AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಲ್ಲಾ ರಂಗ ಭಾಷಾ’ ಶೂಟಿಂಗ್ ಶುರು ಯಾವಾಗ? ಉತ್ತರ ಕೊಟ್ಟ ನಿರ್ದೇಶಕ

Kichcha Sudeep new movie shooting: ಅನೂಪ್ ಭಂಡಾರಿ ಜೊತೆಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾನಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು, ಆದರೆ ಸಿನಿಮಾದ ಶೂಟಿಂಗ್ ಬಗ್ಗೆ ಯಾವುದೇ ಅಪ್​​ಡೇಟ್ ಹೊರಬಿದ್ದಿರಲಿಲ್ಲ. ಇದೀಗ ಖುದ್ದು ಅನೂಪ್ ಭಂಡಾರಿ ಅವರು ಸಿನಿಮಾದ ಶೂಟಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

‘ಬಿಲ್ಲಾ ರಂಗ ಭಾಷಾ’ ಶೂಟಿಂಗ್ ಶುರು ಯಾವಾಗ? ಉತ್ತರ ಕೊಟ್ಟ ನಿರ್ದೇಶಕ
Billa Ranga Baasha1
ಮಂಜುನಾಥ ಸಿ.
|

Updated on:Jun 25, 2026 | 10:00 PM

Share

ಸುದೀಪ್ (Sudeep) ನಟನೆಯ ಸಿನಿಮಾ ಬಿಡುಗಡೆ ಆಗಿ ಅರ್ಧ ವರ್ಷವಾಗಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ‘ಮಾರ್ಕ್’ ಸಿನಿಮಾ ರಿಲೀಸ್ ಆಗಿ ಹಿಟ್ ಎನಿಸಿಕೊಂಡಿತ್ತು. ಅದಾದ ಮೇಲೆ ಸುದೀಪ್ ನಟಿಸುತ್ತಿರುವ ಸಿನಿಮಾ ಬಗ್ಗೆ ಯಾವ ಅಪ್​ಡೇಟ್ ಸಹ ಹೊರಬಿದ್ದಿರಲಿಲ್ಲ. ಅನೂಪ್ ಭಂಡಾರಿ ಜೊತೆಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾನಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು, ಆದರೆ ಸಿನಿಮಾದ ಶೂಟಿಂಗ್ ಬಗ್ಗೆ ಯಾವುದೇ ಅಪ್​​ಡೇಟ್ ಹೊರಬಿದ್ದಿರಲಿಲ್ಲ. ಇದೀಗ ಖುದ್ದು ಅನೂಪ್ ಭಂಡಾರಿ ಅವರು ಸಿನಿಮಾದ ಶೂಟಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಟ್ವೀಟ್ ಮಾಡಿರುವ ಅನೂಪ್ ಭಂಡಾರಿ, ‘ಬಿಲ್ಲಾ ರಂಗ ಭಾಷಾ’ ಸಿನಿಮಾದ ಚಿತ್ರೀಕರಣ ನಾಳೆ (ಜೂನ್ 26) ಇಂದ ಶುರು ಆಗಲಿದೆ ಎಂದಿದ್ದಾರೆ. ‘ನಿಮ್ಮ ಪ್ರೀತಿ ಕಡಿಮೆಯಾಗಲಿಲ್ಲ, ನಮ್ಮ ನಂಬಿಕೆ ಕುಗ್ಗಲಿಲ್ಲ. ಧನ್ಯವಾದಗಳು’ ಎಂದಿದ್ದಾರೆ ಅನೂಪ್ ಭಂಡಾರಿ. ಸಿನಿಮಾವನ್ನು ಚೈತನ್ಯ ರೆಡ್ಡಿ, ನಿರಂಜನ ರೆಡ್ಡಿ ಅವರುಗಳು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಭಂಡಾರಿ ಟ್ವೀಟ್​​ನಲ್ಲಿ ಸುದೀಪ್ ಅವರ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದು, ಸುದೀಪ ಅವರು ರಿವಾಲ್ವಾರ್ ಹಿಡಿದಿರುವ ಚಿತ್ರವನ್ನು ಪೋಸ್ಟರ್ ಒಳಗೊಂಡಿದೆ.

ಇದನ್ನೂ ಓದಿ:ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

‘ಬಿಆರ್​​ಬಿ’ ಸಿನಿಮಾನಲ್ಲಿ ಸುದೀಪ್ ಅವರು ವಾರಿಯರ್ ರೀತಿ ಕಾಣಿಸಿಕೊಂಡಿದ್ದಾರೆ. ಅವರ ಉಡುಪು, ಆಯುಧಗಳು ಭಿನ್ನವಾಗಿದ್ದು, ಹಾಲಿವುಡ್​ನ ಹಳೆಯ ಸಿನಿಮಾಗಳ ಮಾದರಿಯಲ್ಲಿದೆ. ಕತೆಗಾಗಿ ಅನೂಪ್ ಭಂಡಾರಿ ಸಾಕಷ್ಟು ಸಮಯ ವ್ಯಯಿಸಿದ್ದು, ಇದೀಗ ಒಂದು ಕತೆ, ಚಿತ್ರಕತೆಯನ್ನು ಸಂಪೂರ್ಣ ಮಾಡಿಕೊಂಡು ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ. ಜೂನ್ 26ರಿಂದ ಸಿನಿಮಾದ ಚಿತ್ರೀಕರಣ ಆರಂಭಿಸಲಿದ್ದಾರೆ ಅನೂಪ್ ಭಂಡಾರಿ ಮತ್ತು ಸುದೀಪ್.

ಕೆಲ ದಿನಗಳ ಹಿಂದೆ ಸುದೀಪ್ ಅವರು ಸಹ ‘ಬಿಲ್ಲಾ ರಂಗ ಭಾಷಾ’ ಸಿನಿಮಾದ ಚಿತ್ರೀಕರಣ ಶುರುವಾಗುತ್ತಿರುವ ಕುರಿತಾಗಿ ಟ್ವೀಟ್ ಮಾಡಿದ್ದರು. ಸಿನಿಮಾದ ಚಿತ್ರೀಕರಣ ಜೂನ್ 26ಕ್ಕೆ ಪ್ರಾರಂಭ ಆಗಲಿದೆ ಎಂದಿದ್ದರು. ಮಾತ್ರವಲ್ಲದೆ, ಕೈಯಲ್ಲಿ ನಾಲ್ಕು ಚಿತ್ರಕತೆಗಳು ಇದ್ದು, ಒಂದರ ಹಿಂದೆ ಒಂದರಂತೆ ಸಿನಿಮಾಗಳು ಪ್ರಾರಂಭ ಆಗಲಿವೆ ಎಂದಿದ್ದರು. ಈ ಹಿಂದೆ ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಸಿನಿಮಾನಲ್ಲಿ ಸುದೀಪ್ ನಟಿಸಿದ್ದರು. ಈಗ ‘ಬಿಲ್ಲಾ ರಂಘ ಭಾಷಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:59 pm, Thu, 25 June 26

Follow Us
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?