಿರುವುದಕ್ಕೆ ಕರ್ನಾಟಕದ ಮೂಲೆ ಮೂಲೆಗೂ ಅವರ ಕಥೆ ತಲುಪಲಿದೆ. ಕನ್ನಡದಲ್ಲೇ ಈ ಧಾರಾವಾಹಿ ಬರುತ್ತಿರುವುದಕ್ಕೆ ಅನೇಕರಿಗೆ ಸುಲಭವಾಗಿ ಅರ್ಥ ಕೂಡ ಆಗಲಿದೆ.

ಇದನ್ನೂ ಓದಿ: ವೆಬ್​ ಸಿರೀಸ್​ ರೂಪದಲ್ಲಿ ಬರಲಿದೆ ಕನ್ನಡದ ಸೂಪರ್​ ಹಿಟ್​ ಧಾರಾವಾಹಿ ಮಾಯಾಮೃಗ; ಪ್ರೇಕ್ಷಕರಿಗೆ ಗುಡ್​ ನ್ಯೂಸ್​

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ