AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮಂತ್​ ಅಕ್ಕಿನೇನಿ 2ನೇ ಮದುವೆ? ಲಗ್ನ ಪತ್ರಿಕೆ ವೈರಲ್​ ಆದ ಬಳಿಕ ಸ್ಪಷ್ಟನೆ ನೀಡಿದ ನಟ

ತೆಲುಗಿನ ಖ್ಯಾತ ನಟ ಅಕ್ಕಿನೇನಿ ನಾಗೇಶ್ವರ ರಾವ್​ ಅವರ ಮೊಮ್ಮಗ ಅಕ್ಕಿನೇನಿ ಸುಮಂತ್​. ಗೌರಿ, ಸತ್ಯಂ, ಮಳ್ಳಿರಾವ, ರಾಜ್​, ಕ್ಲಾಸ್​ಮೇಟ್ಸ್​, ಗೋದಾವರಿ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಸುಮಂತ್​ ಅಕ್ಕಿನೇನಿ 2ನೇ ಮದುವೆ? ಲಗ್ನ ಪತ್ರಿಕೆ ವೈರಲ್​ ಆದ ಬಳಿಕ ಸ್ಪಷ್ಟನೆ ನೀಡಿದ ನಟ
ಅಕ್ಕಿನೇನಿ ಸುಮಂತ್​
TV9 Web
| Edited By: |

Updated on: Jul 30, 2021 | 2:44 PM

Share

ಟಾಲಿವುಡ್​ ನಟ ಅಕ್ಕಿನೇನಿ ಸುಮಂತ್​ (Sumanth Akkineni) ಅವರ ಖಾಸಗಿ ಬದುಕಿಗೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಕಳೆದೆರಡು ದಿನಗಳಿಂದ ವೈರಲ್​ ಆಗುತ್ತಿದೆ. 2006ರಲ್ಲಿಯೇ ವಿಚ್ಛೇದನ ಪಡೆದುಕೊಂಡಿರುವ ಅವರು ಈಗ ಮತ್ತೆ ಎರಡನೇ ಮದುವೆ (Marriage) ಆಗುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಲ್ಲೂ ಹಬ್ಬಿತ್ತು. ಅದಕ್ಕೆ ಕಾರಣ ಆಗಿದ್ದು ಲಗ್ನ ಪತ್ರಿಕೆ. ಹೌದು, ಸುಮಂತ್​ ಅವರ ಎರಡನೇ ಮದುವೆಯದ್ದು ಎನ್ನಲಾದ ಆಹ್ವಾನ ಪತ್ರಿಕೆಯ ಫೋಟೋ ವೈರಲ್​ ಆಗಿತ್ತು. ಅದನ್ನು ನೋಡಿದ ಎಲ್ಲರೂ ಸುಮಂತ್​ಗೆ ಎರಡನೇ ಮದುವೆ ಆಗುತ್ತಿರುವುದು ನಿಜ ಎಂದೇ ಭಾವಿಸಿದ್ದರು. ಆದರೆ ಅದರ ಹಿಂದಿನ ಸತ್ಯ ಏನು ಎಂಬುದನ್ನು ಸ್ವತಃ ಸುಮಂತ್​ ಈಗ ವಿವರಿಸಿದ್ದಾರೆ.

ತೆಲುಗಿನ ಖ್ಯಾತ ನಟ ಅಕ್ಕಿನೇನಿ ನಾಗೇಶ್ವರ ರಾವ್​ ಅವರ ಮೊಮ್ಮಗ ಅಕ್ಕಿನೇನಿ ಸುಮಂತ್​. ಗೌರಿ, ಸತ್ಯಂ, ಮಳ್ಳಿರಾವ, ರಾಜ್​, ಕ್ಲಾಸ್​ಮೇಟ್ಸ್​, ಗೋದಾವರಿ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2004ರಲ್ಲಿ ನಟಿ ಕೀರ್ತಿ ರೆಡ್ಡಿ ಜೊತೆ ಅವರ ವಿವಾಹ ನೆರವೇರಿತ್ತು. ಆದರೆ ಎರಡೇ ವರ್ಷಕ್ಕೆ ಅವರಿಬ್ಬರ ಮದುವೆ ಮುರಿದುಬಿದ್ದಿತ್ತು. ಅಲ್ಲಿಂದೀಚೆಗೆ ಸುಮಂತ್​ ಇನ್ನೊಂದು ಮದುವೆ ಆಗಿರಲಿಲ್ಲ. ಈಗ ಅವರು ಮತ್ತೆ ಪವಿತ್ರಾ ಎಂಬುವವರ ಜೊತೆ ಹಸೆಮಣೆ ಏರುತ್ತಾರೆ ಎಂಬ ಗಾಳಿ ಸುದ್ದಿ ಕೇಳಿಬಂದಾಗ ಎಲ್ಲರಿಗೂ ಅಚ್ಚರಿ ಆಗಿದ್ದು ನಿಜ.

ಈ ಸುದ್ದಿ ಸ್ವತಃ ಸುಮಂತ್​ ಕಿವಿಗೂ ಬಿದ್ದಿದೆ. ಅದಕ್ಕೆ ಅವರು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ನಾನು ಎರಡನೇ ಮದುವೆ ಆಗುತ್ತಿಲ್ಲ. ಕಾಕತಾಳೀಯವೆಂದರೆ, ನನ್ನ ಮುಂದಿನ ಸಿನಿಮಾದ ಕಥೆ ಕೂಡ ವಿಚ್ಛೇದನ ಮತ್ತು ಮರುಮದುವೆಯ ಕುರಿತಾಗಿ ಇದೆ. ಆ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಒಂದು ಮದುವೆ ಆಹ್ವಾನ ಪತ್ರಿಕೆಯ ಫೋಟೋ ಲೀಕ್ ಆಗಿದೆ. ಬಹುಶಃ ಅದರಿಂದಲೇ ಇಷ್ಟೆಲ್ಲ ಅಪಾರ್ಥ ಆಗಿರಬಹುದು’ ಎಂದು ಅಕ್ಕಿನೇನಿ ಸುಮಂತ್​ ಹೇಳಿದ್ದಾರೆ.

ಸುಮಂತ್​ ಮದುವೆಯ ಗಾಳಿಸುದ್ದಿ ಹಬ್ಬುತ್ತಿದ್ದಂತೆಯೇ ಕಾಂಟ್ರವರ್ಸಿ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ಟ್ವೀಟ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಸುಮಂತ್​, ‘ನನ್ನ ಬಗ್ಗೆ ಇಷ್ಟೆಲ್ಲ ಕಾಳಜಿ ತೋರಿಸುತ್ತಿರುವ ರಾಮ್​ ಗೋಪಾಲ್​ ವರ್ಮಾ ಮತ್ತು ಆಸಕ್ತಿ ಹೊಂದಿರುವ ಎಲ್ಲರಿಗಾಗಿ ಈ ಸ್ಪಷ್ಟನೆ ನೀಡುತ್ತಿದ್ದೇನೆ’ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ಯುವರತ್ನ ನಟಿ ಸಾಯೆಶಾಗೆ ಮಗು ಜನಿಸಿದ ಬಳಿಕ ಗಂಡನಿಂದಾಗಿ ಮುಜುಗರ; ಪರಸ್ತ್ರೀ ಜೊತೆ ಆರ್ಯ ಲವ್ವಿಡವ್ವಿ?

ಐಶ್ವರ್ಯಾ ರೈ ಬಚ್ಚನ್​ ಮತ್ತೆ ಪ್ರೆಗ್ನೆಂಟ್​? ಫೋಟೋ ನೋಡಿ ಪ್ರಶ್ನೆ ಮಾಡಿದ ನೆಟ್ಟಿಗರು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?