AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’

Soorarai Pottru Joins OSCARS: 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು' ಪ್ರವೇಶ ಗಿಟ್ಟಿಸಿಕೊಂಡಿದೆ.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು'
ಸೂರರೈ ಪೊಟ್ರು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 26, 2021 | 1:51 PM

Share

ದೆಹಲಿ: ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’ 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಗಿಟ್ಟಿಸಿಕೊಂಡಿದೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆಂಡ್ ಸಯನ್ಸ್ ಹೇಳಿದೆ. ಮಾರ್ಚ್ 5-10ರವರೆಗೆ ಅಕಾಡೆಮಿ ಮತದಾನ ನಡೆಯಲಿದ್ದು ಮಾರ್ಚ್ 15ರಂದು ಫಲಿತಾಂಶ ಪ್ರಕಟವಾಗಲಿದೆ.

ಕಡಿಮೆ ದರದಲ್ಲಿ ಸಾಮಾನ್ಯ ವ್ಯಕ್ತಿಗಳೂ ವಿಮಾನದಲ್ಲಿ ಸಂಚರಿಸಬೇಕು ಎಂದು ಕನಸು ಹೊತ್ತು ಏರ್ ಡೆಕ್ಕನ್ ವಿಮಾನಯಾನ ಸಂಸ್ಥೆ ಆರಂಭಿಸಿದ ಕನ್ನಡಿಗ ಗೋಪಿನಾಥ್​ ಜೀವನದ ಕಥೆ ಸೂರರೈ ಪೊಟ್ರು ಸಿನಿಮಾ ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಹಿನ್ನೆಲೆ ಸಂಗೀತ ಹಾಗೂ ಇತರ ವಿಭಾಗಗಳಲ್ಲಿ ಆಸ್ಕರ್​ ಸ್ಪರ್ಧೆಗೆ ಪ್ರವೇಶಿಸಿದೆ.

ಪ್ರಾಥಮಿಕ ಹಂತದಲ್ಲಿ ಆಯ್ಕೆಯಾದ 366 ಸಿನಿಮಾಗಳ ಪಟ್ಟಿಯಲ್ಲಿ ಸೂರರೈ ಪೊಟ್ರು ಸಿನಿಮಾ ಇದೆ. ಜನರಲ್ ಕೆಟಗರಿಯಲ್ಲಿ ಈ ಸಿನಿಮಾ ಸ್ಪರ್ಧಿಸುತ್ತಿದೆ ಎಂದು ಸಹ ನಿರ್ಮಾಪಕ ರಾಜಶೇಖರ್ ಪಾಂಡ್ಯ ಹೇಳಿದ್ದಾರೆ.

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಸೂರರೈ ಪೊಟ್ರು ಅಮೆಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿತ್ತು. ಒಟಿಟಿಯಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಸೂರ್ಯ ಅವರ ಹೋಮ್ ಬ್ಯಾನರ್ 2ಡಿ ಎಂಟರ್ ಟೈನ್ ಮೆಂಟ್ ನಿರ್ಮಿಸಿದ ಈ ಚಿತ್ರದಲ್ಲಿ ಸೂರ್ಯ ಜತೆಗೆ ಪರೇಶ್​ ರಾವಲ್​, ಅಪರ್ಣಾ ಬಾಲಮುರಳಿ, ಊರ್ವಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

 ಇದನ್ನೂ ಓದಿ: ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

Published On - 1:49 pm, Fri, 26 February 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ