AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 16ಕ್ಕೆ ಏನಾಗಲಿದೆ? ಗುಟ್ಟು ಬಿಟ್ಟುಕೊಟ್ಟ ಕಿಚ್ಚ ಸುದೀಪ್

Sudeep: ಕಿಚ್ಚ ಸುದೀಪ್ ಇತ್ತೀಚೆಗೆ ತಮ್ಮ ಕೆಲ ಚಿತ್ರಗಳನ್ನು ಹಂಚಿಕೊಂಡು ‘ಏಪ್ರಿಲ್ 16’ ಎಂದು ಟ್ವೀಟ್ ಮಾಡಿದ್ದರು. ಇದು ಅಭಿಮಾನಿಗಳಲ್ಲಿ ಭಾರಿ ಕುತೂಹಲ ಕೆರಳಿಸಿತ್ತು. ಏಪ್ರಿಲ್ 16ಕ್ಕೆ ಏನಾಗಲಿದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಏಪ್ರಿಲ್ 16ಕ್ಕೆ ಇನ್ನೂ ಕೆಲ ದಿನ ಇರುವಾಗಲೇ ಸುದೀಪ್, ಏಪ್ರಿಲ್ 16ರ ಗುಟ್ಟು ರಟ್ಟು ಮಾಡಿದ್ದಾರೆ.

ಏಪ್ರಿಲ್ 16ಕ್ಕೆ ಏನಾಗಲಿದೆ? ಗುಟ್ಟು ಬಿಟ್ಟುಕೊಟ್ಟ ಕಿಚ್ಚ ಸುದೀಪ್
Kichcha Sudeep
Follow us
ಮಂಜುನಾಥ ಸಿ.
|

Updated on: Apr 10, 2025 | 11:42 AM

ಕೆಲ ದಿನಗಳ ಹಿಂದಷ್ಟೆ ಕಿಚ್ಚ ಸುದೀಪ್ (Kichcha Sudeep) ಚಿತ್ರವೊಂದನ್ನು ಹಂಚಿಕೊಂಡಿದ್ದರು. ಚಿತ್ರದಲ್ಲಿ ತಮ್ಮ ಹುರಿಗಟ್ಟಿದ ತೋಳುಗಳನ್ನು ಪ್ರದರ್ಶಿಸಿದ್ದ ಸುದೀಪ್, ಏಪ್ರಿಲ್ 16 ಎಂದಷ್ಟೆ ಬರೆದುಕೊಂಡಿದ್ದರು. ಇದು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿತ್ತು. ಏಪ್ರಿಲ್ 16 ರಂದು ಏನಾಗಲಿದೆ? ಎಂದು ಹಲವು ಪ್ರಶ್ನೆ ಮಾಡಿದ್ದರು. ಆದರೆ ಏಪ್ರಿಲ್ 16ಕ್ಕೆ ಇನ್ನೂ ಕೆಲ ದಿನ ಬಾಕಿ ಇರುವಾಗಲೇ ಸುದೀಪ್ ಗುಟ್ಟು ರಟ್ಟು ಮಾಡಿದ್ದಾರೆ. ಏಪ್ರಿಲ್ 16ಕ್ಕೆ ಏನಾಗಲಿದೆ ಎಂಬುದನ್ನು ಈಗಲೇ ಹೇಳಿಬಿಟ್ಟಿದ್ದಾರೆ.

ನಿನ್ನೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ‘ಏಪ್ರಿಲ್ 16ಕ್ಕೆ ಏನಾಗಲಿದೆ ಎಂದು ಹಲವರು ಪ್ರಶ್ನೆ ಮಾಡುತ್ತಿದ್ದೀರ, ಆ ದಿನ ನನ್ನ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಸೆಟ್ಟೇರಲಿದೆ, ಸಿನಿಮಾದ ಸೆಟ್ಟು, ಇತರೆ ಪಾತ್ರವರ್ಗ ಇನ್ನೂ ಹಲವು ಮಾಹಿತಿ ಮುಂದಿನ ದಿನಗಳಲ್ಲಿ ಹೊರಬೀಳಲಿದೆ’ ಎಂದಿದ್ದಾರೆ. ಆ ಮೂಲಕ ತಾವೇ ಸೃಷ್ಟಿಸಿದ್ದ ಕುತೂಹಲವನ್ನು ಅಂತ್ಯ ಮಾಡಿದ್ದಾರೆ ಕಿಚ್ಚ ಸುದೀಪ್.

ಬಿಆರ್​ಬಿ (ಬಿಲ್ಲಾ ರಂಗ ಭಾಷಾ) ಸಿನಿಮಾ ಅನ್ನು ಸುದೀಪ್ ಅವರ ನೆಚ್ಚಿನ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಅವರು ಸುದೀಪ್​ಗಾಗಿ ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶನ ಮಾಡಿದ್ದರು. ಇದೀಗ ಈ ಜೋಡಿ ಎರಡನೇ ಬಾರಿ ಮತ್ತೆ ಒಂದಾಗುತ್ತಿದೆ. ಸಿನಿಮಾಕ್ಕಾಗಿ ದೇಹವನ್ನು ಅದ್ಭುತವಾಗಿ ಹುರಿಗಟ್ಟಿಸಿಕೊಂಡಿದ್ದಾರೆ ಸುದೀಪ್. ಸತತ ಜಿಮ್ ಟ್ರೈನಿಂಗ್ ಮಾಡಿ ಈಗಂತೂ ಬಾಡಿ ಬಿಲ್ಡರ್ ರೀತಿ ಕಾಣುತ್ತಿದ್ದಾರೆ ಸುದೀಪ್. ಈ ಹಿಂದೆ ‘ಪೈಲ್ವಾನ’ ಸಿನಿಮಾಕ್ಕೂ ಸಹ ಇದೇ ರೀತಿ ತಯಾರಾಗಿದ್ದರು ಕಿಚ್ಚ. ಆ ಸಿನಿಮಾ ಸಹ ಸೂಪರ್ ಹಿಟ್ ಆಗಿತ್ತು.

ಇದನ್ನೂ ಓದಿ
Image
Darshan: ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ: ಏಪ್ರಿಲ್ 22ಕ್ಕೆ ವಿಚಾರಣೆ
Image
ಅಜಯ್ ದೇವಗನ್ ಐಷಾರಾಮಿ ಜೀವನ; 60 ಕೋಟಿ ಮನೆ, ದುಬಾರಿ ಕಾರು, ಬಿಸ್ನೆಸ್
Image
ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್
Image
ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್

ಇದನ್ನೂ ಓದಿ:ಹೊಸ ಚಿತ್ರದ ಅಪ್​ಡೇಟ್ ಕೊಟ್ಟ ಸುದೀಪ್; ಕಿಚ್ಚನ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್ ಖುಷ್

ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಕೆಲ ತಿಂಗಳ ಹಿಂದಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಇದರ ನಡುವೆ ಕಾರ್ತಿಕ್ ಗೌಡ, ಯೋಗಿ ಗೌಡ ನಿರ್ಮಾಣ ಮಾಡುತ್ತಿರುವ ಆಕ್ಷನ್ ಸಿನಿಮಾದಲ್ಲಿಯೂ ಸುದೀಪ್ ನಟಿಸುತ್ತಿದ್ದಾರೆ ಎನ್ನಲಾಗಿತ್ತು. ಆ ಸಿನಿಮಾದ ಹೊಸ ಅಪ್​ಡೇಟ್​ಗಳು ಈ ವರೆಗೆ ಹೊರಬಿದ್ದಿಲ್ಲ. ಇದರ ನಡುವೆ ಇದೀಗ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಸೆಟ್ಟೇರುತ್ತಿದೆ. ಅನುಪ್ ಭಂಡಾರಿ ಜೊತೆಗೆ ‘ದ್ರೋಣ’ ಸಿನಿಮಾ ಅನ್ನು ಸುದೀಪ ಮಾಡುತ್ತಾರೆ ಎನ್ನಲಾಗಿತ್ತು, ಆದರೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಮೊದಲು ಸೆಟ್ಟೇರುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ