AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರದ ವೇಳೆ ರಸ್ತೆಯಲ್ಲೇ ಸ್ಟೆಪ್ ಹಾಕಿದ ನಟಿ ಸುಹಾಸಿನಿ-ಅಕ್ಷರಾ; ವಿಡಿಯೋ ವೈರಲ್​

ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು (ಏ.4) ಮುಂಜಾನೆಯಿಂದಲೇ ಸುಹಾಸಿನಿ ಹಾಗೂ ಅಕ್ಷರಾ ಪ್ರಚಾರ ಆರಂಭಿಸಿದ್ದಾರೆ. ಪ್ರಚಾರದ ವೇಳೆ ಮಾರ್ಗಮಧ್ಯೆ ವಾದ್ಯದ ಶಬ್ದಕ್ಕೆ ಕುಣಿದಿದ್ದಾರೆ. ಅಲ್ಲಿ ನೆರೆದಿದ್ದವರು ಕೂಡ ಸುಹಾಸಿನಿ ಜತೆ ಹೆಜ್ಜೆ ಹಾಕಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ರಸ್ತೆಯಲ್ಲೇ ಸ್ಟೆಪ್ ಹಾಕಿದ ನಟಿ ಸುಹಾಸಿನಿ-ಅಕ್ಷರಾ; ವಿಡಿಯೋ ವೈರಲ್​
ಎಲೆಕ್ಷನ್​ ಪ್ರಚಾರದಲ್ಲಿ ಸುಹಾಸಿನಿ -ಅಕ್ಷರಾ
ರಾಜೇಶ್ ದುಗ್ಗುಮನೆ
| Edited By: |

Updated on: Apr 04, 2021 | 3:35 PM

Share

ತಮಿಳುನಾಡು ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಯಾವ ಪಕ್ಷ ಅಧಿಕಾರಕ್ಕೆ ಏರಲಿದೆ ಎನ್ನುವ ಬಗ್ಗೆ ಚರ್ಚೆ ಕೂಡ ಜೋರಾಗಿದೆ. ಹಿರಿಯ ನಟ ಕಮಲ್​ ಹಾಸನ್​ ಈ ಬಾರಿ ಎಂಎನ್‌ಎಂ (ಮಕ್ಕಳ್ ನೀದಿ ಮಯಮ್) ಪಕ್ಷದ ಮೂಲಕ ಸ್ಪರ್ಧೆ ಮಾಡಿದ್ದಾರೆ. ಕಮಲ್​ ಹಾಸನ್​ ಜೋರಾಗಿ ಪ್ರಚಾರ ಮಾಡುತ್ತಿದ್ದಾರೆ. ಈಗ ಕಮಲ್​ ಹಾಸನ್​ ಪರವಾಗಿ ಮಗಳು ಅಕ್ಷರಾ ಹಾಸನ್​, ಅಣ್ಣನ ಮಗಳು ಹಾಗೂ ನಟಿ ಸುಹಾಸಿನಿ ಭರ್ಜರಿಯಾಗಿ ಡಾನ್ಸ್​ ಮಾಡುವ ಮೂಲಕ ಪ್ರಚಾರದ ರಂಗು ಹೆಚ್ಚಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು (ಏ.4) ಮುಂಜಾನೆಯಿಂದಲೇ ಸುಹಾಸಿನಿ ಹಾಗೂ ಅಕ್ಷರಾ ಪ್ರಚಾರ ಆರಂಭಿಸಿದ್ದಾರೆ. ಪ್ರಚಾರದ ವೇಳೆ ಮಾರ್ಗಮಧ್ಯೆ ವಾದ್ಯದ ಶಬ್ದಕ್ಕೆ ಸ್ಟೆಪ್​ ಹಾಕಿ ಕುಣಿದಿದ್ದಾರೆ. ಅಲ್ಲಿ ನೆರೆದಿದ್ದವರು ಕೂಡ ಸುಹಾಸಿನಿ ಜತೆ ಹೆಜ್ಜೆ ಹಾಕಿದ್ದಾರೆ.

ಎಂಎನ್​ಎಂ ಪಕ್ಷಕ್ಕೆ ಟಾರ್ಚ್​ ಚಿನ್ಹೆ ನೀಡಲಾಗಿದೆ. ಈ ಮೊದಲು ಬಿಡುಗಡೆ ಮಾಡಿದ್ದ ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿ ಸುಹಾಸಿನಿ ಕೂಡ ಇದ್ದರು. ಹೀಗಾಗಿ ಅವರು ಕಮಲ್​ ಹಾಸನ್​ ಪರವಾಗಿ ಮತಯಾಚನೆ ಮಾಡಿದ್ದಾರೆ.

ಏಪ್ರಿಲ್​ 6ರಂದು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಒಂದೇ ಹಂತದಲ್ಲಿ 234 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 234 ಕ್ಷೇತ್ರಗಳ ಪೈಕಿ ಬಹುತೇಕ ಕ್ಷೇತ್ರಗಳಲ್ಲಿ ಮಕ್ಕಳ್ ನೀದಿ ಮಯಮ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಇಂದು ಬಹಿರಂಗ ಮತಯಾಚನೆಗೆ ಕೊನೆಯ ದಿನವಾಗಿದೆ. ಕಳೆದ ಕೆಲ ದಿನಗಳಿಂದ ಅಕ್ಷರಾ ನಿರಂತರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

2019ರಲ್ಲಿ ತೆರೆಕಂಡಿದ್ದ ಶಿವರಾಜ್​ಕುಮಾರ್​ ನಟನೆಯ ಆಯುಷ್ಮಾನ್​ ಭವ ಚಿತ್ರವೇ ಕೊನೆ. ಅದಾದ ನಂತರ ಸುಹಾಸಿನಿ ಯಾವುದೇ ಕನ್ನಡ ಚಿತ್ರಗಳಲ್ಲಿ ಬಣ್ಣ ಹಚ್ಚಿಲ್ಲ. ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಸುಹಾಸಿನಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ನಯನತಾರಾ-ಉದಯನಿಧಿ ಲಿವ್​ಇನ್​ನಲ್ಲಿದ್ದರೆ ನಾನೇನು ಮಾಡಲಿ?: ವಿವಾದ ಎಬ್ಬಿಸಿದ ಹೇಳಿಕೆ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!