AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​
ಸುಗಂಧ ಹಾಗೂ ಸಂಕೇತ್​ ಮದುವೆ ಫೋಟೋಗಳು
ರಾಜೇಶ್ ದುಗ್ಗುಮನೆ
| Edited By: |

Updated on: May 07, 2021 | 5:14 PM

Share

 ಕೊರೊನಾ ವೈರಸ್​ ಎರಡನೇ ಅಲೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊವಿಡ್ ಸೋಂಕು​ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ನಿಯಮಗಳನ್ನು ಜಾರಿಗೆ ತಂದಿದೆ. ಕೆಲವು ರಾಜ್ಯಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿಯಲ್ಲಿದೆ. ಅನೇಕ ರಾಜ್ಯಗಳಲ್ಲಿ ಮದುವೆಗೆ ಅತಿಥಿಗಳ ಮಿತಿ ಹೇರಲಾಗಿದೆ. ಈ ರೀತಿಯ ಕಠಿಣ ನಿಯಮದ ಮಧ್ಯೆಯೂ ಸೆಲೆಬ್ರಿಟಿ ಜೋಡಿಯೊಂದು ಅದ್ದೂರಿಯಾಗಿ ಮದುವೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಈ ಜೋಡಿ ಮೇಲೆ ಕೇಸ್ ದಾಖಲಾಗಿದೆ.

ಕಪಿಲ್​ ಶರ್ಮಾ ಶೋನಲ್ಲಿ ಸುಗಂಧ​ ಮಿಶ್ರಾ ಹಾಗೂ ಸಂಕೇತ್​ ಕಾಮಿಡಿಯನ್​ ಆಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರ ಖ್ಯಾತಿ ಹೆಚ್ಚಿತ್ತು. ಈ ಜೋಡಿ ಏಪ್ರಿಲ್​ 26ರಂದು ಮದುವೆ ಆಗಿದೆ. ಆದರೆ, ವಿವಾಹ ಆಗುವ ಸಂದರ್ಭದಲ್ಲಿ ಕೊವಿಡ್​ ನಿಯಮ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ಹೀಗಾಗಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಜೋಡಿ ಪಂಜಾಬ್​ನಲ್ಲಿ ಮದುವೆ ಆಗಿದೆ. ಅಲ್ಲಿನ ರಾಜ್ಯ ಸರ್ಕಾರದ ನಿಯಮದ ಪ್ರಕಾರ ಮದುವೆಗೆ 10 ಜನರು ಮಾತ್ರ ಪಾಲ್ಗೊಳ್ಳಬಹುದು. ಆದರೆ, ಈ ಜೋಡಿಯ ಮದುವೆ ಸಂದರ್ಭದಲ್ಲಿ ಸಾಕಷ್ಟು ಜನರು ಸೇರಿದ್ದರು. ಅಲ್ಲದೆ, ವಿವಾಹ ಕಾರ್ಯ ಅದ್ದೂರಿಯಾಗಿ ನೆರವೇರಿತ್ತು. ಈ ಬಗ್ಗೆ ಸಾಕಷ್ಟು ವಿಡಿಯೋಗಳು ಕೂಡ ವೈರಲ್​ ಆಗಿದ್ದವು. ಇದನ್ನು ಗಮನಿಸಿದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು. ಈಗ ಕೊವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಈ ಜೋಡಿಗೆ ಸಂಕಷ್ಟಕ್ಕೆ ತುತ್ತಾಗಿದೆ.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!