AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’

Soorarai Pottru Joins OSCARS: 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು' ಪ್ರವೇಶ ಗಿಟ್ಟಿಸಿಕೊಂಡಿದೆ.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು'
ಸೂರರೈ ಪೊಟ್ರು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 26, 2021 | 1:51 PM

Share

ದೆಹಲಿ: ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’ 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಗಿಟ್ಟಿಸಿಕೊಂಡಿದೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆಂಡ್ ಸಯನ್ಸ್ ಹೇಳಿದೆ. ಮಾರ್ಚ್ 5-10ರವರೆಗೆ ಅಕಾಡೆಮಿ ಮತದಾನ ನಡೆಯಲಿದ್ದು ಮಾರ್ಚ್ 15ರಂದು ಫಲಿತಾಂಶ ಪ್ರಕಟವಾಗಲಿದೆ.

ಕಡಿಮೆ ದರದಲ್ಲಿ ಸಾಮಾನ್ಯ ವ್ಯಕ್ತಿಗಳೂ ವಿಮಾನದಲ್ಲಿ ಸಂಚರಿಸಬೇಕು ಎಂದು ಕನಸು ಹೊತ್ತು ಏರ್ ಡೆಕ್ಕನ್ ವಿಮಾನಯಾನ ಸಂಸ್ಥೆ ಆರಂಭಿಸಿದ ಕನ್ನಡಿಗ ಗೋಪಿನಾಥ್​ ಜೀವನದ ಕಥೆ ಸೂರರೈ ಪೊಟ್ರು ಸಿನಿಮಾ ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಹಿನ್ನೆಲೆ ಸಂಗೀತ ಹಾಗೂ ಇತರ ವಿಭಾಗಗಳಲ್ಲಿ ಆಸ್ಕರ್​ ಸ್ಪರ್ಧೆಗೆ ಪ್ರವೇಶಿಸಿದೆ.

ಪ್ರಾಥಮಿಕ ಹಂತದಲ್ಲಿ ಆಯ್ಕೆಯಾದ 366 ಸಿನಿಮಾಗಳ ಪಟ್ಟಿಯಲ್ಲಿ ಸೂರರೈ ಪೊಟ್ರು ಸಿನಿಮಾ ಇದೆ. ಜನರಲ್ ಕೆಟಗರಿಯಲ್ಲಿ ಈ ಸಿನಿಮಾ ಸ್ಪರ್ಧಿಸುತ್ತಿದೆ ಎಂದು ಸಹ ನಿರ್ಮಾಪಕ ರಾಜಶೇಖರ್ ಪಾಂಡ್ಯ ಹೇಳಿದ್ದಾರೆ.

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಸೂರರೈ ಪೊಟ್ರು ಅಮೆಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿತ್ತು. ಒಟಿಟಿಯಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಸೂರ್ಯ ಅವರ ಹೋಮ್ ಬ್ಯಾನರ್ 2ಡಿ ಎಂಟರ್ ಟೈನ್ ಮೆಂಟ್ ನಿರ್ಮಿಸಿದ ಈ ಚಿತ್ರದಲ್ಲಿ ಸೂರ್ಯ ಜತೆಗೆ ಪರೇಶ್​ ರಾವಲ್​, ಅಪರ್ಣಾ ಬಾಲಮುರಳಿ, ಊರ್ವಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

 ಇದನ್ನೂ ಓದಿ: ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

Published On - 1:49 pm, Fri, 26 February 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್