AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​
ಸುಗಂಧ ಹಾಗೂ ಸಂಕೇತ್​ ಮದುವೆ ಫೋಟೋಗಳು
ರಾಜೇಶ್ ದುಗ್ಗುಮನೆ
| Edited By: |

Updated on: May 07, 2021 | 5:14 PM

Share

 ಕೊರೊನಾ ವೈರಸ್​ ಎರಡನೇ ಅಲೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊವಿಡ್ ಸೋಂಕು​ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ನಿಯಮಗಳನ್ನು ಜಾರಿಗೆ ತಂದಿದೆ. ಕೆಲವು ರಾಜ್ಯಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿಯಲ್ಲಿದೆ. ಅನೇಕ ರಾಜ್ಯಗಳಲ್ಲಿ ಮದುವೆಗೆ ಅತಿಥಿಗಳ ಮಿತಿ ಹೇರಲಾಗಿದೆ. ಈ ರೀತಿಯ ಕಠಿಣ ನಿಯಮದ ಮಧ್ಯೆಯೂ ಸೆಲೆಬ್ರಿಟಿ ಜೋಡಿಯೊಂದು ಅದ್ದೂರಿಯಾಗಿ ಮದುವೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಈ ಜೋಡಿ ಮೇಲೆ ಕೇಸ್ ದಾಖಲಾಗಿದೆ.

ಕಪಿಲ್​ ಶರ್ಮಾ ಶೋನಲ್ಲಿ ಸುಗಂಧ​ ಮಿಶ್ರಾ ಹಾಗೂ ಸಂಕೇತ್​ ಕಾಮಿಡಿಯನ್​ ಆಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರ ಖ್ಯಾತಿ ಹೆಚ್ಚಿತ್ತು. ಈ ಜೋಡಿ ಏಪ್ರಿಲ್​ 26ರಂದು ಮದುವೆ ಆಗಿದೆ. ಆದರೆ, ವಿವಾಹ ಆಗುವ ಸಂದರ್ಭದಲ್ಲಿ ಕೊವಿಡ್​ ನಿಯಮ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ಹೀಗಾಗಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಜೋಡಿ ಪಂಜಾಬ್​ನಲ್ಲಿ ಮದುವೆ ಆಗಿದೆ. ಅಲ್ಲಿನ ರಾಜ್ಯ ಸರ್ಕಾರದ ನಿಯಮದ ಪ್ರಕಾರ ಮದುವೆಗೆ 10 ಜನರು ಮಾತ್ರ ಪಾಲ್ಗೊಳ್ಳಬಹುದು. ಆದರೆ, ಈ ಜೋಡಿಯ ಮದುವೆ ಸಂದರ್ಭದಲ್ಲಿ ಸಾಕಷ್ಟು ಜನರು ಸೇರಿದ್ದರು. ಅಲ್ಲದೆ, ವಿವಾಹ ಕಾರ್ಯ ಅದ್ದೂರಿಯಾಗಿ ನೆರವೇರಿತ್ತು. ಈ ಬಗ್ಗೆ ಸಾಕಷ್ಟು ವಿಡಿಯೋಗಳು ಕೂಡ ವೈರಲ್​ ಆಗಿದ್ದವು. ಇದನ್ನು ಗಮನಿಸಿದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು. ಈಗ ಕೊವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಈ ಜೋಡಿಗೆ ಸಂಕಷ್ಟಕ್ಕೆ ತುತ್ತಾಗಿದೆ.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ