AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’

Soorarai Pottru Joins OSCARS: 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು' ಪ್ರವೇಶ ಗಿಟ್ಟಿಸಿಕೊಂಡಿದೆ.

ಆಸ್ಕರ್ ಸ್ಪರ್ಧೆಯಲ್ಲಿ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ 'ಸೂರರೈ ಪೊಟ್ರು'
ಸೂರರೈ ಪೊಟ್ರು
ರಶ್ಮಿ ಕಲ್ಲಕಟ್ಟ
|

Updated on:Feb 26, 2021 | 1:51 PM

Share

ದೆಹಲಿ: ಸೂರ್ಯ ನಾಯಕನಾಗಿರುವ ಸುಧಾ ಕೊಂಗರ ನಿರ್ದೇಶನದ ತಮಿಳು ಸಿನಿಮಾ ‘ಸೂರರೈ ಪೊಟ್ರು’ 93ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಗಿಟ್ಟಿಸಿಕೊಂಡಿದೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಆಂಡ್ ಸಯನ್ಸ್ ಹೇಳಿದೆ. ಮಾರ್ಚ್ 5-10ರವರೆಗೆ ಅಕಾಡೆಮಿ ಮತದಾನ ನಡೆಯಲಿದ್ದು ಮಾರ್ಚ್ 15ರಂದು ಫಲಿತಾಂಶ ಪ್ರಕಟವಾಗಲಿದೆ.

ಕಡಿಮೆ ದರದಲ್ಲಿ ಸಾಮಾನ್ಯ ವ್ಯಕ್ತಿಗಳೂ ವಿಮಾನದಲ್ಲಿ ಸಂಚರಿಸಬೇಕು ಎಂದು ಕನಸು ಹೊತ್ತು ಏರ್ ಡೆಕ್ಕನ್ ವಿಮಾನಯಾನ ಸಂಸ್ಥೆ ಆರಂಭಿಸಿದ ಕನ್ನಡಿಗ ಗೋಪಿನಾಥ್​ ಜೀವನದ ಕಥೆ ಸೂರರೈ ಪೊಟ್ರು ಸಿನಿಮಾ ಅತ್ಯುತ್ತಮ ನಟ, ಅತ್ಯುತ್ತಮ ನಟಿ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಹಿನ್ನೆಲೆ ಸಂಗೀತ ಹಾಗೂ ಇತರ ವಿಭಾಗಗಳಲ್ಲಿ ಆಸ್ಕರ್​ ಸ್ಪರ್ಧೆಗೆ ಪ್ರವೇಶಿಸಿದೆ.

ಪ್ರಾಥಮಿಕ ಹಂತದಲ್ಲಿ ಆಯ್ಕೆಯಾದ 366 ಸಿನಿಮಾಗಳ ಪಟ್ಟಿಯಲ್ಲಿ ಸೂರರೈ ಪೊಟ್ರು ಸಿನಿಮಾ ಇದೆ. ಜನರಲ್ ಕೆಟಗರಿಯಲ್ಲಿ ಈ ಸಿನಿಮಾ ಸ್ಪರ್ಧಿಸುತ್ತಿದೆ ಎಂದು ಸಹ ನಿರ್ಮಾಪಕ ರಾಜಶೇಖರ್ ಪಾಂಡ್ಯ ಹೇಳಿದ್ದಾರೆ.

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಸೂರರೈ ಪೊಟ್ರು ಅಮೆಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿತ್ತು. ಒಟಿಟಿಯಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಸೂರ್ಯ ಅವರ ಹೋಮ್ ಬ್ಯಾನರ್ 2ಡಿ ಎಂಟರ್ ಟೈನ್ ಮೆಂಟ್ ನಿರ್ಮಿಸಿದ ಈ ಚಿತ್ರದಲ್ಲಿ ಸೂರ್ಯ ಜತೆಗೆ ಪರೇಶ್​ ರಾವಲ್​, ಅಪರ್ಣಾ ಬಾಲಮುರಳಿ, ಊರ್ವಶಿ ಮೊದಲಾದವರು ಬಣ್ಣ ಹಚ್ಚಿದ್ದಾರೆ.

 ಇದನ್ನೂ ಓದಿ: ಆಸ್ಕರ್​ ರೇಸ್​ನಲ್ಲಿ ಕನ್ನಡಿಗ ಗೋಪಿನಾಥ್​ ಜೀವನದ ಕಥೆ!

Published On - 1:49 pm, Fri, 26 February 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ