Pushpa 3: ‘ಕೆಜಿಎಫ್​’ ರೀತಿ ಮೂರು ಪಾರ್ಟ್​ಗಳಲ್ಲಿ ಬರಲಿದೆ ‘ಪುಷ್ಪ’ ಸಿನಿಮಾ? ಫೈನಲ್ ಆಗಿದೆ ಶೀರ್ಷಿಕೆ

‘ಕೆಜಿಎಫ್ 2’ ಸಿನಿಮಾ ಬಂದು ಸೂಪರ್ ಹಿಟ್ ಆಗಿದೆ. ಈಗ ‘ಪುಷ್ಪ 2’ ಕೂಡ ಬರುತ್ತಿದೆ. ಇನ್ನೇನು ಕೆಲವೇ ವರ್ಷಗಳಲ್ಲಿ ‘ಕೆಜಿಎಫ್ 3’ ಆರಂಭ ಆಗಲಿದೆ. ಇದೇ ವೇಳೆ ಸುಕುಮಾರ್ ಕೂಡ ‘ಪುಷ್ಪ 3’ಗೆ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

Pushpa 3: ‘ಕೆಜಿಎಫ್​’ ರೀತಿ ಮೂರು ಪಾರ್ಟ್​ಗಳಲ್ಲಿ ಬರಲಿದೆ ‘ಪುಷ್ಪ’ ಸಿನಿಮಾ? ಫೈನಲ್ ಆಗಿದೆ ಶೀರ್ಷಿಕೆ
ಅಲ್ಲು ಅರ್ಜುನ್
Follow us
|

Updated on: Apr 21, 2023 | 6:30 AM

‘ಕೆಜಿಎಫ್ 2’ ಸಿನಿಮಾ ಕ್ಲೈಮ್ಯಾಕ್ಸ್​ನಲ್ಲಿ ಕಥೆ  ಪೂರ್ಣಗೊಂಡಿತು ಎಂದು ಎದ್ದು ಹೊರಟವರಿಗೆ ಸರ್​​ಪ್ರೈಸ್ ಸಿಕ್ಕಿತ್ತು. ‘ಕೆಜಿಎಫ್ 3’ ಸಿನಿಮಾ (KGF Chapter 3) ಕೂಡ ಬರಲಿದೆ ಎನ್ನುವ ವಿಚಾರ ಗೊತ್ತಾಯಿತು. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದರು. ಅಚ್ಚರಿ ವಿಚಾರ ಏನೆಂದರೆ ತೆಲುಗಿನ ಸೂಪರ್ ಹಿಟ್ ಸಿನಿಮಾಪುಷ್ಪ ಚಿತ್ರ ಕೂಡ ಮೂರು ಪಾರ್ಟ್​​ಗಳಲ್ಲಿ ಬರಲಿದೆಯಂತೆ! ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಸುಕುಮಾರ್​​ಗೆ (Sukumar) ‘ಕೆಜಿಎಫ್​’ ಸಿನಿಮಾ ಸರಣಿಯ ಚಿತ್ರಗಳು ಸ್ಫೂರ್ತಿಯೇ ಎನ್ನುವ ಪ್ರಶ್ನೆ ಮೂಡಿದೆ.

‘ಕೆಜಿಎಫ್​’ ಹಾಗೂ ‘ಪುಷ್ಪ’ ಸಿನಿಮಾ ಮಧ್ಯೆ ಒಂದು ಫೈಟ್ ಇತ್ತು. ಇದಕ್ಕೆ ಕಾರಣ ತೆಲುಗು ನಿರ್ದೇಶಕ ನೀಡಿದ ಹೇಳಿಕೆ. ‘ಪುಷ್ಪ’ ಬಗ್ಗೆ ಮಾತನಾಡಿದ್ದ ‘ಉಪ್ಪೇನಾ’ ನಿರ್ದೇಶಕ ಬುಚಿ ಬಾಬು, ‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್​ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ’ ಎಂದು ‘ಪುಷ್ಪ’ ರಿಲೀಸ್​ಗೂ ಮೊದಲೇ ಹೇಳಿದ್ದರು. ಇದರಿಂದ ‘ಕೆಜಿಎಫ್​’ ಹಾಗೂ ‘ಪುಷ್ಪ’ ಮಧ್ಯೆ ಸ್ಪರ್ಧೆ ಏರ್ಪಟ್ಟಿತ್ತು.

‘ಕೆಜಿಎಫ್ 2’ ಸಿನಿಮಾ ಬಂದು ಸೂಪರ್ ಹಿಟ್ ಆಗಿದೆ. ಈಗ ‘ಪುಷ್ಪ 2’ ಕೂಡ ಬರುತ್ತಿದೆ. ಇನ್ನೇನು ಕೆಲವೇ ವರ್ಷಗಳಲ್ಲಿ ‘ಕೆಜಿಎಫ್ 3’ ಆರಂಭ ಆಗಲಿದೆ. ಇದೇ ವೇಳೆ ಸುಕುಮಾರ್ ಕೂಡ ‘ಪುಷ್ಪ 3’ಗೆ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಮೊದಲ ಚಾಪ್ಟರ್​ಗೆ ‘ಪುಷ್ಪ: ದಿ ರೈಸ್​’ ಎಂದು ಹೆಸರು ಇಡಲಾಗಿತ್ತು. ಎರಡನೇ ಪಾರ್ಟ್​​ಗೆ ‘ಪುಷ್ಪ: ದಿ ರೂಲ್​’ ಹೆಸರು ಇಡಲಾಗಿದೆ. ಮೂರನೇ ಚಾಪ್ಟರ್​ಗೆ ‘ಪುಷ್ಪ: ದಿ ರೂಲ್ ಬಿಗಿನಿಂಗ್​’ ಎಂದು ಟೈಟಲ್ ಇಡುವ ಪ್ಲ್ಯಾನ್​​ನಲ್ಲಿ ಸುಕುಮಾರ್ ಇದ್ದಾರೆ.

ಇದನ್ನೂ ಓದಿ: ‘ಪುಷ್ಪ’ ಸಿನಿಮಾ ನಿರ್ದೇಶಕ, ನಿರ್ಮಾಪಕರಿಗೆ ಶಾಕ್​; ಮನೆ, ಕಚೇರಿ ಮೇಲೆ ಐಟಿ ದಾಳಿ

ಸದ್ಯ ಸುಕುಮಾರ್ ಅವರ ಸಂಪೂರ್ಣ ಗಮನ ‘ಪುಷ್ಪ 2’ ಚಿತ್ರದ ಮೇಲಿದೆ. ಈ ಸಿನಿಮಾ ಮುಗಿದ ಬಳಿಕ ಅಲ್ಲು ಅರ್ಜುನ್ ಬೇರೆ ಕಮಿಟ್​ಮೆಂಟ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಇದೆಲ್ಲವೂ ಮುಗಿದ ಬಳಿಕ ‘ಪುಷ್ಪ 3’ ಸಿನಿಮಾಗಳಲ್ಲಿ ಸುಕುಮಾರ್ ತೊಡಗಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ‘ಪುಷ್ಪ’ ನಿರ್ದೇಶಕ ಸುಕುಮಾರ್ ಹಾಗೂ ಈ ಚಿತ್ರದ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್​ ಕಚೇರಿ ಮೇಲೆ ಐಟಿ ದಾಳಿ ನಡೆದಿತ್ತು. ತೆರಿಗೆ ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದರಿಂದ ಈ ದಾಳಿ ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ