AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು.

ಹಣವಿದೆ ಎಂದು ಅದ್ದೂರಿಯಾಗಿ ಮದುವೆಯಾದ ಸೆಲೆಬ್ರಿಟಿಗಳು​; ನಂತರ ಕಾದಿತ್ತು ಶಾಕ್​
ಸುಗಂಧ ಹಾಗೂ ಸಂಕೇತ್​ ಮದುವೆ ಫೋಟೋಗಳು
ರಾಜೇಶ್ ದುಗ್ಗುಮನೆ
| Edited By: |

Updated on: May 07, 2021 | 5:14 PM

Share

 ಕೊರೊನಾ ವೈರಸ್​ ಎರಡನೇ ಅಲೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊವಿಡ್ ಸೋಂಕು​ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ನಿಯಮಗಳನ್ನು ಜಾರಿಗೆ ತಂದಿದೆ. ಕೆಲವು ರಾಜ್ಯಗಳಲ್ಲಿ ಕಠಿಣ ಲಾಕ್​ಡೌನ್​ ಜಾರಿಯಲ್ಲಿದೆ. ಅನೇಕ ರಾಜ್ಯಗಳಲ್ಲಿ ಮದುವೆಗೆ ಅತಿಥಿಗಳ ಮಿತಿ ಹೇರಲಾಗಿದೆ. ಈ ರೀತಿಯ ಕಠಿಣ ನಿಯಮದ ಮಧ್ಯೆಯೂ ಸೆಲೆಬ್ರಿಟಿ ಜೋಡಿಯೊಂದು ಅದ್ದೂರಿಯಾಗಿ ಮದುವೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಈ ಜೋಡಿ ಮೇಲೆ ಕೇಸ್ ದಾಖಲಾಗಿದೆ.

ಕಪಿಲ್​ ಶರ್ಮಾ ಶೋನಲ್ಲಿ ಸುಗಂಧ​ ಮಿಶ್ರಾ ಹಾಗೂ ಸಂಕೇತ್​ ಕಾಮಿಡಿಯನ್​ ಆಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರ ಖ್ಯಾತಿ ಹೆಚ್ಚಿತ್ತು. ಈ ಜೋಡಿ ಏಪ್ರಿಲ್​ 26ರಂದು ಮದುವೆ ಆಗಿದೆ. ಆದರೆ, ವಿವಾಹ ಆಗುವ ಸಂದರ್ಭದಲ್ಲಿ ಕೊವಿಡ್​ ನಿಯಮ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ. ಹೀಗಾಗಿ ಇವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಜೋಡಿ ಪಂಜಾಬ್​ನಲ್ಲಿ ಮದುವೆ ಆಗಿದೆ. ಅಲ್ಲಿನ ರಾಜ್ಯ ಸರ್ಕಾರದ ನಿಯಮದ ಪ್ರಕಾರ ಮದುವೆಗೆ 10 ಜನರು ಮಾತ್ರ ಪಾಲ್ಗೊಳ್ಳಬಹುದು. ಆದರೆ, ಈ ಜೋಡಿಯ ಮದುವೆ ಸಂದರ್ಭದಲ್ಲಿ ಸಾಕಷ್ಟು ಜನರು ಸೇರಿದ್ದರು. ಅಲ್ಲದೆ, ವಿವಾಹ ಕಾರ್ಯ ಅದ್ದೂರಿಯಾಗಿ ನೆರವೇರಿತ್ತು. ಈ ಬಗ್ಗೆ ಸಾಕಷ್ಟು ವಿಡಿಯೋಗಳು ಕೂಡ ವೈರಲ್​ ಆಗಿದ್ದವು. ಇದನ್ನು ಗಮನಿಸಿದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಸುಗಂಧ​ ಮಿಶ್ರಾ ಜಲಂಧರ್​ನವರು. ಸಂಕೇತ್​ ಭೋಸಲೆ ಮುಂಬೈನವರು. ಮದುವೆಗಾಗಿ ಸಂಕೇತ್​ ಕುಟುಂಬದವರು ಮುಂಬೈನಿಂದ ಪಂಜಾಬ್​ಗೆ ಬಂದಿದ್ದರು. ಈಗ ಕೊವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಈ ಜೋಡಿಗೆ ಸಂಕಷ್ಟಕ್ಕೆ ತುತ್ತಾಗಿದೆ.

ಇದನ್ನೂ ಓದಿ: Vaishnavi Gowda: ನಾನು ಜೀವನವನ್ನು ಒಂಟಿಯಾಗಿ ಕಳೆದಿದ್ದೇನೆ, ಈಗ ಮದುವೆ ಆಗೋಕೆ ತುದಿಗಾಲಲ್ಲಿ ನಿಂತಿದ್ದೇನೆ; ವೈಷ್ಣವಿ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!