AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’

Soorarai Pottru Joins OSCARS: 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು' ಪ್ರವೇಶ ಗಿಟ್ಟಿಸಿಕೊಂಡಿದೆ.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು'
ಸೂರರೈ ಪೊಟ್ರು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 26, 2021 | 1:51 PM

Share

ದೆಹಲಿ: ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’ 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಗಿಟ್ಟಿಸಿಕೊಂಡಿದೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆಂಡ್ ಸಯನ್ಸ್ ಹೇಳಿದೆ. ಮಾರ್ಚ್ 5-10ರವರೆಗೆ ಅಕಾಡೆಮಿ ಮತದಾನ ನಡೆಯಲಿದ್ದು ಮಾರ್ಚ್ 15ರಂದು ಫಲಿತಾಂಶ ಪ್ರಕಟವಾಗಲಿದೆ.

ಕಡಿಮೆ ದರದಲ್ಲಿ ಸಾಮಾನ್ಯ ವ್ಯಕ್ತಿಗಳೂ ವಿಮಾನದಲ್ಲಿ ಸಂಚರಿಸಬೇಕು ಎಂದು ಕನಸು ಹೊತ್ತು ಏರ್ ಡೆಕ್ಕನ್ ವಿಮಾನಯಾನ ಸಂಸ್ಥೆ ಆರಂಭಿಸಿದ ಕನ್ನಡಿಗ ಗೋಪಿನಾಥ್​ ಜೀವನದ ಕಥೆ ಸೂರರೈ ಪೊಟ್ರು ಸಿನಿಮಾ ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಹಿನ್ನೆಲೆ ಸಂಗೀತ ಹಾಗೂ ಇತರ ವಿಭಾಗಗಳಲ್ಲಿ ಆಸ್ಕರ್​ ಸ್ಪರ್ಧೆಗೆ ಪ್ರವೇಶಿಸಿದೆ.

ಪ್ರಾಥಮಿಕ ಹಂತದಲ್ಲಿ ಆಯ್ಕೆಯಾದ 366 ಸಿನಿಮಾಗಳ ಪಟ್ಟಿಯಲ್ಲಿ ಸೂರರೈ ಪೊಟ್ರು ಸಿನಿಮಾ ಇದೆ. ಜನರಲ್ ಕೆಟಗರಿಯಲ್ಲಿ ಈ ಸಿನಿಮಾ ಸ್ಪರ್ಧಿಸುತ್ತಿದೆ ಎಂದು ಸಹ ನಿರ್ಮಾಪಕ ರಾಜಶೇಖರ್ ಪಾಂಡ್ಯ ಹೇಳಿದ್ದಾರೆ.

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಸೂರರೈ ಪೊಟ್ರು ಅಮೆಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿತ್ತು. ಒಟಿಟಿಯಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಸೂರ್ಯ ಅವರ ಹೋಮ್ ಬ್ಯಾನರ್ 2ಡಿ ಎಂಟರ್ ಟೈನ್ ಮೆಂಟ್ ನಿರ್ಮಿಸಿದ ಈ ಚಿತ್ರದಲ್ಲಿ ಸೂರ್ಯ ಜತೆಗೆ ಪರೇಶ್​ ರಾವಲ್​, ಅಪರ್ಣಾ ಬಾಲಮುರಳಿ, ಊರ್ವಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

 ಇದನ್ನೂ ಓದಿ: ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

Published On - 1:49 pm, Fri, 26 February 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?