AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಕಥೆಯನ್ನು 2 ಪಾರ್ಟ್​ ಮಾಡೋಕೆ ಐಡಿಯಾ ಕೊಟ್ಟಿದ್ದು ಯಾರು? ಇಲ್ಲಿದೆ ಉತ್ತರ

ಒಂದು ಕಥೆಯನ್ನು ಎರಡು ಪಾರ್ಟ್​ಗಳಲ್ಲಿ ಸಿನಿಮಾ ಮಾಡುವ ಟ್ರೆಂಡ್ ಚಾಲ್ತಿಯಲ್ಲಿದೆ. ‘ಬಾಹುಬಲಿ 2’, ‘ಕೆಜಿಎಫ್​ 2’ ಮುಂತಾದ ಸಕ್ಸಸ್​ಫುಲ್​ ಸಿನಿಮಾಗಳೇ ಈ ಮಾತಿಗೆ ಉದಾಹರಣೆ. ಈಗ ‘ಪುಷ್ಪ 2’ ಸಿನಿಮಾ ಕೂಡ ಬರುತ್ತಿದೆ. ಸುಕುಮಾರ್​ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ. ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಸುಕುಮಾರ್​ ಅವರು ಮಾತನಾಡಿದ್ದಾರೆ.

‘ಪುಷ್ಪ’ ಕಥೆಯನ್ನು 2 ಪಾರ್ಟ್​ ಮಾಡೋಕೆ ಐಡಿಯಾ ಕೊಟ್ಟಿದ್ದು ಯಾರು? ಇಲ್ಲಿದೆ ಉತ್ತರ
ನಿರ್ದೇಶಕ ಸುಕುಮಾರ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Dec 03, 2024 | 8:07 PM

Share

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾ 2021ರಲ್ಲಿ ಬಿಡುಗಡೆ ಆಯಿತು. ಬ್ಲಾಕ್ ಬಸ್ಟರ್​ ಹಿಟ್ ಆದ ಆ ಸಿನಿಮಾದಲ್ಲಿ ಪ್ರೇಕ್ಷಕರಿಗೆ ತೋರಿಸಿರುವುದು ಅರ್ಧ ಕಥೆ ಮಾತ್ರ. ಇನ್ನುಳಿದ ಕಥೆಯನ್ನು 2ನೇ ಪಾರ್ಟ್​ನಲ್ಲಿ ಹೇಳಲಾಗುತ್ತಿದೆ. ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಡಿಸೆಂಬರ್​ 5ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ. ನಿರ್ದೇಶಕ ಸುಕುಮಾರ್​ ಅವರು ಸಾಕಷ್ಟು ಸಮಯ ತೆಗೆದುಕೊಂಡು ಈ ಸಿನಿಮಾವನ್ನು ಮಾಡಿದ್ದಾರೆ. ಸಿನಿಮಾದ ಪ್ರೀ-ರಿಲೀಸ್ ಇವೆಂಟ್​ ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆಯಿತು. ಆ ವೇದಿಕೆಯಲ್ಲಿ ಸುಕುಮಾರ್ ಅವರು ಒಂದು ವಿಷಯ ಹಂಚಿಕೊಂಡರು.

ಆರಂಭದಲ್ಲಿ ‘ಪುಷ್ಪ’ ಸಿನಿಮಾದ ಕಥೆ ಒಂದೇ ಪಾರ್ಟ್​ನಲ್ಲಿ ಮುಗಿಯುವಂತಿತ್ತು. ಆದರೆ ನಿರ್ದೇಶಕ ಸುಕುಮಾರ್​ ಅವರಿಗೆ ಒಂದು ಐಡಿಯಾ ಕೊಡಲಾಯಿತು. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಸಿಇಓ ಚೆರಿ ಅವರು 2 ಪಾರ್ಟ್​ ಮಾಡುವ ಐಡಿಯಾ ಕೊಟ್ಟರು. ಆ ಕಾರಣದಿಂದ ಸುಕುಮಾರ್​ ಅವರು ಈ ಸಿನಿಮಾದ ಕಥೆಯನ್ನು ವಿಸ್ತರಿಸಿದರು. ಮೊದಲ ಪಾರ್ಟ್​ ಸೂಪರ್​ ಹಿಟ್ ಆಯಿತು. ಎರಡನೇ ಪಾರ್ಟ್​ ಕೂಡ ಅದ್ದೂರಿಯಾಗಿ ಮೂಡಿಬಂದಿದೆ.

‘ಪುಷ್ಪ’ ಸೂಪರ್​ ಹಿಟ್ ಆಗಿದ್ದರಿಂದ ‘ಪುಷ್ಪ 2’ ಸಿನಿಮಾಗೆ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆಯು ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಿದೆ. ಈ ಸಿನಿಮಾದ ಬಿಡುಗಡೆಗೂ ಮುನ್ನವೇ ಬಹುಕೋಟಿ ರೂಪಾಯಿ ಬಿಸ್ನೆಸ್ ಆಗಿದೆ. ಜನರಿಗೆ ಇರುವ ನಿರೀಕ್ಷೆಯ ಮಟ್ಟವನ್ನು ಗಮನಿಸಿದರೆ ಬಾಕ್ಸ್ ಆಫೀಸ್​ನಲ್ಲಿ ಖಂಡಿತವಾಗಿಯೂ ‘ಪುಷ್ಪ 2’ ಸಿನಿಮಾ ಹೊಸ ಮೈಲಿಗಲ್ಲು ಸ್ಥಾಪಿಸಲಿದೆ.

ಇದನ್ನೂ ಓದಿ: ಲಂಡನ್​ ಬೀದಿಯಲ್ಲಿ ‘ಪುಷ್ಪ 2’ ಹಾಡಿಗೆ ಹೆಜ್ಜೆ ಹಾಕಿದ ಅಲ್ಲು ಅರ್ಜುನ್ ಫ್ಯಾನ್ಸ್

ಅಲ್ಲು ಅರ್ಜುನ್​ ಅವರ ವೃತ್ತಿಜೀವನದಲ್ಲಿ ‘ಪುಷ್ಪ 2’ ಸಿನಿಮಾ ಬಹಳ ಮಹತ್ವದ್ದಾಗಿದೆ. ಈ ಚಿತ್ರಕ್ಕಾಗಿ ಅವರು ಹಲವು ವರ್ಷಗಳ ಸಮಯವನ್ನು ಮೀಸಲಿಟ್ಟರು. ನಟಿ ರಶ್ಮಿಕಾ ಮಂದಣ್ಣ, ನಿರ್ದೇಶಕ ಸುಕುಮಾರ್​ ಮುಂತಾದವರು ಕೂಡ ಹೆಚ್ಚು ಸಮಯ ನೀಡಿದ್ದಾರೆ. ಅವರೆಲ್ಲರ ಶ್ರಮಕ್ಕೆ ಪ್ರತಿಫಲ ಸಿಗುವ ಸಮಯ ಈಗ ಬಂದಿದೆ. ಹಾಡುಗಳು ಸೂಪರ್​ ಹಿಟ್ ಆಗಿವೆ. ಟ್ರೇಲರ್​ ನೋಡಿದ ಪ್ರೇಕ್ಷಕರು ಥ್ರಿಲ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ