AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​
ಸುಗಂಧ ಹಾಗೂ ಸಂಕೇತ್​ ಮದುವೆ ಫೋಟೋಗಳು
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 07, 2021 | 5:14 PM

Share

 ಕೊರೊನಾ ವೈರಸ್​ ಎರಡನೇ ಅಲೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊವಿಡ್ ಸೋಂಕು​ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ನಿಯಮಗಳನ್ನು ಜಾರಿಗೆ ತಂದಿದೆ. ಕೆಲವು ರಾಜ್ಯಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿಯಲ್ಲಿದೆ. ಅನೇಕ ರಾಜ್ಯಗಳಲ್ಲಿ ಮದುವೆಗೆ ಅತಿಥಿಗಳ ಮಿತಿ ಹೇರಲಾಗಿದೆ. ಈ ರೀತಿಯ ಕಠಿಣ ನಿಯಮದ ಮಧ್ಯೆಯೂ ಸೆಲೆಬ್ರಿಟಿ ಜೋಡಿಯೊಂದು ಅದ್ದೂರಿಯಾಗಿ ಮದುವೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಈ ಜೋಡಿ ಮೇಲೆ ಕೇಸ್ ದಾಖಲಾಗಿದೆ.

ಕಪಿಲ್​ ಶರ್ಮಾ ಶೋನಲ್ಲಿ ಸುಗಂಧ​ ಮಿಶ್ರಾ ಹಾಗೂ ಸಂಕೇತ್​ ಕಾಮಿಡಿಯನ್​ ಆಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರ ಖ್ಯಾತಿ ಹೆಚ್ಚಿತ್ತು. ಈ ಜೋಡಿ ಏಪ್ರಿಲ್​ 26ರಂದು ಮದುವೆ ಆಗಿದೆ. ಆದರೆ, ವಿವಾಹ ಆಗುವ ಸಂದರ್ಭದಲ್ಲಿ ಕೊವಿಡ್​ ನಿಯಮ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ಹೀಗಾಗಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಜೋಡಿ ಪಂಜಾಬ್​ನಲ್ಲಿ ಮದುವೆ ಆಗಿದೆ. ಅಲ್ಲಿನ ರಾಜ್ಯ ಸರ್ಕಾರದ ನಿಯಮದ ಪ್ರಕಾರ ಮದುವೆಗೆ 10 ಜನರು ಮಾತ್ರ ಪಾಲ್ಗೊಳ್ಳಬಹುದು. ಆದರೆ, ಈ ಜೋಡಿಯ ಮದುವೆ ಸಂದರ್ಭದಲ್ಲಿ ಸಾಕಷ್ಟು ಜನರು ಸೇರಿದ್ದರು. ಅಲ್ಲದೆ, ವಿವಾಹ ಕಾರ್ಯ ಅದ್ದೂರಿಯಾಗಿ ನೆರವೇರಿತ್ತು. ಈ ಬಗ್ಗೆ ಸಾಕಷ್ಟು ವಿಡಿಯೋಗಳು ಕೂಡ ವೈರಲ್​ ಆಗಿದ್ದವು. ಇದನ್ನು ಗಮನಿಸಿದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು. ಈಗ ಕೊವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಈ ಜೋಡಿಗೆ ಸಂಕಷ್ಟಕ್ಕೆ ತುತ್ತಾಗಿದೆ.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!