AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಕಾಯಿಲೆ ಹಾಗೂ ನಿರುದ್ಯೋಗಕ್ಕೆ ರೋಸಿಹೋದ ಕಿರುತೆರೆ ನಟಿ; ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ

ಸುಮೊನಾ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಎಲ್ಲವನ್ನೂ ವಿವರಿಸಿದ್ದಾರೆ. ನನಗೆ ನಿರುದ್ಯೋಗ ತುಂಬಾನೇ ಕಾಡುತ್ತಿದೆ ಎಂದಿದ್ದಾರೆ.

ವಿಚಿತ್ರ ಕಾಯಿಲೆ ಹಾಗೂ ನಿರುದ್ಯೋಗಕ್ಕೆ ರೋಸಿಹೋದ ಕಿರುತೆರೆ ನಟಿ; ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ
ಸುಮೋನಾ ಚಕ್ರವರ್ತಿ
ರಾಜೇಶ್ ದುಗ್ಗುಮನೆ
|

Updated on: May 15, 2021 | 9:55 PM

Share

ಸೆಲೆಬ್ರಿಟಿಗಳು ಎಂದಾಕ್ಷಣ ಅವರ ಬಳಿ ಸಾಕಷ್ಟು ಹಣ ಇರುತ್ತದೆ. ಅವರ ಲೈಫ್​ ಬಿಂದಾಸ್​ ಆಗಿರುತ್ತದೆ ಎಂಬುದು ಅನೇಕರ ನಂಬಿಕೆ. ಆದರೆ, ಎಲ್ಲಾ ಸೆಲೆಬ್ರಿಟಿಗಳ ಲೈಫ್​ ಅದೇ ರೀತಿ ಇರುವುದಿಲ್ಲ ಎಂಬುದು ಅನೇಕರಿಗೆ ಗೊತ್ತಿರುವುದಿಲ್ಲ. ಈಗ ಇದಕ್ಕೆ ತಾಜಾ ಉದಾಹರಣೆ ಹಿಂದಿ ಕಿರುತೆರೆ ನಟಿ ಸುಮೋನಾ ಚಕ್ರವರ್ತಿ. ‘ಕಪಿಲ್​ ಶರ್ಮಾ ಶೋ’ ಮೂಲಕ ಹೆಚ್ಚು ಪರಿಚಿತರಾದ ಇವರಿಗೆ ನಿರುದ್ಯೋಗ ಕಾಡುತ್ತಿದೆ. 2011ರಿಂದ ಎಂಡೊಮೆಟ್ರಿಯೊಸಿಸ್ ಹೆಸರಿನ ಅಪರೂಪದ ರೋಗದಿಂದ ಬಳಲುತ್ತಿರುವ ಬಗ್ಗೆ ಅವರು ಅಳಲು ತೋಡಿಕೊಂಡಿದ್ದಾರೆ.

ಸುಮೊನಾ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಎಲ್ಲವನ್ನೂ ವಿವರಿಸಿದ್ದಾರೆ. ‘ನಾನು ನಿರುದ್ಯೋಗಿ ಇರಬಹುದು ಮತ್ತು ಸದ್ಯ, ನನ್ನ ಕುಟುಂಬವನ್ನು ನೋಡಿಕೊಳ್ಳಲು ಆಗುತ್ತಿರುಬಹುದು. ಆದರೆ, ಕೆಲವೊಮ್ಮೆ ನನಗೆ ತಪ್ಪಿತಸ್ಥ ಭಾವನೆ ಕಾಡುತ್ತದೆ. ನನಗಿರುವ ಸಮಸ್ಯೆಯಿಂದ ಮೂಡ್​ ಸ್ವಿಂಗ್​ ಆಗುತ್ತದೆ. ನಾನು ಎಂಡೊಮೆಟ್ರಿಯೊಸಿಸ್ ರೋಗದ ನಾಲ್ಕನೇ ಹಂತದಲ್ಲಿದ್ದೇನೆ. ಕಳೆದ 10 ವರ್ಷದಿಂದ ಇದೇ ರೋಗದಿಂದ ಬಳಲುತ್ತಿದ್ದೇನೆ. ಉತ್ತಮ ಆಹಾರ ಅಭ್ಯಾಸ, ವ್ಯಾಯಾಮ ಹಾಗೂ ಒತ್ತಡಕ್ಕೆ ಒಳಗಾಗದೆ ಇರುವುದು ನನ್ನ ಆರೋಗ್ಯವನ್ನು ಕಾಪಾಡುತ್ತಿದೆ’ ಎಂದಿದ್ದಾರೆ ಅವರು.

ಕೊರೊನಾ ಕಾರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದರಿಂದ ಸುಮೊನಾಗೆ ಸಮಸ್ಯೆ ಉಂಟಾಗುತ್ತಿದೆಯಂತೆ. ‘ಲಾಕ್‌ಡೌನ್​ನಿಂದ ನನಗೆ ಭಾವನಾತ್ಮಕವಾಗಿ ಕಷ್ಟವಾಗುತ್ತಿದೆ. COVID-19 ನಿಂದ ಉಂಟಾದ ಲಾಕ್‌ಡೌನ್‌ನಲ್ಲಿ ನಾನು ಕಳೆದ ವರ್ಷದಿಂದ ನಿರುದ್ಯೋಗಿಯಾಗಿದ್ದೇನೆ. ಯಾವುದೇ ಕೆಲಸವಿಲ್ಲದಿದ್ದರೂ, ನಿತ್ಯದ ಖರ್ಚಿಗೆ ಸಾಕಾಗುವಷ್ಟು ಹಣವಿದೆ ಎಂದಿದ್ದಾರೆ.

ಸುಮೋನಾ ಇತ್ತೀಚೆಗೆ ಅಂಡಮಾನ್​-ನಿಕೋಬಾರ್​ ಐಸ್​ಲೆಂಡ್​ಗೆ ತೆರಳಿದ್ದರು. ಅಲ್ಲಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅವರು ಹಂಚಿಕೊಂಡಿದ್ದರು. ಈ ಫೋಟೋ ಸಾಕಷ್ಟು ವೈರಲ್​ ಆಗಿತ್ತು. ಕಪಿಲ್​ ಶರ್ಮಾ ನಡೆಸಿಕೊಡುವ ‘ಕಪಿಲ್​ ಶರ್ಮಾ ಶೋ’ನಲ್ಲಿ ಸುಮೋನಾ ಕಾಣಿಸಿಕೊಂಡಿದ್ದರು. ಅವರಿಗೆ ಒಳ್ಳೆಯ ಫೇಮ್​ ತಂದುಕೊಟ್ಟಿತ್ತು. ‘ಬಡೇ ಅಚ್ಚೇ ಲಗ್ತೇ ಹೈ’ ಸೇರಿ ಸಾಕಷ್ಟು ಧಾರಾವಾಹಿಗಳಲ್ಲಿ ಸುಮೋನು ನಟಿಸಿದ್ದಾರೆ.

ಇದನ್ನೂ ಓದಿ: Remdesivir: ರೆಮಿಡಿಸಿವರ್ ಇಂಜೆಕ್ಷನ್​ಗೆ ಬಾಲಿವುಡ್ ಕೊರಿಯೋಗ್ರಾಫರ್​ ಹೆಸರು; ಫನ್ನಿ ವಿಡಿಯೋ ವೈರಲ್​

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ