AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಿರ್ದೇಶಕನೊಟ್ಟಿಗೆ ಸುದೀಪ್ ಸಿನಿಮಾ, ಚಿತ್ರದ ಹೆಸರೇನು?

Kichcha Sudeep: ಈ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲವೆಂದು ಕಿಚ್ಚ ಹೇಳಿದಾಗ ಸಹಜವಾಗಿಯೇ ಅಭಿಮಾನಿಗಳು ತುಸು ಬೇಸರಗೊಂಡಿದ್ದರು, ಆದರೆ ಅದರ ಬದಲಾಗಿ ಸುದೀಪ್ ತಮ್ಮ ಸಿನಿಮಾಗಳ ಘೋಷಣೆಯನ್ನು ಮಾಡುವ ಮೂಲಕ ಅಭಿಮಾನಿಗಳ ಮನದಲ್ಲಿ ಖುಷಿ ಮತ್ತು ನಿರೀಕ್ಷೆಗಳನ್ನು ಮೂಡಿಸಿದ್ದಾರೆ. ಕೆಲ ದಿನಗಳ ಹಿಂದೆ ಸುದೀಪ್ ಹಂಚಿಕೊಂಡಿದ್ದ ಪೋಸ್ಟ್​​ನಲ್ಲಿ, ‘ಸಿಂಹ ಸುಮ್ಮನೆ ಕೂತಿದೆ ಎಂದರೆ ಸುಸ್ತಾಗಿದೆ ಎಂದಲ್ಲ, ಮುಂದಿನ ಭೇಟೆಗೆ ತಯಾರಾಗಿದೆ ಎಂದರ್ಥ’ ಎಂದಿದ್ದರು. ಸುದೀಪ್ ಅವರು ಹಾಗೆ ಹೇಳಿದ್ದೇಕೆ ಎಂಬುದು ಈಗ ತಿಳಿಯುತ್ತಿದೆ.

ತಮಿಳು ನಿರ್ದೇಶಕನೊಟ್ಟಿಗೆ ಸುದೀಪ್ ಸಿನಿಮಾ, ಚಿತ್ರದ ಹೆಸರೇನು?
School Bus
ಮಂಜುನಾಥ ಸಿ.
|

Updated on:Sep 02, 2026 | 11:02 AM

Share

ಮುಖ್ಯಾಂಶಗಳು

  • ಸುದೀಪ್ ಹುಟ್ಟುಹಬ್ಬ ಇಂದು (ಸೆಪ್ಟೆಂಬರ್ 02)
  • ಹುಟ್ಟುಹಬ್ಬದಂದು ಸುದೀಪ್ ಹೊಸ ಸಿನಿಮಾ ಘೋಷಿಸಿದ್ದಾರೆ.
  • ತಮಿಳು ನಿರ್ದೇಶಕನ ಸಿನಿಮಾನಲ್ಲಿ ಸುದೀಪ್ ನಟಿಸುತ್ತಿದ್ದಾರೆ.

ಸುದೀಪ್ (Sudeep) ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಒಂದರ ಹಿಂದೊಂದು ಖುಷಿ ಸುದ್ದಿಗಳನ್ನು ಸುದೀಪ್ ನೀಡುತ್ತಿದ್ದಾರೆ. ಈ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲು ಆಗುತ್ತಿಲ್ಲವೆಂದು ಕಿಚ್ಚ ಹೇಳಿದಾಗ ಸಹಜವಾಗಿಯೇ ಅಭಿಮಾನಿಗಳು ತುಸು ಬೇಸರಗೊಂಡಿದ್ದರು, ಆದರೆ ಅದರ ಬದಲಾಗಿ ಸುದೀಪ್ ತಮ್ಮ ಸಿನಿಮಾಗಳ ಘೋಷಣೆಯನ್ನು ಮಾಡುವ ಮೂಲಕ ಅಭಿಮಾನಿಗಳ ಮನದಲ್ಲಿ ಖುಷಿ ಮತ್ತು ನಿರೀಕ್ಷೆಗಳನ್ನು ಮೂಡಿಸಿದ್ದಾರೆ. ಕೆಲ ದಿನಗಳ ಹಿಂದೆ ಸುದೀಪ್ ಹಂಚಿಕೊಂಡಿದ್ದ ಪೋಸ್ಟ್​​ನಲ್ಲಿ, ‘ಸಿಂಹ ಸುಮ್ಮನೆ ಕೂತಿದೆ ಎಂದರೆ ಸುಸ್ತಾಗಿದೆ ಎಂದಲ್ಲ, ಮುಂದಿನ ಭೇಟೆಗೆ ತಯಾರಾಗಿದೆ ಎಂದರ್ಥ’ ಎಂದಿದ್ದರು. ಸುದೀಪ್ ಅವರು ಹಾಗೆ ಹೇಳಿದ್ದೇಕೆ ಎಂಬುದು ಈಗ ತಿಳಿಯುತ್ತಿದೆ.

ಸುದೀಪ್ ಹುಟ್ಟುಹಬ್ಬಕ್ಕೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾದ ಹೊಸ ರಗಡ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಅದರ ಬೆನ್ನಲ್ಲೆ ಸುದೀಪ್ ಹೊಸ ಸಿನಿಮಾದ ಘೋಷಣೆಯನ್ನೂ ಸಹ ಮಾಡಿದ್ದಾರೆ. ಸುದೀಪ್ ಅವರು ತಮಿಳು ನಿರ್ದೇಶಕನ ಸಿನಿಮಾನಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕಳೆದ ಕೆಲ ತಿಂಗಳುಗಳಿಂದಲೂ ಹರಿದಾಡುತ್ತಲೇ ಇತ್ತು. ಆದರೆ ಆ ನಿರ್ದೇಶಕ ಯಾರೆಂಬುದು ಖಾತ್ರಿ ಆಗಿರಲಿಲ್ಲ. ಇದೀಗ ಸುದೀಪ್ ಹುಟ್ಟುಹಬ್ಬಕ್ಕೆ ಅಧಿಕೃತವಾಗಿ ಸಿನಿಮಾದ ಘೋಷಣೆ ಮಾಡಲಾಗಿದೆ. ಜೊತೆಗೆ ಸಿನಿಮಾದ ಟೈಟಲ್ ಸಹ ಅನೌನ್ಸ್ ಮಾಡಲಾಗಿದೆ.

ಸುದೀಪ್ ಅವರು ತಮಿಳಿನ ಖ್ಯಾತ ನಟ ಮತ್ತು ನಿರ್ದೇಶಕ ಸಮುದ್ರಕಣಿ ನಿರ್ದೇಶನದ ಸಿನಿಮಾನಲ್ಲಿ ನಟಿಸಲಿದ್ದಾರೆ. ಸಮುದ್ರಕಣಿ, ಖ್ಯಾತ ನಿರ್ದೇಶಕರಾಗಿದ್ದು, ‘ನಾಡೋಡಿಗಳ್’ (ಕನ್ನಡದಲ್ಲಿ ‘ಹುಡುಗರು’), ‘ಪೊರಾಲಿ’ (ಕನ್ನಡದಲ್ಲಿ ಯಾರೇ ಕೂಗಾಡಲಿ) ಸೇರಿದಂತೆ ‘ಅಪ್ಪ’, ‘ಬ್ರೋ’ ಇನ್ನೂ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಸಂಪೂರ್ಣ ಕಮರ್ಶಿಯಲ್ ಅಲ್ಲದ ಆದರೆ ಅದ್ಭುತ ಕತೆಯನ್ನು ಒಳಗೊಂಡ ಸಿನಿಮಾಗಳನ್ನು ನಿರ್ದೇಶಿಸುವುದು ಅವರ ಸ್ಟೈಲ್. ಇದೀಗ ಈ ಪ್ರತಿಭಾವಂತ ನಿರ್ದೇಶಕನ ಜೊತೆಗೆ ದೈತ್ಯ ಪ್ರತಿಭೆ ಸುದೀಪ್ ಕೈಜೋಡಿಸಿದ್ದಾರೆ.

ಇದನ್ನೂ ಓದಿ:Kichcha Sudeep Birthday: ಕಿಚ್ಚ ಸುದೀಪ್ ಜನ್ಮದಿನ; ನಟ ಆಸ್ತಿ ಎಷ್ಟು ಗೊತ್ತಾ?

ಸುದೀಪ್ ಅವರಿಗಾಗಿ ಸಮುದ್ರಕಿಣಿ ನಿರ್ದೇಶನ ಮಾಡುತ್ತಿರುವ ಸಿನಿಮಾಕ್ಕೆ ‘ಸ್ಕೂಲ್ ಬಸ್ ವಾಯ್ಸಸ್’ ಎಂದು ಹೆಸರಿಡಲಾಗಿದೆ. ಸಿನಿಮಾದ ಹೆಸರು ಇದೊಂದು ಸಂದೇಶ ಹೊಂದಿರುವ ಸಿನಿಮಾ ಎಂಬುದನ್ನು ಸಾರಿ ಹೇಳುತ್ತಿದೆ. ಒಂದರ ಹಿಂದೊಂದು ಮಾಸ್ ಸಿನಿಮಾಗಳನ್ನು ಮಾಡಿಕೊಂಡೇ ಬಂದಿರುವ ಸುದೀಪ್ ಈಗ ಅವರ ನಟನೆಗೆ ಒರೆಗೆ ಹಚ್ಚುವ ಪಾತ್ರವೊಂದನ್ನು ನಟಿಸಲಿದ್ದಾರೆ ಎಂಬ ನಿರೀಕ್ಷೆ ಹುಟ್ಟಿದೆ.

ಸುದೀಪ್ ಸಹ ಕೇವಲ ಮಾಸ್ ಮಸಾಲಾ ಸಿನಿಮಾಗಳನ್ನು ಮಾಡಿಕೊಂಡು ಬಂದ ನಟರಲ್ಲ. ಹಲವಾರು ಪ್ರಯೋಗಾತ್ಮಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ‘ಶಾಂತಿ ನಿವಾಸ’, ‘ಆಟೋಗ್ರಾಫ್’, ‘ಸ್ವಾತಿ ಮುತ್ತು’, ‘ಮಾತಾಡ್ ಮಾತಾಡ್ ಮಲ್ಲಿಗೆ’ ಇನ್ನೂ ಕೆಲವು ಭಿನ್ನ ಮಾದರಿಯ, ಕಂಟೆಂಟ್ ಆಧರಿತ ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದಾರೆ. ಇದೀಗ ಸುದೀಪ್ ಅವರು ‘ಸ್ಕೂಲ್ ಬಸ್’ ಮೂಲಕ ಮತ್ತೊಮ್ಮೆ ಅಂಥಹುದೇ ಪ್ರಯತ್ನಕ್ಕೆ ತಮ್ಮನ್ನು ಒಡ್ಡಿಕೊಳ್ಳಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:02 am, Wed, 2 September 26

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್