AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’

Soorarai Pottru Joins OSCARS: 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು' ಪ್ರವೇಶ ಗಿಟ್ಟಿಸಿಕೊಂಡಿದೆ.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು'
ಸೂರರೈ ಪೊಟ್ರು
ರಶ್ಮಿ ಕಲ್ಲಕಟ್ಟ
|

Updated on:Feb 26, 2021 | 1:51 PM

Share

ದೆಹಲಿ: ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’ 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಗಿಟ್ಟಿಸಿಕೊಂಡಿದೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆಂಡ್ ಸಯನ್ಸ್ ಹೇಳಿದೆ. ಮಾರ್ಚ್ 5-10ರವರೆಗೆ ಅಕಾಡೆಮಿ ಮತದಾನ ನಡೆಯಲಿದ್ದು ಮಾರ್ಚ್ 15ರಂದು ಫಲಿತಾಂಶ ಪ್ರಕಟವಾಗಲಿದೆ.

ಕಡಿಮೆ ದರದಲ್ಲಿ ಸಾಮಾನ್ಯ ವ್ಯಕ್ತಿಗಳೂ ವಿಮಾನದಲ್ಲಿ ಸಂಚರಿಸಬೇಕು ಎಂದು ಕನಸು ಹೊತ್ತು ಏರ್ ಡೆಕ್ಕನ್ ವಿಮಾನಯಾನ ಸಂಸ್ಥೆ ಆರಂಭಿಸಿದ ಕನ್ನಡಿಗ ಗೋಪಿನಾಥ್​ ಜೀವನದ ಕಥೆ ಸೂರರೈ ಪೊಟ್ರು ಸಿನಿಮಾ ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಹಿನ್ನೆಲೆ ಸಂಗೀತ ಹಾಗೂ ಇತರ ವಿಭಾಗಗಳಲ್ಲಿ ಆಸ್ಕರ್​ ಸ್ಪರ್ಧೆಗೆ ಪ್ರವೇಶಿಸಿದೆ.

ಪ್ರಾಥಮಿಕ ಹಂತದಲ್ಲಿ ಆಯ್ಕೆಯಾದ 366 ಸಿನಿಮಾಗಳ ಪಟ್ಟಿಯಲ್ಲಿ ಸೂರರೈ ಪೊಟ್ರು ಸಿನಿಮಾ ಇದೆ. ಜನರಲ್ ಕೆಟಗರಿಯಲ್ಲಿ ಈ ಸಿನಿಮಾ ಸ್ಪರ್ಧಿಸುತ್ತಿದೆ ಎಂದು ಸಹ ನಿರ್ಮಾಪಕ ರಾಜಶೇಖರ್ ಪಾಂಡ್ಯ ಹೇಳಿದ್ದಾರೆ.

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಸೂರರೈ ಪೊಟ್ರು ಅಮೆಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿತ್ತು. ಒಟಿಟಿಯಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಸೂರ್ಯ ಅವರ ಹೋಮ್ ಬ್ಯಾನರ್ 2ಡಿ ಎಂಟರ್ ಟೈನ್ ಮೆಂಟ್ ನಿರ್ಮಿಸಿದ ಈ ಚಿತ್ರದಲ್ಲಿ ಸೂರ್ಯ ಜತೆಗೆ ಪರೇಶ್​ ರಾವಲ್​, ಅಪರ್ಣಾ ಬಾಲಮುರಳಿ, ಊರ್ವಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

 ಇದನ್ನೂ ಓದಿ: ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

Published On - 1:49 pm, Fri, 26 February 21

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!