AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಂತ್​ ಅಕ್ಕಿನೇನಿ 2ನೇ ಮದುವೆ? ಲಗ್ನ ಪತ್ರಿಕೆ ವೈರಲ್​ ಆದ ಬಳಿಕ ಸ್ಪಷ್ಟನೆ ನೀಡಿದ ನಟ

ತೆಲುಗಿನ ಖ್ಯಾತ ನಟ ಅಕ್ಕಿನೇನಿ ನಾಗೇಶ್ವರ ರಾವ್​ ಅವರ ಮೊಮ್ಮಗ ಅಕ್ಕಿನೇನಿ ಸುಮಂತ್​. ಗೌರಿ, ಸತ್ಯಂ, ಮಳ್ಳಿರಾವ, ರಾಜ್​, ಕ್ಲಾಸ್​ಮೇಟ್ಸ್​, ಗೋದಾವರಿ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಸುಮಂತ್​ ಅಕ್ಕಿನೇನಿ 2ನೇ ಮದುವೆ? ಲಗ್ನ ಪತ್ರಿಕೆ ವೈರಲ್​ ಆದ ಬಳಿಕ ಸ್ಪಷ್ಟನೆ ನೀಡಿದ ನಟ
ಅಕ್ಕಿನೇನಿ ಸುಮಂತ್​
TV9 Web
| Edited By: |

Updated on: Jul 30, 2021 | 2:44 PM

Share

ಟಾಲಿವುಡ್​ ನಟ ಅಕ್ಕಿನೇನಿ ಸುಮಂತ್​ (Sumanth Akkineni) ಅವರ ಖಾಸಗಿ ಬದುಕಿಗೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಕಳೆದೆರಡು ದಿನಗಳಿಂದ ವೈರಲ್​ ಆಗುತ್ತಿದೆ. 2006ರಲ್ಲಿಯೇ ವಿಚ್ಛೇದನ ಪಡೆದುಕೊಂಡಿರುವ ಅವರು ಈಗ ಮತ್ತೆ ಎರಡನೇ ಮದುವೆ (Marriage) ಆಗುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಲ್ಲೂ ಹಬ್ಬಿತ್ತು. ಅದಕ್ಕೆ ಕಾರಣ ಆಗಿದ್ದು ಲಗ್ನ ಪತ್ರಿಕೆ. ಹೌದು, ಸುಮಂತ್​ ಅವರ ಎರಡನೇ ಮದುವೆಯದ್ದು ಎನ್ನಲಾದ ಆಹ್ವಾನ ಪತ್ರಿಕೆಯ ಫೋಟೋ ವೈರಲ್​ ಆಗಿತ್ತು. ಅದನ್ನು ನೋಡಿದ ಎಲ್ಲರೂ ಸುಮಂತ್​ಗೆ ಎರಡನೇ ಮದುವೆ ಆಗುತ್ತಿರುವುದು ನಿಜ ಎಂದೇ ಭಾವಿಸಿದ್ದರು. ಆದರೆ ಅದರ ಹಿಂದಿನ ಸತ್ಯ ಏನು ಎಂಬುದನ್ನು ಸ್ವತಃ ಸುಮಂತ್​ ಈಗ ವಿವರಿಸಿದ್ದಾರೆ.

ತೆಲುಗಿನ ಖ್ಯಾತ ನಟ ಅಕ್ಕಿನೇನಿ ನಾಗೇಶ್ವರ ರಾವ್​ ಅವರ ಮೊಮ್ಮಗ ಅಕ್ಕಿನೇನಿ ಸುಮಂತ್​. ಗೌರಿ, ಸತ್ಯಂ, ಮಳ್ಳಿರಾವ, ರಾಜ್​, ಕ್ಲಾಸ್​ಮೇಟ್ಸ್​, ಗೋದಾವರಿ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2004ರಲ್ಲಿ ನಟಿ ಕೀರ್ತಿ ರೆಡ್ಡಿ ಜೊತೆ ಅವರ ವಿವಾಹ ನೆರವೇರಿತ್ತು. ಆದರೆ ಎರಡೇ ವರ್ಷಕ್ಕೆ ಅವರಿಬ್ಬರ ಮದುವೆ ಮುರಿದುಬಿದ್ದಿತ್ತು. ಅಲ್ಲಿಂದೀಚೆಗೆ ಸುಮಂತ್​ ಇನ್ನೊಂದು ಮದುವೆ ಆಗಿರಲಿಲ್ಲ. ಈಗ ಅವರು ಮತ್ತೆ ಪವಿತ್ರಾ ಎಂಬುವವರ ಜೊತೆ ಹಸೆಮಣೆ ಏರುತ್ತಾರೆ ಎಂಬ ಗಾಳಿ ಸುದ್ದಿ ಕೇಳಿಬಂದಾಗ ಎಲ್ಲರಿಗೂ ಅಚ್ಚರಿ ಆಗಿದ್ದು ನಿಜ.

ಈ ಸುದ್ದಿ ಸ್ವತಃ ಸುಮಂತ್​ ಕಿವಿಗೂ ಬಿದ್ದಿದೆ. ಅದಕ್ಕೆ ಅವರು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ನಾನು ಎರಡನೇ ಮದುವೆ ಆಗುತ್ತಿಲ್ಲ. ಕಾಕತಾಳೀಯವೆಂದರೆ, ನನ್ನ ಮುಂದಿನ ಸಿನಿಮಾದ ಕಥೆ ಕೂಡ ವಿಚ್ಛೇದನ ಮತ್ತು ಮರುಮದುವೆಯ ಕುರಿತಾಗಿ ಇದೆ. ಆ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಒಂದು ಮದುವೆ ಆಹ್ವಾನ ಪತ್ರಿಕೆಯ ಫೋಟೋ ಲೀಕ್ ಆಗಿದೆ. ಬಹುಶಃ ಅದರಿಂದಲೇ ಇಷ್ಟೆಲ್ಲ ಅಪಾರ್ಥ ಆಗಿರಬಹುದು’ ಎಂದು ಅಕ್ಕಿನೇನಿ ಸುಮಂತ್​ ಹೇಳಿದ್ದಾರೆ.

ಸುಮಂತ್​ ಮದುವೆಯ ಗಾಳಿಸುದ್ದಿ ಹಬ್ಬುತ್ತಿದ್ದಂತೆಯೇ ಕಾಂಟ್ರವರ್ಸಿ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ಟ್ವೀಟ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಸುಮಂತ್​, ‘ನನ್ನ ಬಗ್ಗೆ ಇಷ್ಟೆಲ್ಲ ಕಾಳಜಿ ತೋರಿಸುತ್ತಿರುವ ರಾಮ್​ ಗೋಪಾಲ್​ ವರ್ಮಾ ಮತ್ತು ಆಸಕ್ತಿ ಹೊಂದಿರುವ ಎಲ್ಲರಿಗಾಗಿ ಈ ಸ್ಪಷ್ಟನೆ ನೀಡುತ್ತಿದ್ದೇನೆ’ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ಯುವರತ್ನ ನಟಿ ಸಾಯೆಶಾಗೆ ಮಗು ಜನಿಸಿದ ಬಳಿಕ ಗಂಡನಿಂದಾಗಿ ಮುಜುಗರ; ಪರಸ್ತ್ರೀ ಜೊತೆ ಆರ್ಯ ಲವ್ವಿಡವ್ವಿ?

ಐಶ್ವರ್ಯಾ ರೈ ಬಚ್ಚನ್​ ಮತ್ತೆ ಪ್ರೆಗ್ನೆಂಟ್​? ಫೋಟೋ ನೋಡಿ ಪ್ರಶ್ನೆ ಮಾಡಿದ ನೆಟ್ಟಿಗರು

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ