AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿನ್ನ ಹೊಟ್ಟೆಯಲ್ಲಿ ನಮ್ಮ ಮಗಳಾಗಿ ಬರುತ್ತಾಳೆ’; ತಾಯಿ ನಿಧನದ ಬಗ್ಗೆ ಜಾಕ್ವೆಲಿನ್​ಗೆ ಮುಕೇಶ್ ಪತ್ರ

ಜಾಕ್ವೆಲಿನ್ ಫರ್ನಾಂಡಿಸ್ ಅವರ ತಾಯಿ ಕಿಮ್ ಫರ್ನಾಂಡಿಸ್ ನಿಧನ ಹೊಂದಿದ್ದಾರೆ. ಆ ಬಳಿಕ 200 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಅವರು ಜಾಕ್ವೆಲಿನ್ ಗೆ ಸಂತಾಪ ಸೂಚಿಸುವ ಪತ್ರ ಬರೆದಿದ್ದಾನೆ.ಜಾಕ್ವೆಲಿನ್ ಸುಕೇಶ್ ಜೊತೆಗಿನ ಸಂಬಂಧದಿಂದಾಗಿ ತನಿಖೆಯನ್ನು ಎದುರಿಸುತ್ತಿದ್ದಾರೆ.

‘ನಿನ್ನ ಹೊಟ್ಟೆಯಲ್ಲಿ ನಮ್ಮ ಮಗಳಾಗಿ ಬರುತ್ತಾಳೆ’; ತಾಯಿ ನಿಧನದ ಬಗ್ಗೆ ಜಾಕ್ವೆಲಿನ್​ಗೆ ಮುಕೇಶ್ ಪತ್ರ
ಜಾಕ್ವೆಲಿನ್
ರಾಜೇಶ್ ದುಗ್ಗುಮನೆ
|

Updated on:Apr 24, 2025 | 11:02 AM

Share

ಏಪ್ರಿಲ್ 6ರಂದು ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ತಾಯಿ ಕಿಮ್ ಫರ್ನಾಂಡಿಸ್ ನಿಧನ ಹೊಂದಿದರು. ಅವರ ಸಾವು ಕುಟುಂಬಕ್ಕೆ ಸಾಕಷ್ಟು ನೋವು ತಂದಿತ್ತು. ಈ ನೋವಿನಲ್ಲೇ ಜಾಕ್ವೆಲಿನ್ ಮಾಜಿ ಬಾಯ್​ಫ್ರೆಂಡ್ ಹಾಗೂ 200 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಅವರು ಪತ್ರ ಬರೆದು ಜಾಕ್ವೆಲಿನ್​ಗೆ ಮತ್ತಷ್ಟು ನೋವು ಮಾಡಿದ್ದಾನೆ. ಕಿಮ್​ ಸಾವಿಗೆ ಸಂತಾಪ ಸೂಚಿಸಿರೋ ಅವರು, ಜಾಕ್ವೆಲಿನ್​ಗೆ ಒಂದಷ್ಟು ಭರವಸೆ ನೀಡಿದ್ದಾನೆ.

‘ನನಗೆ ಬಾಲಿಯಲ್ಲಿ ಸಣ್ಣ ಜಾಗವಿದೆ. ಅಲ್ಲಿರೋ ಗಾರ್ಡನ್​ಗೆ ಕಿಮ್ ಎಂದು ಹೆಸರು ಇಟ್ಟಿದ್ದೇನೆ. ಅದನ್ನು ಈಸ್ಟರ್ ಗಿಫ್ಟ್ ಆಗಿ ನಿನನಗೆ ನೀಡುತ್ತಿದ್ದೇನೆ. ನಿನ್ನ ತಾಯಿಯ ನೆನಪಿಗೆ ಅದನ್ನು ಇಟ್ಟುಕೋ. ಬೇಬಿ, ಸಂತಾಪ ಸೂಚಿಸಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡುತ್ತಿದ್ದೇನೆ. ಈ ನಿನ್ನ ಕೆಟ್ಟ ಕ್ಷಣದಲ್ಲಿ ನಾನು ನಿನ್ನ ಜೊತೆಗಿದ್ದೇನೆ. ಕೆಲವರು ನಿನ್ನ ಜೊತೆ ಇದ್ದಂತೆ ತೋರಿಸಕೊಳ್ಳುತ್ತಾರೆ. ಅದಕ್ಕೆ ಅವರ ಸ್ವಾರ್ಥ ಕಾರಣ. ಅದು ನಿನಗೂ ಗೊತ್ತಿದೆ’ ಎಂದಿದ್ದಾರೆ ಅವರು.

‘ಅಮ್ಮ ನಮ್ಮ ಮಗಳಾಗಿ ನಿನ್ನ ಹೊಟ್ಟೆಯಲ್ಲಿ ಹುಟ್ಟಿ ಬರುತ್ತಾಳೆ. ತಂದೆ ಜೊತೆ ಈಸ್ಟರ್ ಗಿಫ್ಟ್ ನೋಡಲು ನೀನು ಹೋಗಬೇಕು. ನಿನ್ನ ತಾಯಿಯ ಇರುವಿಕೆ ನಿನಗೆ ಭಾಸವಾಗುತ್ತದೆ’ ಎಂದು ಸುಕೇಶ್ ಹೇಳಿದ್ದಾನೆ. ಈತನ ಸಂದೇಶದಿಂದ ಜಾಕ್ವೆಲಿನ್ ಮತ್ತಷ್ಟು ವಿಚಲಿತರಾಗಿರಬಹದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ದ ರಾಜ್​ಕುಮಾರ್; ಆ ಬಳಿಕ ನಡೆದಿದ್ದು ಏನು
Image
ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು
Image
ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ನಟನ ಅಭಿಪ್ರಾಯವೇನು? ದೂಷಿಸಿದ್ದು ಯಾರನ್ನು?
Image
ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?

ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದರು ಎನ್ನಲಾಗಿದೆ. ಅವರ ಖಾಸಗಿ ಫೋಟೋಗಳನ್ನು ಸುಕೇಶ್ ಅವರೇ ರಿವೀಲ್ ಮಾಡಿದ್ದರು. ರಿಲೇಶನ್​ಶಿಪ್ ವೇಳೆ ಇದ್ದ ಸಂದರ್ಭದಲ್ಲಿ ಜಾಕ್ವೆಲಿನ್​ಗೆ ದುಬಾರಿ ಕುದುರೆ, ಬೆಕ್ಕುಗಳನ್ನು ಉಡುಗೊರೆ ಆಗಿ ನೀಡಿದ್ದರು. ಇದರಿಂದ ಜಾಕ್ವೆಲಿನ್ ಸಮಸ್ಯೆ ಎದುರಿಸಿದ್ದರು.

ಇದನ್ನೂ ಓದಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ಫರ್ನಾಂಡಿಸ್ ನಿಧನ

ಜಾಕ್ವೆಲಿನ್ ಅವರು ಸದ್ಯ ಜಾರಿ ನಿರ್ದೇಶನಾಲಯದ ರೇಡಾರ್​ನಲ್ಲಿ ಇದ್ದಾರೆ. ಈಗಾಗಲೇ ಅನೇಕ ಬಾರಿ ವಿಚಾರಣೆ ಎದುರಿಸಿ ಆಗಿದೆ. ಅವರು ವಿದೇಶಕ್ಕೆ ಹೋಗುವುದರ ಮೇಲೂ ತಡೆ ಹೇರಲಾಗಿತ್ತು. ಆದರೆ, ಅವರು ವಿಚಾರಣೆಗೆ ಸಹಕರಿಸುತ್ತಿರುವುದರಿಂದ ಯಾವುದೇ ತೊಂದರೆ ಇಲ್ಲ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:00 am, Thu, 24 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ