AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್​ ಜತೆ ನಟಿಸಿದ್ದ ಸುಧಾ ಚಂದ್ರನ್​ ತಂದೆ ನಿಧನ; ಭಾವುಕರಾದ ನಟಿ

ದೇಹದ ಉಷ್ಣತೆ ಮಿತಿ ಮೀರಿತ್ತು. ಅವರಿಗೆ ಸಕ್ಕರೆ ಕಾಯಿಲೆ​ ಇತ್ತು. ವಯಸ್ಸು 86 ದಾಟಿತ್ತು. ಅವರ ಅಂಗಗಳು ಒಂದೊಂದೇ ಕೆಲಸ ಮಾಡುವುದನ್ನು ನಿಲ್ಲಿಸಿದ್ದವು ಎಂದು ತಂದೆ ಸಾವಿಗೆ ಸುಧಾ ಕಾರಣ ನೀಡಿದ್ದಾರೆ.

ವಿಷ್ಣುವರ್ಧನ್​ ಜತೆ ನಟಿಸಿದ್ದ ಸುಧಾ ಚಂದ್ರನ್​ ತಂದೆ ನಿಧನ; ಭಾವುಕರಾದ ನಟಿ
ಸುಧಾ ಚಂದ್ರನ್
ರಾಜೇಶ್ ದುಗ್ಗುಮನೆ
| Edited By: |

Updated on: May 17, 2021 | 5:25 PM

Share

ಹಿಂದಿ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಕೆ.ಡಿ. ಚಂದ್ರನ್​ ಅವರು ಮೇ 16ರಂದು ಮೃತಪಟ್ಟಿದ್ದಾರೆ. ಕೆಲ ವರ್ಷಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಈಗ ಕೊನೆ ಉಸಿರೆಳೆದಿದ್ದಾರೆ. ಈ ವಿಚಾರವನ್ನು ಅವರ ಮಗಳು ಹಾಗೂ ನಟಿ ಸುಧಾ ಚಂದ್ರನ್​ ಖಚಿತಪಡಿಸಿದ್ದಾರೆ.

‘ನನ್ನ ತಂದೆಗೆ ಕಳೆದ ಕೆಲ ದಿನಗಳಿಂದ ಜ್ವರ ಇತ್ತು. ನಾವು ಕೊವಿಡ್​ ಅಂದುಕೊಂಡೆವು. ಆದರೆ, ಕೊರೊನಾ ನೆಗೆಟಿವ್​ ಬಂದಿತ್ತು. ಜ್ವರ ಮಾತ್ರ ಕಡಿಮೆ ಆಗಿರಲಿಲ್ಲ. ದೇಹದ ಉಷ್ಣತೆ ಮಿತಿ ಮೀರಿತ್ತು. ಅವರಿಗೆ ಸಕ್ಕರೆ ಕಾಯಿಲೆ​ ಇತ್ತು. ವಯಸ್ಸು 86 ದಾಟಿತ್ತು. ಅವರ ಅಂಗಗಳು ಒಂದೊಂದೇ ಕೆಲಸ ಮಾಡುವುದನ್ನು ನಿಲ್ಲಿಸಿದ್ದವು’ ಎಂದು ಸುಧಾ ತಂದೆ ಸಾವಿಗೆ ಕಾರಣ ನೀಡಿದ್ದಾರೆ.

‘2004ರಲ್ಲಿ ನಾನು ಅಪಘಾತಕ್ಕೆ ಒಳಗಾಗಿದ್ದೆ. ನನ್ನ ಕಾಲು ಮುರಿದು ಹೋಗಿತ್ತು. ಆಗ ತಂದೆ ನನ್ನ ಬಳಿ ಬಂದು, ಹೆದರಬೇಡ ನಾನು ನಿನಗೆ ಕಾಲಾಗಿ ನಿಂತುಕೊಳ್ಳುತ್ತೇನೆ ಎಂದಿದ್ದರು. ನನ್ನ ತಂದೆ ಬಗ್ಗೆ ನನಗೆ ವಿಶೇಷ ಗೌರವ. ಅವರು ನನಗೆ ಹೋರಾಡುವುದನ್ನು ಕಲಿಸಿದ್ದಾರೆ. ಹಿಡಿದ ಕೆಲಸ ಪೂರ್ಣಗೊಳಿಸೋಕೆ ಕಲಿಸಿಕೊಟ್ಟಿದ್ದು ಅವರೇ. ಅಪಘಾತವಾದ ನಂತರವೂ ಭರತನಾಟ್ಯ ಮುಂದುವರಿಸಲು ಕಾರಣ ಅವರೇ  ಎಂದಿದ್ದಾರೆ ಸುಧಾ.

‘ನನಗೆ ಅಪಘಾತವಾದ ವರ್ಷವೇ ಅಮ್ಮ ತೀರಿಕೊಂಡರು. ಅದಾದ ನಂತರ 9 ವರ್ಷಗಳ ಕಾಲ ತಂದೆ ನನ್ನ ಜತೆಗೇ ಇದ್ದರು. ಬೆಳಗ್ಗೆ ಬೇಗ ಏಳುತ್ತಿದ್ದರು. ಅಮ್ಮ ಮಾಡುವ ಕೆಲಸವನ್ನು ಅವರೇ ಮಾಡುತ್ತಿದ್ದರು. ನನಗೆ ಅಮ್ಮ ಇಲ್ಲ ಎನ್ನುವ ಭಾವನೆ ಕಾಡೋಕೆ ಅವರು ಯಾವಾಗಲೂ ಅವಕಾಶ ನೀಡಿಲ್ಲ’ ಎಂದಿದ್ದಾರೆ ಅವರು.

1984ರಲ್ಲಿ ತೆರೆಗೆ ಬಂದ ತೆಲುಗಿನ ‘ಮಯೂರಿ’ ಸಿನಿಮಾ ಮೂಲಕ ಸುಧಾ ಬಣ್ಣದ ಬದುಕು ಆರಂಭಿಸಿದರು. 1988ರಲ್ಲಿ ತೆರೆಗೆ ಬಂದ ವಿಷ್ಣುವರ್ಧನ್​ ನಟನೆಯ ‘ಒಲವಿನ ಆಸರೆ’ ಚಿತ್ರದಲ್ಲಿ ಚಂದ್ರಿಕಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ದಕ್ಷಿಣ ಭಾರತಕ್ಕಿಂತ ಅವರು ಹಿಂದಿ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟಿವ್​ ಆಗಿದ್ದಾರೆ.

ಇದನ್ನೂ ಓದಿ: ರೈತರ ಸಹಾಯಕ್ಕೆ ನಿಂತ ಉಪೇಂದ್ರ; ಬೆಳೆ ಖರೀದಿಸಿ, ಸಂಕಷ್ಟದಲ್ಲಿ ಇರುವವರಿಗೆ ಹಂಚಿದ ನಟ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು