AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿದ್ದುಕೊಂಡೇ ಜಾಕ್ವೆಲಿನ್​​ಗೆ ಮನೆ ಉಡುಗೊರೆ ಕೊಟ್ಟ ಸುಖೇಶ್?

Sukesh Chandrashekhar: ಬಾಲಿವುಡ್​​ ನಟಿಯರ ಮೇಲೆ ವಿಶೇಷ ಮೋಹ ಹೊಂದಿದ್ದ ಸುಖೇಶ್, ತನ್ನ ಮೋಸದ ಹಣದ ನೆರವಿನಿಂದ ಹಲವು ನಟಿಯರಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಗಳನ್ನು ನೀಡುತ್ತಿದ್ದ. ಜಾಕ್ವೆಲಿನ್ ಫರ್ನಾಂಡೀಸ್​ ಅನ್ನು ಗರ್ಲ್​​ಫ್ರೆಂಡ್ ಸಹ ಮಾಡಿಕೊಂಡಿದ್ದ. ಇದೀಗ ಈತ ಜೈಲಿನಲ್ಲಿದ್ದು, ಜೈಲಿನಲ್ಲಿದ್ದುಕೊಂಡೇ ತಾನು ಜಾಕ್ವೆಲಿನ್ ಫರ್ನಾಂಡೀಸ್​​ಗೆ ದುಬಾರಿ ಉಡುಗೊರೆ ಕೊಟ್ಟಿರುವುದಾಗಿ ಹೇಳಿಕೊಂಡಿದ್ದಾನೆ.

ಜೈಲಲ್ಲಿದ್ದುಕೊಂಡೇ ಜಾಕ್ವೆಲಿನ್​​ಗೆ ಮನೆ ಉಡುಗೊರೆ ಕೊಟ್ಟ ಸುಖೇಶ್?
Sukesh
ಮಂಜುನಾಥ ಸಿ.
|

Updated on: Dec 25, 2025 | 11:32 AM

Share

ಸುಖೇಶ್ ಚಂದ್ರಶೇಖರ್ (Sukhesh Chandrashekhar), ಭಾರತದ ನಂಬರ್ ಕಾನ್​ಮ್ಯಾನ್ (ಮೋಸಗಾರ) ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ದೇಶದ ಕೆಲವು ಪ್ರಮುಖ ರಾಜಕಾರಣಿಗಳು, ವಿಐಪಿ ವ್ಯಕ್ತಿಗಳು, ಖ್ಯಾತ ಉದ್ಯಮಿಗಳು, ಚಿತ್ರರಂಗದ ಕೆಲವರಿಗೆ ಸಹ ಮೋಸ ಮಾಡಿ ನೂರಾರು ಕೋಟಿ ರೂಪಾಯಿ ಹಣ ಗಳಿಸಿದ್ದಾನೆ ಈ ಆಸಾಮಿ. ಬಾಲಿವುಡ್​​ ನಟಿಯರ ಮೇಲೆ ವಿಶೇಷ ಮೋಹ ಹೊಂದಿದ್ದ ಸುಖೇಶ್, ತನ್ನ ಮೋಸದ ಹಣದ ನೆರವಿನಿಂದ ಹಲವು ನಟಿಯರಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಗಳನ್ನು ನೀಡುತ್ತಿದ್ದ. ಜಾಕ್ವೆಲಿನ್ ಫರ್ನಾಂಡೀಸ್​ ಅನ್ನು ಗರ್ಲ್​​ಫ್ರೆಂಡ್ ಸಹ ಮಾಡಿಕೊಂಡಿದ್ದ. ಇದೀಗ ಈತ ಜೈಲಿನಲ್ಲಿದ್ದು, ಜೈಲಿನಲ್ಲಿದ್ದುಕೊಂಡೇ ತಾನು ಜಾಕ್ವೆಲಿನ್ ಫರ್ನಾಂಡೀಸ್​​ಗೆ ದುಬಾರಿ ಉಡುಗೊರೆ ಕೊಟ್ಟಿರುವುದಾಗಿ ಹೇಳಿಕೊಂಡಿದ್ದಾನೆ.

ವಿಶ್ವದ ಟಾಪ್ ಶ್ರೀಮಂತರು, ಹಾಲಿವುಡ್​ ಸೂಪರ್ ಸ್ಟಾರ್​​ಗಳು ನೆಲೆಸಿರುವ ಅಮೆರಿಕದ ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್​​ನಲ್ಲಿ ತಾವು ಜಾಕ್ವೆಲಿನ್​​ಗೆ ದುಬಾರಿ ಮನೆಯೊಂದನ್ನು ಕ್ರಿಸ್​​ಮಸ್ ಉಡುಗೊರೆಯಾಗಿ ನೀಡಿರುವುದಾಗಿ ಸುಖೇಶ್ ಹೇಳಿಕೊಂಡಿದ್ದಾನೆ. ಜೈಲಿಂದ ಪತ್ರ ಬರೆದಿರುವ ಸುಖೇಶ್, ಜಾಕ್ವೆಲಿನ್​​ಗೆ ಲವ್ ನೆಸ್ಟ್ (ಪ್ರೀತಿಯ ಗೂಡು) ನೀಡಿರುವುದಾಗಿ ಹೇಳಿಕೊಂಡಿದ್ದಾನೆ.

‘ನಿನಗಾಗಿ ನಾನು ಖರೀದಿಸಿದ್ದ ದುಬಾರಿ ಪ್ರಾಪರ್ಟಿ, ಈ ಮನೆ ನಿರ್ಮಾಣ ಪೂರ್ಣ ಆಗುವುದಿಲ್ಲ ಎಂದು ನೀನು ಅಂದುಕೊಂಡಿದ್ದ ಅದೇ ಪ್ರಾಪರ್ಟಿ ಇದೀಗ ಕಾಮಗಾರಿ ಪೂರ್ಣಗೊಂಡಿದೆ. ಇದು ನಮ್ಮ ಮನೆ ಆಗಲಿದೆ. ಇದನ್ನು ಈ ಕ್ರಿಸ್​​ಮಸ್​​ಗೆ ನಿನಗಾಗಿ ಉಡುಗೊರೆ ನೀಡುತ್ತಿದ್ದೇನೆ’ ಎಂದು ಸುಖೇಶ್ ಚಂದ್ರಶೇಖರ್ ಪತ್ರದಲ್ಲಿ ಹೇಳಿದ್ದಾನೆ. ‘ಈ ಮೊದಲು ನಾವು ಯೋಜನೆ ಹಾಕಿದ್ದಕ್ಕಿಂತಲೂ ದೊಡ್ಡದಾಗಿದೆ ನಮ್ಮ ಈ ಪ್ರಾಪರ್ಟಿ. ನಮ್ಮ ಈ ಹೊಸ ಮನೆಯ ಸುತ್ತ ದೊಡ್ಡ ಗಾಲ್ಫ್ ಕೋರ್ಸ್ ಸಹ ಇದೆ’ ಎಂದಿದ್ದಾನೆ.

ಇದನ್ನೂ ಓದಿ:ಮಹಾ ವಂಚಕ ಸುಖೇಶ್ ಕುರಿತ ಡಾಕ್ಯುಮೆಂಟರಿ, ನಟಿಯಿಂದ ತಕರಾರು?

‘ನಿನ್ನ ಮತ್ತೊಂದು ಆಸೆಯನ್ನು ಪೂರೈಸುವ ಪ್ರಯತ್ನದಲ್ಲಿ ನಾನು ಇದ್ದೀನೆ. ಒಂದು ಐಪಿಎಲ್ ತಂಡದ ಒಡತಿ ಆಗಬೇಕು ಎಂಬುದು ನಿನ್ನ ಆಸೆ ಆಗಿತ್ತು. ನಾನು ಅದೇ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಆದಷ್ಟು ಬೇಗ ಆ ಸರ್ಪ್ರೈಸ್ ಅನ್ನು ಸಹ ನಾನು ನಿನಗೆ ನೀಡಲಿದ್ದೇನೆ’ ಎಂದಿದ್ದಾನೆ ಸುಖೇಶ್.

ಆದರೆ ಸುಖೇಶ್ ಬರೆದಿರುವ ವಿಷಯಗಳು ಸತ್ಯವೊ, ಸುಳ್ಳೊ ತಿಳಿಯದು. ಸುಖೇಶ್​​ಗೆ ಸೇರಿದ ಆಸ್ತಿ, ಕಾರುಗಳು ಬ್ಯಾಂಕ್ ಖಾತೆಗಳನ್ನು ಪೊಲೀಸರು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಸುಖೇಶ್​​ಗೆ ಈ ಹಿಂದೆ ಜೈಲಿನಲ್ಲಿ ನೀಡಲಾಗಿದ್ದ ಎಲ್ಲ ವಿಶೇಷ ಸವಲತ್ತುಗಳನ್ನು ರದ್ದು ಮಾಡಲಾಗಿದೆ. ಆದರೆ ಅದು ಹೇಗೆ ಈತ ಜೈಲಿನಲ್ಲಿದ್ದುಕೊಂಡು ಬೆವರ್ಲಿ ಹಿಲ್​​ನಲ್ಲಿ ಮನೆ ಕಟ್ಟಿಸಿದ ಎಂಬುದು ಅನುಮಾನ.

ಸುಖೇಶ್, ಹಲವು ವರ್ಷಗಳಿಂದ ಜೈಲಿನಲ್ಲಿದ್ದಾನೆ. ಆದರೆ ಜೈಲಿನಲ್ಲಿದ್ದುಕೊಂಡೇ ಹಲವು ವಿಐಪಿಗಳಿಗೆ ಮೋಸ ಮಾಡಿ ನೂರಾರು ಕೋಟಿ ರೂಪಾಯಿ ಹಣ ಗಳಿಕೆ ಮಾಡಿದ್ದ. ಜಾಕ್ವೆಲಿನ್ ಫರ್ನಾಂಡೀಸ್, ನೋರಾ ಫತೇಹಿ ಸೇರಿದಂತೆ ಹಲವು ಬಾಲಿವುಡ್ ನಟಿಯರಿಗೆ ದುಬಾರಿ ಕಾರುಗಳು, ಮನೆಗಳನ್ನು ಉಡುಗೊರೆಯಾಗಿ ನೀಡಿದ್ದ. ಜಾಕ್ವೆಲಿನ್ ಜೊತೆಗೆ ಅತ್ಯಾಪ್ತ ಸಂಬಂಧವನ್ನು ಸುಖೇಶ್ ಹೊಂದಿದ್ದ. ಸುಖೇಶ್ ಜೊತೆಗೆ ಜಾಕ್ವೆಲಿನ್ ಆಪ್ತವಾಗಿರುವ ಚಿತ್ರಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಸುಖೇಶ್ನ ವಂಚನೆ ಪ್ರಕರಣದ ತನಿಖಾಧಿಕಾರಿಗಳು ಜಾಕ್ವೆಲಿನ್ ವಿರುದ್ಧವೂ ಎಫ್​​ಐಆರ್ ದಾಖಲಿಸದ್ದು, ವಿಚಾರಣೆ ಚಾಲ್ತಿಯಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ