AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’

Soorarai Pottru Joins OSCARS: 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು' ಪ್ರವೇಶ ಗಿಟ್ಟಿಸಿಕೊಂಡಿದೆ.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು'
ಸೂರರೈ ಪೊಟ್ರು
ರಶ್ಮಿ ಕಲ್ಲಕಟ್ಟ
|

Updated on:Feb 26, 2021 | 1:51 PM

Share

ದೆಹಲಿ: ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’ 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಗಿಟ್ಟಿಸಿಕೊಂಡಿದೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆಂಡ್ ಸಯನ್ಸ್ ಹೇಳಿದೆ. ಮಾರ್ಚ್ 5-10ರವರೆಗೆ ಅಕಾಡೆಮಿ ಮತದಾನ ನಡೆಯಲಿದ್ದು ಮಾರ್ಚ್ 15ರಂದು ಫಲಿತಾಂಶ ಪ್ರಕಟವಾಗಲಿದೆ.

ಕಡಿಮೆ ದರದಲ್ಲಿ ಸಾಮಾನ್ಯ ವ್ಯಕ್ತಿಗಳೂ ವಿಮಾನದಲ್ಲಿ ಸಂಚರಿಸಬೇಕು ಎಂದು ಕನಸು ಹೊತ್ತು ಏರ್ ಡೆಕ್ಕನ್ ವಿಮಾನಯಾನ ಸಂಸ್ಥೆ ಆರಂಭಿಸಿದ ಕನ್ನಡಿಗ ಗೋಪಿನಾಥ್​ ಜೀವನದ ಕಥೆ ಸೂರರೈ ಪೊಟ್ರು ಸಿನಿಮಾ ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಹಿನ್ನೆಲೆ ಸಂಗೀತ ಹಾಗೂ ಇತರ ವಿಭಾಗಗಳಲ್ಲಿ ಆಸ್ಕರ್​ ಸ್ಪರ್ಧೆಗೆ ಪ್ರವೇಶಿಸಿದೆ.

ಪ್ರಾಥಮಿಕ ಹಂತದಲ್ಲಿ ಆಯ್ಕೆಯಾದ 366 ಸಿನಿಮಾಗಳ ಪಟ್ಟಿಯಲ್ಲಿ ಸೂರರೈ ಪೊಟ್ರು ಸಿನಿಮಾ ಇದೆ. ಜನರಲ್ ಕೆಟಗರಿಯಲ್ಲಿ ಈ ಸಿನಿಮಾ ಸ್ಪರ್ಧಿಸುತ್ತಿದೆ ಎಂದು ಸಹ ನಿರ್ಮಾಪಕ ರಾಜಶೇಖರ್ ಪಾಂಡ್ಯ ಹೇಳಿದ್ದಾರೆ.

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಸೂರರೈ ಪೊಟ್ರು ಅಮೆಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿತ್ತು. ಒಟಿಟಿಯಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಸೂರ್ಯ ಅವರ ಹೋಮ್ ಬ್ಯಾನರ್ 2ಡಿ ಎಂಟರ್ ಟೈನ್ ಮೆಂಟ್ ನಿರ್ಮಿಸಿದ ಈ ಚಿತ್ರದಲ್ಲಿ ಸೂರ್ಯ ಜತೆಗೆ ಪರೇಶ್​ ರಾವಲ್​, ಅಪರ್ಣಾ ಬಾಲಮುರಳಿ, ಊರ್ವಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

 ಇದನ್ನೂ ಓದಿ: ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

Published On - 1:49 pm, Fri, 26 February 21

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ